ಕತ್ತು ಸೀಳಿ ವ್ಯಕ್ತಿಯ ಕೊಲೆ – ಬೇರೆಡೆ ಹತ್ಯೆ ಮಾಡಿ ಶವ ತಂದು ಬಿಸಾಡಿರುವ ಶಂಕೆ

Public TV
1 Min Read
NML MURDER 1

ಬೆಂಗಳೂರು: ಕತ್ತು ಸೀಳಿ ವ್ಯಕ್ತಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಕೆಂಪಲಿಂಗನಹಳ್ಳಿ ಬಳಿ ನಡೆದಿದೆ.

ಈ ಘಟನೆ ಬಿಪಿ ಇಂಡಿಯನ್ ಖಾಸಗಿ ಶಾಲೆಯ ಬಳಿಯ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಸುಮಾರು 40 ವರ್ಷದವರಾಗಿದ್ದು, ಗುರುತು ಪತ್ತೆಯಾಗಿಲ್ಲ. ಬೇರೆಡೆ ಕೊಲೆ ಮಾಡಿ ಇಲ್ಲಿ ಶವವನ್ನು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಓಡಾಡುವಾಗ ವ್ಯಕ್ತಿಯ ಶವ ಕಂಡು ತಕ್ಷಣ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ಮಾಡಿ ಮೃತದೇಹವನ್ನು ಶವಗಾರಕ್ಕೆ ರವಾನಿಸಿದ್ದಾರೆ. ಈ ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *