Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನವಭಾರತದ ನಿರ್ಮಾಣದಲ್ಲಿ ಮನ್ ಕೀ ಬಾತ್ ಹೆಚ್ಚು ಸಹಾಯಕಾರಿ: ಪ್ರಧಾನಿ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನವಭಾರತದ ನಿರ್ಮಾಣದಲ್ಲಿ ಮನ್ ಕೀ ಬಾತ್ ಹೆಚ್ಚು ಸಹಾಯಕಾರಿ: ಪ್ರಧಾನಿ ಮೋದಿ

Latest

ನವಭಾರತದ ನಿರ್ಮಾಣದಲ್ಲಿ ಮನ್ ಕೀ ಬಾತ್ ಹೆಚ್ಚು ಸಹಾಯಕಾರಿ: ಪ್ರಧಾನಿ ಮೋದಿ

Public TV
Last updated: November 16, 2017 1:42 pm
Public TV
Share
2 Min Read
modi mann ki baat
SHARE

ನವದೆಹಲಿ: ಕನಸಿನ ನವ ಭಾರತದ ನಿರ್ಮಾಣದಲ್ಲಿ ಮನ್ ಕೀ ಬಾತ್ ಕಾರ್ಯಕ್ರಮ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

mann ki baat1

36ನೇ ಮನ್ ಕೀ ಬಾತ್ ಆಕಾಶವಾಣಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾನಾಡಿದ ಅವರು, ಸರ್ಕಾರದ ಆಡಳಿತದಲ್ಲಿ ಜನ ಸಾಮಾನ್ಯರ ಸಲಹೆಗಳನ್ನು ಪಡೆದು ನವಭಾರತದ ಕನಸಿಗೆ ಮಾರ್ಗದರ್ಶನವಾಗಿ ರೂಪುಗೊಂಡಿರುವ ಮನ್ ಕಿ ಬಾತ್ ಕಾರ್ಯಕ್ರಮ ಸರ್ಕಾರದ ಉತ್ತಮ ಕ್ರಮವಾಗಿದೆ ಎಂದು ಹೇಳಿದರು.

ಮನ್ ಕಿ ಬಾತ್ ಕಾರ್ಯಕ್ರಮವಾಗಿ ಆರಂಭವಾಗಿ ಮೂರು ವರ್ಷಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ಜನರ ಹೊಸ ಚಿಂತನೆಗಳು ಹಾಗೂ ಸಲಹೆಗಳನ್ನು ಪಡೆಯಲು ಕಾರ್ಯಕ್ರಮ ಹೆಚ್ಚು ಸಹಾಕಾರಿಯಾಗಿದೆ. ಅಚಾರ್ಯ ವಿನೋಬ ಭಾವೆಯವರ `ಎ-ಸರ್ಕಾರಿ ಇಸ್ ಅಸರ್ಕಾರಿ’ ಎಂಬ ಮಾತು ನನಗೆ ಸದಾ ನನಗೆ ನೆನಪಿದೆ. ಅಂದರೆ, ಸರ್ಕಾರದ ಪರಿಭಾಷೆಯಿಂದ ಹೊರಗಿರುವ ಯಾವುದಾದರು ಪರಿಣಾಮಕಾರಿಯಾಗಿರುತ್ತದೆ ಎಂಬ ಅರ್ಥವನ್ನು ನೀಡುತ್ತದೆ. ಈ ಕಾರ್ಯವನ್ನು ನಾನು ಮನ್ ಕೀ ಬಾತ್ ಕಾರ್ಯಕ್ರಮದ ಮೂಲಕ ಇದನ್ನು ಸಾಧ್ಯವಾಗಿಸಿ, ದೇಶದ ಪ್ರತಿ ಪ್ರಜೆಯನ್ನು ಕೇಂದ್ರವಾಗಿ ಮಾಡಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ತಿಳಿಸಿದರು.

modi mann ki baat 2

ಕಳೆದ ಮೂರು ವರ್ಷಗಳಲ್ಲಿ ಪ್ರಪಂಚಕ್ಕೆ ಭಾರತದ ಶಕ್ತಿಯನ್ನು ಪ್ರದರ್ಶಿಸುವ ವೇದಿಕೆಯಾಗಿ ಮನ್ ಕೀ ಬಾತ್ ಕಾರ್ಯನಿರ್ವಹಿಸಿದೆ. ಪ್ರಧಾನಿ ಈ ಕಾರ್ಯಕ್ರಮದ ಮೂಲಕ ಸ್ವಚ್ಛ ಭಾರತ ಅಭಿಯಾನ, ಮಹಿಳಾ ಸಬಲೀಕರಣ, ಹಾಗೂ ಸರ್ಕಾರವು ಕಾರ್ಯನಿರ್ವಹಿಸ ಬೇಕಾದ ವಿಧಾನಗಳ ಬಗ್ಗೆ ಜನರಿಂದ ಸಲಹೆ, ಅಭಿಪ್ರಾಯಗಳನ್ನು ಪಡೆದಿದ್ದಾರೆ. ಅಲ್ಲದೇ ಉತ್ತಮ ಸಲಹೆಗಳನ್ನು ನೀಡಿರುವ ಜನರನ್ನು ಪ್ರತ್ಯೇಕವಾಗಿ ಅಭಿನಂದಿಸಿದ್ದಾರೆ.

