Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆನ್‌ಲೈನ್‌ ಜೂಜಾಟದಿಂದ ಬಂತು 11 ಕೋಟಿ – ಆ ಹಣಕ್ಕಾಗಿ ಸ್ನೇಹಿತನನ್ನೇ ಕಿಡ್ನ್ಯಾಪ್‌ಗೈದವರು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಆನ್‌ಲೈನ್‌ ಜೂಜಾಟದಿಂದ ಬಂತು 11 ಕೋಟಿ – ಆ ಹಣಕ್ಕಾಗಿ ಸ್ನೇಹಿತನನ್ನೇ ಕಿಡ್ನ್ಯಾಪ್‌ಗೈದವರು ಅರೆಸ್ಟ್‌

Dharwad

ಆನ್‌ಲೈನ್‌ ಜೂಜಾಟದಿಂದ ಬಂತು 11 ಕೋಟಿ – ಆ ಹಣಕ್ಕಾಗಿ ಸ್ನೇಹಿತನನ್ನೇ ಕಿಡ್ನ್ಯಾಪ್‌ಗೈದವರು ಅರೆಸ್ಟ್‌

Public TV
Last updated: August 10, 2022 3:59 pm
Public TV
Share
2 Min Read
2000 notes reuters l
SHARE

ಹುಬ್ಬಳ್ಳಿ: ಆನ್‌ಲೈನ್‌ ಜೂಜಾಟದಿಂದ 11 ಕೋಟಿ ಗೆದ್ದ ಸ್ನೇಹಿತನನ್ನೇ ಅಪಹರಣಗೈದ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಆನ್‌ಲೈನ್ ಜೂಜಾಟದ ಅಪ್ಲಿಕೇಶನ್‌ಗಳು ಹೆಚ್ಚಾಗಿದ್ದು, ಈ ಆಪ್‌ಗಳಲ್ಲಿ ದಿನಕ್ಕೆ ನೂರು ರೂಪಾಯಿಯಿಂದ ಕೋಟಿ ರೂಪಾಯಿ ಗೆಲ್ಲುವವರು ಇದ್ದಾರೆ. ಅದೇ ತರಹ ಸೋಲುವವರು ಇದ್ದಾರೆ. ಆದರೆ ಹುಬ್ಬಳ್ಳಿಯ ಗಿಲಾವರ್‌ಗೆ ಮಾತ್ರ ಅದೃಷ್ಟ ಫುಲ್ ಕುಲಾಯಿಸಿದೆ. ಆನ್ ಲೈನ್ ಕ್ಯಾಸಿನೋ ಆಪ್ ನಲ್ಲಿ ಬೇರೊಬ್ಬರಿ 11 ಕೋಟಿ ಗೆದ್ದಿದ್ದಾನೆ. ಈಗ ಇದೇ ಗಿಲಾವರ್ ಪ್ರಾಣ ಸ್ನೇಹಿತ ಗರೀಬ್‌ನ ಪ್ರಾಣಕ್ಕೆ ಕುತ್ತು ತಂದಿದೆ. ಹಣಕ್ಕಾಗಿ ಗರೀಬ್ ಸ್ನೇಹಿತರೇ ಆತನನ್ನು ಕಿಡ್ನಾಪ್ ಮಾಡಿದ್ದಾರೆ.

ಗಿಲಾವರ್ ಮತ್ತು ಗರೀಬ್ ಇಬ್ಬರು ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾರೆ. ಗಿವಾವರ್ ಗೆ ಆನ್ ಲೈನ್ ಜೂಜಾಟವಾಡುವ ಅಭ್ಯಾಸವಿದ್ದು, ಹಲವಾರು ದಿನಗಳಿಂದ ಆನ್ ಲೈನ್ ಕ್ಯಾಸಿನೋ ಜೂಜು ಆಡುತ್ತಿದ್ದ. ಕಳೆದ ತಿಂಗಳು ಗಿಲಾವರ್ ಅದೃಷ್ಟ ಕುಲಾಯಿಸಿ ಬರೊಬ್ಬರಿ 11 ಕೋಟಿ ಗೆದ್ದಿದ್ದ.

