– ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಕೃಷಿ ವಿವಿ
ಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯದ (Dharwad Agriculture University) ಕೃಷಿ ಮೇಳದಲ್ಲಿ (Krishi Mela) ವ್ಯಕ್ತಿಯೊಬ್ಬರ ಮೇಲೆ ಟ್ರ್ಯಾಕ್ಟರ್ ವಾಹನ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಪರಶುರಾಮ.ಎಂ (60) ಮೃತ ದುರ್ದೈವಿ. ಕೃಷಿ ಮೇಳದಲ್ಲಿ ಪ್ರದರ್ಶನಕ್ಕೆ ತಂದಿದ್ದ ಟ್ರ್ಯಾಕ್ಟರ್ ಅನ್ನು ಕ್ಯಾಂಟರ್ ಲಾರಿಯಿಂದ ಇಳಿಸುತ್ತಿದ್ದ ವೇಳೆ ವ್ಯಕ್ತಿಯ ಮೈಮೇಲೆ ಬಿದ್ದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೃಷಿ ಮೇಳದ ಮೊದಲನೇ ದಿನವೇ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ರಾತ್ರಿ ಮಲಗಿದ್ದಾಗ ಕಣ್ಣಿಗೆ ಫೆವಿಕ್ವಿಕ್ ಅಂಟು – ಬೆಳಗ್ಗೆ ಕಣ್ಣು ತೆರೆಯಲಾಗದೇ ಒದ್ದಾಡುತ್ತಿದ್ದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಕೃಷಿ ವಿವಿ ಕುಲಪತಿಯವರಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ಘಟನೆಯ ಬಗ್ಗೆ ತನಿಖೆ ನಡೆದಿದೆ. ಸ್ಟಾಲ್ ಹಾಕಿದವರ ಬಗ್ಗೆ ಹಾಗೂ ಕೃಷಿ ವಿವಿ ಮೇಲೆ ಅಸಮಾಧಾದ ಕೂಡಾ ಇದೆ. ಸ್ವಲ್ಪ ಅಜಾಗರೂಕತೆ ಕಂಡುಬಂದಿದ್ದು, ಸರಿಯಾಗಿ ಟ್ರ್ಯಾಕ್ಟರ್ ಇಳಿಸಲು ಜಾಗ ಇರದ ಕಾರಣ ಘಟನೆ ನಡೆದಿದೆ ಎಂದಿದ್ದಾರೆ. ಇದನ್ನೂ ಓದಿ: ಟೀ ಚೆನ್ನಾಗಿಲ್ಲ ಎಂದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಫ್ಲಾಸ್ಕ್ನಿಂದ ಹಲ್ಲೆ
ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮೃತನ ಸಂಬಂಧಿಕರು ಹಾಗೂ ಕೆಲ ಸ್ಥಳೀಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿ, ಶವ ಮೇಲೆತ್ತಲು ಬಿಟ್ಟಿರಲಿಲ್ಲ. ಪ್ರತಿಭಟನೆಗೆ ಮಣಿದ ಕೃಷಿ ವಿಶ್ವವಿದ್ಯಾಲಯವು ಮೃತನ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರದ ಚೆಕ್ ನೀಡಿದೆ.
ಬಳಿಕ ಪೊಲೀಸರು ಮೃತದೇಹವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಿದರು. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.