ಪಲ್ಟಿಯಾಗಿದ್ರಿಂದ ಲಾರಿಯ ಹಿಂಬದಿ ಕಲ್ಲುಚಪ್ಪಡಿ ಮೇಲೆ ಕುಳಿತಿದ್ದ ವ್ಯಕ್ತಿ ದುರ್ಮರಣ

Public TV
1 Min Read
CKB 4

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಲ್ಲುಚಪ್ಪಡಿಗಳನ್ನ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಚಿಕ್ಕಬಳ್ಳಾಪುರ ನಗರದ ಹೊರವಲಯದ ಮಂಚನಬಲೆ ಸೇತುವೆ ಬಳಿ ನಡೆದಿದೆ. ಕುರ್ಲಹಳ್ಳಿ ಗ್ರಾಮದ ಅನಿಲ್ ಕುಮಾರ್ (35) ಮೃತ ವ್ಯಕ್ತಿ. ಅಪಘಾತದಲ್ಲಿ ಗಾಯಗೊಂಡಿರುವ ಮತ್ತೋರ್ವ ವ್ಯಕ್ತಿಯನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿಲಾಗಿದೆ.

CKB 2

ಹೆದ್ದಾರಿಯಲ್ಲಿ ಎದುರಗಡೆಯಿಂದ ಬಂದ ವಾಹನವನ್ನು ತಪ್ಪಿಸಲು ಹೋಗಿ ಬಲಗಡೆ ಹೋಗುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಪರಿಣಾಮ ಲಾರಿಯ ಹಿಂಬದಿ ಚಪ್ಪಡಿ ಕಲ್ಲುಗಳ ಮೇಲೆ ಕುಳಿತಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಇನ್ನೊರ್ವರು ಗಾಯಗೊಂಡಿದ್ದಾರೆ.

ಅಪಘಾತವಾದ ನಂತರ ಲಾರಿಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಡಿವೈಎಸ್ಪಿ ಪ್ರಭುಶಂಕರ್ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

CKB 3

CKB 5

CKB

vlcsnap 2017 11 20 13h20m11s96

vlcsnap 2017 11 20 13h20m19s201

vlcsnap 2017 11 20 13h20m27s15

vlcsnap 2017 11 20 13h20m38s121

vlcsnap 2017 11 20 13h20m49s217

vlcsnap 2017 11 20 13h21m16s249

vlcsnap 2017 11 20 13h21m25s78

vlcsnap 2017 11 20 13h22m06s231

vlcsnap 2017 11 20 13h22m17s91

vlcsnap 2017 11 20 13h22m22s154

vlcsnap 2017 11 20 13h22m27s193

vlcsnap 2017 11 20 13h22m35s7

vlcsnap 2017 11 20 13h22m51s177

vlcsnap 2017 11 20 13h23m04s42

Share This Article
Leave a Comment

Leave a Reply

Your email address will not be published. Required fields are marked *