ಲಕ್ನೋ: ಗುಂಪೊಂದು ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಜೈ ಶ್ರೀರಾಮ್ ಹಾಗೂ ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಲು ಒತ್ತಾಯಿಸಿದ ಘಟನೆ ಮಥುರಾದಲ್ಲಿ ನಡೆದಿದೆ.
ಮುಬಿನ್ ಅಹ್ಮದ್ ಎಂಬಾತ ಹಸುವಿಗಾಗಿ ಧರ್ಮಪುರ ಕಾಲುವೆಯ ಬಳಿಯ ಪ್ರದೇಶದಲ್ಲಿ ಮೇವನ್ನು ಹುಡುಕುತ್ತಿದ್ದಾಗ ಈ ಘಟನೆ ನಡೆದಿದೆ. ಗುಂಪೊಂದು ಮುಬಿನ್ ಅವರನ್ನು ಅಡ್ಡಗಟ್ಟಿದೆ. ಈ ವೇಳೆ ಮುಬಿನ್ನ್ನು ಜೈ ಶ್ರೀರಾಮ್ ಹಾಗೂ ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ. ಅಷ್ಟೇ ಅಲ್ಲದೇ ಮುಬಿನ್ನ್ನು ಅವರು ದೇಶದ್ರೋಹಿ ಹಾಗೂ ಉದಯಪುರದಲ್ಲಿ ಕನ್ಹಯ್ಯ ಲಾಲ್ ಹತ್ಯೆಗೆ ಕಾರಣರಾದವರು ಎಂದು ಅವಮಾನಿಸಿದ್ದಾರೆ. ಅಷ್ಟೇ ಅಲ್ಲದೇ ಇದೆಲ್ಲವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಘಟನೆ ಸಂಬಂಧಿಸಿ ಮುಬಿನ್ ಅಹ್ಮದ್ ಮಥುರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ. ವೀಡಿಯೋದ ಆಧಾರದ ಮೇಲೆ ಮಥುರಾ ಪೊಲೀಸರು ಈಗಾಗಲೇ ಓರ್ವನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವ ಮಾದರಿಯಲ್ಲೇ ಶಿವಕುಮಾರೋತ್ಸವ ಮಾಡಿ – ಡಿಕೆಶಿ ಶಿಷ್ಯನಿಂದ ಪತ್ರ
ತನ್ನ ಗ್ರಾಮದಲ್ಲಿ ಸಹೋದರತ್ವದ ಮನೋಭಾವವನ್ನು ಕಾಪಾಡಿಕೊಳ್ಳಲು ಬಯಸಿದ ಕಾರಣ ತನ್ನನ್ನು ನಿಂದಿಸಿದ ಗುಂಪಿನ ಯಾವುದೇ ಬೇಡಿಕೆಗಳನ್ನು ವಿರೋಧಿಸಿಲ್ಲ. ಆದರೆ ಅವರು ಘಟನೆಯ ವೀಡಿಯೋವನ್ನು ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ತಿಳಿದಾಗ ಅವರ ವಿರುದ್ಧ ದೂರು ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಬಿನಿಯಿಂದ 38 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ- 50ಕ್ಕೂ ಹೆಚ್ಚು ಹಳ್ಳಿಗಳ ಪ್ರಮುಖ ಮಾರ್ಗ ಬಂದ್