ಚಂಡೀಗಢ: ಕಳ್ಳನೆಂದು ಶಂಕಿಸಿ ಥಳಿಸಿ ವ್ಯಕ್ತಿಯೊಬ್ಬನ ಹತ್ಯೆಗೆ ಕಾರಣರಾದ ತೋಟದ ಮಾಲೀಕ (Owner) ಹಾಗೂ ಆತನ ಸಹಾಯಕನನ್ನು (Servant) ಗುರುಗ್ರಾಮ್ (Gurugram) ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಘಾಟಾ ಗ್ರಾಮದ ಅಂಕಿತ್ ಹಾಗೂ ಆತನ ಸಹಾಯಕ ಮಧ್ಯಪ್ರದೇಶದ (Madhya Pradesh) ಸಾಗರ್ ಮೂಲದವನು ಎಂದು ತಿಳಿದು ಬಂದಿದೆ. ಆರೋಪಿಗಳ ವಿಚಾರಣೆ ವೇಳೆ, ತೋಟದಲ್ಲಿ ಆಗಾಗ ಕಳ್ಳತನವಾಗುತ್ತಿತ್ತು. ಹಾಗಾಗಿ ನಾನು ಮತ್ತು ನನ್ನ ಸಹಾಯಕ ಕಾವಲು ಆರಂಭಿಸಿದ್ದೆವು ಎಂದು ಅಂಕಿತ್ ಹೇಳಿದ್ದಾನೆ.ಇದನ್ನೂ ಓದಿ: ಮತದಾರರಿಗೆ ನಕಲಿ ಬಾಂಡ್ ಆಮಿಷ ಪ್ರಕರಣ – ಜೆಡಿಎಸ್ ಶಾಸಕ ಗೌರಿಶಂಕರಗೆ ಅನರ್ಹತೆಯ ಭೀತಿ
ಮಂಗಳವಾರ ತಡರಾತ್ರಿ ತೋಟದ ಬಳಿಗೆ ಬಂದಿದ್ದ ಇಬ್ಬರನ್ನು ಕಳ್ಳರೆಂದು ಶಂಕಿಸಿ ಮನೆಯಲ್ಲಿ ಕೂಡಿ ಹಾಕಿ ಆರೋಪಿಗಳು ಥಳಿಸಿದ್ದರು. ಥಳಿತಕ್ಕೊಳಗಾದ ಒಬ್ಬ ಬುಧವಾರ ಬೆಳಗ್ಗೆ ಮೃತಪಟ್ಟಿದ್ದ. ಮೃತಪಟ್ಟ ವ್ಯಕ್ತಿಯನ್ನು ಬಂಗಾಳ ಮೂಲದ ರಫಿಗುಲ್ ಹಾಗೂ ಗಾಯಗೊಂಡಿರುವ ಮತ್ತೊಬ್ಬನನ್ನು ಇಸ್ರುದ್ದೀನ್ ಎಂದು ಗುರುತಿಸಲಾಗಿದೆ.
ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಗಳನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಲಸಿಗರ ಘರ್ ವಾಪಸಿ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ಗೆ ಆತಂಕ- ಟಿಕೆಟ್ ಫೈನಲ್ ಮಾಡಲು ಪರದಾಟ