ಈ ಬಾರಿಯ ಭಾಷಣದಲ್ಲಿ ಕಾಶ್ಮೀರದ ಬಿಲಾಲ್ ದಾರ್(18) ಎಂಬ ಯುವಕ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿರುವ ಕುರಿತು ಪ್ರಸ್ತಾಪಿಸಿದರು. ಬಿಲಾಲ್‍ನನ್ನು ಶ್ರೀನಗರ ಸ್ವಚ್ಛತ ಅಭಿಯಾನದ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಯುವಕ ದಾಲ್ ಸರೋವರವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಸುಮಾರು 12 ಟನ್ ಕಸವನ್ನು ಸಂಗ್ರಹಿಸಿದ್ದ ಎಂದು ಹೊಗಳಿದರು. ಅಷ್ಟೇ ಅಲ್ಲದೇ ಈ ಮೂಲಕ ದೇಶದ ಮಾದರಿ ವ್ಯಕ್ತಿಯಾಗಿದ್ದಾನೆ ಎಂದು ಹೇಳಿದರು.

ಅಲ್ಲದೆ ಈ ತಮ್ಮ ಕಾರ್ಯಕ್ಕಾಗಿ ಬೆಂಬಲವನ್ನು ನೀಡಿರುವ ಮುದ್ರಣ ಮಾಧ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ಧನ್ಯವಾದಗಳನ್ನು ತಿಳಿಸಿದರು. ಗಾಂಧಿ ಜಯಂತಿಯ ಅಂಗವಾಗಿ ಎಲ್ಲರೂ ಖಾದೀ ಬಟ್ಟೆಗಳನ್ನು ಕೊಳ್ಳುವಂತೆ ಮನವಿ ಮಾಡಿಕೊಂಡ ಮೋದಿ ಈ ಕಾರ್ಯದಿಂದ ಹಲವು ಬಡ ಖಾದಿ ತಯಾರಿಕರಿಗೆ ಸಹಾಯವನ್ನು ಮಾಡಿದಂತೆ ಆಗುತ್ತದೆ. ಇಂತಹ ಬಡ ಮನೆಗಳಲ್ಲಿ ದೀಪವನ್ನು ಹಚ್ಚುವ ಕಾರ್ಯವನ್ನು ಮಾಡಬೇಕಿದೆ ಎಂದರು.

ತಮ್ಮ ಆಪ್, ಇ-ಮೇಲ್, ಮೊಬೈಲ್ ಮತ್ತು ಹಲವು ಸಾಮಾಜಿಕ ಜಾಲತಾಣಗಾಳ ಮೂಲಕ ಮಹತ್ವ ಮಾಹಿತಿಯನ್ನು ಪಡೆದುಕೊಂಡಿರುವುದಾಗಿ ತಿಳಿಸಿದ ಮೋದಿ ಈ ಮಾಹಿತಿ, ಸಲಹೆಗಳನ್ನು ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

ಈ ವರ್ಷದ ಸ್ವಾತಂತ್ರ್ಯ ದಿನಚಾರಣೆ ದಿನದಂದು ಪ್ರಸ್ತಾಪಿಸ ಬೇಕಾದ ಅಂಶಗಳ ಕುರಿತು ಮಾಹಿತಿ ನೀಡಿ ಎಂದು ಪ್ರಧಾನಿಗಳು ಸಲಹೆಗಳನ್ನು ಕೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಸುಮಾರು 8 ಸಾವಿರ ಪ್ರತಿಕ್ರಿಯೆಗಳು ಲಭಿಸಿದ್ದವು. ಅಲ್ಲದೆ ಕಡಿಮೆ ಅವಧಿಯ ಭಾಷಣವನ್ನು ಮಾಡುವಂತೆ ಬಂದ ಕೋರಿಕೆಗೆ ಸ್ಪಂದಿಸಿದ ಅವರು ತಮ್ಮ ಭಾಷಣದ ಅವಧಿಯನ್ನು ಕಡಿಮೆ ಮಾಡಿದ್ದರು.

TAGGED:36 ನೇ ಅವೃತ್ತಿ36th editionmann ki baatNew Delhiprime minister narendra modiPublic TVನವದೆಹಲಿಪಬ್ಲಿಕ್ ಟಿವಿಪ್ರಧಾನಿ ಮೋದಿಮನ್ ಕಿ ಬಾತ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
1 minute ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
12 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
32 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
40 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
52 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?