online casino

ಹಣವನ್ನು ಬಿಡಿಸಿಕೊಳ್ಳಲು ಗಿಲಾವರ್‌ಗೆ ಬ್ಯಾಂಕ್ ಖಾತೆ ಇರಲಿಲ್ಲ. ಹೀಗಾಗಿ ಆತನ ಸ್ನೇಹಿತ ಗರೀಬ್ ಬಳಿ ಹಣ ತೆಗೆಯಲು ಸಹಾಯ ಕೇಳಿದ್ದು, ಗರೀಬ್ ತನ್ನ ಇನ್ನೊಬ್ಬ ಸ್ನೇಹಿತ ಮಹಮ್ಮದ್ ಎಂಬಾತನಗೆ ವಿಷಯ ತಿಳಿಸಿ, ಆತನ ಖಾತೆಗೆ 2 ಕೋಟಿ ಹಣ ವರ್ಗಾವಣೆ ಮಾಡಿಸಿದ್ದಾನೆ. ಹಣ ವರ್ಗಾವಣಾಗುತ್ತಿದ್ದಂತೆ, ಗರೀಬ್, ಗಿಲಾವರ್ ಮತ್ತು ಮಹಮ್ಮದ್ ಫುಲ್ ಮಜಾ ಮಾಡಿದ್ದಾರೆ. ಇದನ್ನೂ ಓದಿ: ಬಿಕಿನಿ ಧರಿಸಿದ ಫೋಟೋ ಹಾಕಿದ್ದಕ್ಕೆ ಕೆಲಸ ಕಳೆದುಕೊಂಡ ಪ್ರಾಧ್ಯಾಪಕಿ

ಸ್ವಲ್ಪ ದಿನವಾದ ಮೇಲೆ ಮಹಮ್ಮದ್‌ಗೆ ದುರಾಸೆ ಹುಟ್ಟಿಕೊಂಡಿದೆ. ಇವರ ಬಳಿ ಇನ್ನೂ ಹಣವಿದೆ ಹೇಗಾದರೂ ಮಾಡಿ ವಶಪಡಿಸಿಕೊಳ್ಳಬೇಕು ಎಂದು ಆಲೋಚಿಸಿ ಗಿಲಾವರ್‌ನನ್ನು ಕಿಡ್ನ್ಯಾಪ್‌ ಮಾಡುವ ಪ್ಲಾನ್ ಮಾಡಿದ್ದಾನೆ. ಈ ವಿಚಾರವನ್ನು ಸ್ನೇಹಿತರಿಗೆ ತಿಳಿಸಿದ್ದಾನೆ. ಸ್ನೇಹಿತರು ಈ ಕೆಲಸಕ್ಕೆ ಸಾಥ್‌ ನೀಡುತ್ತೇವೆ ಎಂದು ಹೇಳಿದ್ದಾರೆ.

