ಜಾತ್ರೆಯ ನಿಮಿತ್ತ ಗಾಳಿಯಲ್ಲಿ ಹಾರಿಸಿದ ಗುಂಡು ವ್ಯಕ್ತಿಗೆ ತಗುಲಿ ಸಾವು!

Public TV
1 Min Read
BLG JATRE FIRE 3

ಬೆಳಗಾವಿ: ಜಾತ್ರೆಯ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ಆಕಸ್ಮಿಕವಾಗಿ ವ್ಯಕ್ತಿಯೊಬ್ಬರಿಗೆ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನಡೆದಿದೆ.

ಢವಳೇಶ್ವರ ಗ್ರಾಮದ ನಿಜಗುಣ ಅಂಗಡಿ ಮೃತ ದುರ್ದೈವಿ. ಮಹದೇವ ನಾಡಗೌಡ ತಮ್ಮ ಲೈಸನ್ಸ್ ರಿವಾಲ್ವಾರ್ ನಿಂದ ಗುಂಡು ಹಾರಿಸಿದಾಗ ಘಟನೆ ನಡೆದಿದೆ.

ರಂಗೇಶ್ವರ ಜಾತ್ರೆಯ ನಿಮಿತ್ತ ದೇವಸ್ಥಾನದ ಪಕ್ಕದಲ್ಲಿಯೇ ಗಾಳಿಯಲ್ಲಿ ಐದು ಸುತ್ತು ಗುಂಡು ಹಾರಿಸಲಾಗುತ್ತಿತ್ತು. ಈ ವೇಳೆ ಮಹದೇವ ನಾಡಗೌಡ ರಿವಾಲ್ವಾರ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿ ನಿಜಗುಣ ಅಂಗಡಿ ಅವರಿಗೆ ತಗುಲಿದೆ. ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

BLG JATRE FIRE 1

ಘಟನೆಯ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಿಜಗುಣ ಅವರ ಮೃತ ದೇಹವನ್ನು ಗೋಕಾಕ್‍ನ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಈ ಸಂಬಂಧ ಮೃತ ನಿಜಗುಣ ಸಂಬಂಧಿಕರು ಕುಲಗೋಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಎಸ್‍ಪಿ ಸುಧೀಂದ್ರ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ಕುಲಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

BLG JATRE FIRE 2

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *