ಧಾರವಾಡ: ಹಣಕ್ಕಾಗಿ ವ್ಯಕ್ತಿಯೊಬ್ಬ ತನ್ನ ತಾಯಿಯ ಮೇಲೆ ರಾಡ್ನಿಂದ ಹಲ್ಲೆ ನಡೆಸಿ ಹತ್ಯೆಗೈದು, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೊಸಯಲ್ಲಾಪುರದ ಉಡುಪಿ ಓಣಿಯಲ್ಲಿ ನಡೆದಿದೆ.
ಶಾರದಾ ಭಜಂತ್ರಿ (60) ಎಂಬ ಮಹಿಳೆ ತನ್ನ ಮಗನಿಂದಲೇ ಹತ್ಯೆಯಾಗಿದ್ದು, ಆಕೆಯ ಮಗ ರಾಜೇಂದ್ರ ಭಜಂತ್ರಿ (40) ಎಂಬಾತನೇ ಆಕೆಯನ್ನು ಹತ್ಯೆ ಮಾಡಿದ್ದಾನೆ. ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪಾಕ್ ಪರ ಘೋಷಣೆ – FSL ವರದಿ ಇನ್ನೂ ಬಂದಿಲ್ಲ, ಬಂದ ನಂತರ ಕ್ರಮ : ಪರಮೇಶ್ವರ್
ತಾಯಿಗೆ ಬರುತ್ತಿದ್ದ ಪಿಂಚಣಿ ಹಣದ ಮೇಲೆ ರಾಜೇಂದ್ರ ಕಣ್ಣಿಟ್ಟಿದ್ದ. ಅಲ್ಲದೇ ಖಾಲಿ ಜಾಗವನ್ನು ತನಗೆ ಕೊಡುವಂತೆ ತಾಯಿಗೆ ದಂಬಾಲು ಬಿದ್ದಿದ್ದ. ಖಾಲಿ ಜಾಗ ಕೊಡಲು ತಾಯಿ ನಿರಾಕರಿಸಿದ್ದಳು. ಇದೇ ಕಾರಣಕ್ಕಾಗಿ ಜಗಳ ನಡೆದು ತನ್ನ ತಾಯಿಯ ಮೇಲೆ ರಾಡ್ನಿಂದ ಹಲ್ಲೆ ನಡೆಸಿ ಆಕೆಯನ್ನು ಹತ್ಯೆಗೈದಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ – ರಥಯಾತ್ರೆಗೆ ಹೈಕೋರ್ಟ್ ಅಸ್ತು