ಬೆಂಗಳೂರು: ನಗರದಲ್ಲಿ ಹೈಟೆನ್ಷನ್ ತಂತಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಗರದ ಮತ್ತಿಕೆರೆಯ ಮಂಜುನಾಥ ನಗರದಲ್ಲಿ ನಡೆದಿದೆ.
ಸತೀಶ್ (23) ಸಾವನ್ನಪ್ಪಿದ ಕಾರ್ಮಿಕ. ಸತೀಶ್ ಮಂಜುನಾಥ ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು. ಮೇ 27ರಂದು ಸತೀಶ್ ಮೊದಲನೇ ಮಹಡಿಯಲ್ಲಿ ಕಾಂಕ್ರೀಟ್ ಹಾಕುತ್ತಿದ್ದರು.
- Advertisement 2
ಈ ವೇಳೆ ಕಟ್ಟಡದಲ್ಲಿ ಹಾದುಹೋಗಿದ್ದ ಹೈಟೆನ್ಷನ್ ವೈರ್ ಗೆ ಕಬ್ಬಿಣದ ಸರಳುಗಳು ತಗುಲಿದೆ. ಪರಿಣಾಮ ಸತೀಶ್ಗೆ ವಿದ್ಯುತ್ ಸ್ಪರ್ಶಿಸಿ ಶೇ.80 ಸುಟ್ಟು ಗಾಯಗೊಂಡಿದ್ದರು. ಕೂಡಲೇ ಗಾಯಾಳು ಸತೀಶ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸತೀಶ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
- Advertisement 3
- Advertisement 4
ನಿರ್ಲಕ್ಷ್ಯದ ಅಡಿಯಲ್ಲಿ ಕಟ್ಟಡ ಮಾಲೀಕನ ವಿರುದ್ಧ ದೂರು ದಾಖಲಾಗಿದೆ. ಕಟ್ಟಡ ಮಾಲೀಕ ಜಯಕುಮಾರ್ ಹಾಗೂ ಮೇಸ್ತ್ರಿ ರಾಮಚಂದ್ರ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಸವೇಶ್ವರನಗರ ಪೊಲೀಸರು ಮಾಲೀಕ ಹಾಗೂ ಮೇಸ್ತ್ರಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.
ಈ ಮೂಲಕ ನಾಲ್ಕು ತಿಂಗಳಲ್ಲಿ ವಿದ್ಯುತ್ ಅವಘಡಕ್ಕೆ ಸಾವನ್ನಪ್ಪಿದ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.