ಗಿಲಾವರ್‌ಗೆ ಕರೆ ಮಾಡಿದಾಗ ಆತ ಊರಿಗೆ ಹೋಗಿರುವ ವಿಚಾರ ತಿಳಿಯುತ್ತದೆ. ಗಿಲಾವರ್‌ ಇಲ್ಲದ ಹಿನ್ನೆಲೆಯಲ್ಲಿ ಗರೀಬ್‌ನನ್ನು ಅಪಹರಣ ಮಾಡಲು ಗ್ಯಾಂಗ್‌ ಮುಂದಾಗುತ್ತದೆ. ಆ.6 ರಂದು ಸ್ನೇಹಿತರ ಮೂಲಕ ಗರೀಬ್‌ಗೆ ಬಿವಿಬಿ ಕಾಲೇಜಿಗೆ ಬರುವಂತೆ ಕರೆ ಮಾಡಿದ್ದಾರೆ. ಗರೀಬ್‌ ಕಾಲೇಜಿಗೆ ಬರುತ್ತಿದ್ದಂತೆ ಗ್ಯಾಂಗ್‌ ಕಿಡ್ನ್ಯಾಪ್‌ ಮಾಡಿ, ಗಿಲಾವರ್‌ಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಗಾಬರಿಗೊಂಡ ಗಿಲಾವರ್, ಗರೀಬ್ ಮನೆಗೆ ಕಾಲ್ ಮಾಡಿ ವಿಷಯ ತಿಳಿಸಿದ್ದಾನೆ. ಕೂಡಲೇ ಮನೆಯವರು ವಿವಿಧ ಕಡೆ ಗರೀಬ್‌ಗಾಗಿ ಹುಡುಕಿದ್ದಾರೆ. ಬಳಿಕ ಬೆಂಡಿಗೇರಿ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಒಟ್ಟು ‌ಐದು ತಂಡಗಳನ್ನು ರಚಿಸಿಕೊಂಡು, ಶೀಘ್ರವಾಗಿ ಕಾರ್ಯೋನ್ಮುಖರಾಗಿದ್ದಾರೆ. ಮೊಬೈಲ್ ನೆಟ್‌ವರ್ಕ್‌ ಆಧರಿಸಿ ಕಿಡ್ನ್ಯಾಪ್‌ ಮಾಡಿ ಗರೀಬ್ ಬಚ್ಚಿಟ್ಟಿದ್ದ ಸ್ಥಳವನ್ನು ಪತ್ತೆ ಮಾಡಿ ರಕ್ಷಣೆ ಮಾಡಿದ್ದಾರೆ. ಇದಾದ ಬಳಿಕ ಕಿಡ್ನ್ಯಾಪ್‌ ಮಾಡಿದ್ದ ಮಹಮ್ಮದ್ ಮತ್ತು ಆತನ 7 ಮಂದಿ ಸ್ನೇಹಿತರು ಬಂಧಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:hubballikidnaponline casinoಆನ್‍ಲೈನ್ಎಂಜಿನಿಯರಿಂಗ್ಜೂಜುಪೊಲೀಸ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Ponnanna
Districts

ಭಾರತ – ಇರಾನ್‌ನದ್ದು 75 ವರ್ಷಗಳ ಸ್ನೇಹ – ಇವರು ಎಲ್ಲಾ ಹಾಳು ಮಾಡಿಟ್ಟಿದ್ದಾರೆ: ಕೇಂದ್ರದ ವಿರುದ್ಧ ಶಾಸಕ ಪೊನ್ನಣ್ಣ ಆಕ್ರೋಶ

Public TV
By Public TV
18 minutes ago
Janardhan Reddy
Districts

ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದ್ಕೆ ಭಾರತದ ಧ್ವಜ ಇರೋ ಹಡಗುಗಳು ಬರುತ್ತಿವೆ – ಜನಾರ್ದನ ರೆಡ್ಡಿ

Public TV
By Public TV
42 minutes ago
Gas Cylinder
Bengaluru City

ಹೋಟೆಲ್‌ಗಳಿಗೆ ಗುಡ್‌ನ್ಯೂಸ್ – ಕೇಂದ್ರದಿಂದ ರಾಜ್ಯಗಳಿಗೆ ಹೆಚ್ಚುವರಿ 20% ಗ್ಯಾಸ್ ಸಿಲಿಂಡರ್ ಸಪ್ಲೈ

Public TV
By Public TV
1 hour ago
Diego Garcia
Latest

ಹಿಂದೂ ಮಹಾಸಾಗರ ಡೀಗೊ ಗಾರ್ಸಿಯಾ ಬೇಸ್ ಮೇಲೆ ಇರಾನ್ ದಾಳಿ – 4,000 ಕಿಮೀ ದೂರಕ್ಕೆ ಕ್ಷಿಪಣಿ ಹಾರಿಸಿ ದಾಳಿ

Public TV
By Public TV
1 hour ago
Iran Oil
Latest

ಇರಾನ್‌ನಿಂದ ತೈಲ ಖರೀದಿಸುತ್ತಾ ಭಾರತ? – ವಾಷಿಂಗ್ಟನ್, ಕೇಂದ್ರದ ನಿರ್ದೇಶನಗಳಿಗೆ ಸಂಸ್ಕರಣಾ ಕಂಪನಿಗಳು ವೆಯ್ಟಿಂಗ್

Public TV
By Public TV
1 hour ago
Droupadi Murmu
Districts

ಶಿವೈಕ್ಯ ಶಿವಕುಮಾರ ಶ್ರೀಗಳ ಜಯಂತಿ – ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಮುರ್ಮು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?