Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಹೋದರನನ್ನು ಮದುವೆಯಾಗಿದ್ದಕ್ಕೆ ಮಹಿಳೆಯ ಕುಟುಂಬವನ್ನೇ ನಾಶಗೈದ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸಹೋದರನನ್ನು ಮದುವೆಯಾಗಿದ್ದಕ್ಕೆ ಮಹಿಳೆಯ ಕುಟುಂಬವನ್ನೇ ನಾಶಗೈದ!

Crime

ಸಹೋದರನನ್ನು ಮದುವೆಯಾಗಿದ್ದಕ್ಕೆ ಮಹಿಳೆಯ ಕುಟುಂಬವನ್ನೇ ನಾಶಗೈದ!

Public TV
Last updated: May 29, 2024 8:28 pm
Public TV
Share
3 Min Read
ಕೊಲೆಗೈದ ಆರೋಪಿ ಆಸೀಫ್‌ (ಎಡ) , ಕೊಲೆಯಾದ ವಸಂತಾ(ಬಲ)
ಕೊಲೆಗೈದ ಆರೋಪಿ ಆಸೀಫ್‌ (ಎಡ) , ಕೊಲೆಯಾದ ವಸಂತಾ(ಬಲ)
SHARE

– ಕೊಪ್ಪಳದಲ್ಲಿ ಮೂವರ ಬರ್ಬರ ಹತ್ಯೆ 
– ಕೃತ್ಯ ನಡೆದ 24 ಗಂಟೆಯಲ್ಲಿ ಆರೋಪಿ ಆಸೀಫ್‌ ಅರೆಸ್ಟ್‌

ಕೊಪ್ಪಳ: ಒಂದೇ ಮನೆಯಲ್ಲಿ ಮಗಳು, ತಾಯಿ ಮತ್ತು ಮಗ ಶವವಾಗಿ ಪತ್ತೆಯಾಗಿದ್ದರು. ಶವ ನೋಡಿದವರು ಆತ್ಮಹತ್ಯೆ ಎಂದೇ ಹೇಳಿದ್ದರು. ಮೇಲ್ನೋಟಕ್ಕೆ ಮೂವರ ಸಾವು ಕೂಡಾ ಆತ್ಮಹತ್ಯೆ ರೀತಿಯೇ ಇತ್ತು. ಆದರೆ ಪೊಲೀಸರು ತನಿಖೆ (Police Investigation) ನಡೆಸಿದಾಗ ಮೂವರದ್ದು ಆತ್ಮಹತ್ಯೆಯಲ್ಲ ಕೊಲೆ (Murder) ಎನ್ನುವುದು ದೃಢಪಟ್ಟಿದೆ.

ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿರುವ ಆಶ್ರಯ ಬಡಾವಣೆಯಲ್ಲಿರುವ ಮನೆಯಲ್ಲಿ ಮಂಗಳವಾರ ಮೂವರು ಶವವಾಗಿ ಪತ್ತೆಯಾಗಿದ್ದರು. ರಾಜೇಶ್ವರಿ (50), ರಾಜೇಶ್ವರಿ ಪುತ್ರಿ ವಸಂತಾ(28) ವಸಂತಾಳ ಮಗಳ ಸಾಯಿ ಧರ್ಮತೇಜ್‌(5) ಅವರ ಶವ ಬಾಡಿಗೆ ಮನೆಯಲ್ಲಿ ಪತ್ತೆಯಾಗಿತ್ತು.

ಸೋಮವಾರ ಸಮೀಪದ ನಿವಾಸಿಗಳ ಜೊತೆ ಮಾತನಾಡಿದ್ದ ಮೂವರು ಸಂಜೆ ನಂತರ ಯಾರಿಗೂ ಕಣಿಸಿರಲಿಲ್ಲ. ಮಂಗಳವಾರ ಮುಂಜಾನೆ ಮನೆ ಬಾಗಿಲು ತೆರೆದು ನೋಡಿದಾಗ, ಅಡುಗೆ ಮನೆಯಲ್ಲಿ ವಸಂತಾಳ ಶವ ಸಿಕ್ಕರೆ, ಮನೆಯ ಬೆಡ್ ರೂಮ್ ನಲ್ಲಿ ರಾಜೇಶ್ವರಿ ಮತ್ತು ರಾಜೇಶ್ವರಿ ಮೊಮ್ಮಗ ಸಾಯಿಧರ್ಮತೇಜ್ ಶವ ಸಿಕ್ಕಿತ್ತು. ಇದನ್ನೂ ಓದಿ: ಪ್ಯಾಲೆಸ್ತೀನ್‌ ಬೆಂಬಲಿಸಿದ್ದಕ್ಕೆ ಟ್ರೋಲ್‌ ಬೆನ್ನಲ್ಲೇ ಹಿಟ್‌ಮ್ಯಾನ್‌ ಪತ್ನಿ ಪೋಸ್ಟ್‌ ಡಿಲೀಟ್

ಕೊಲೆಯಾದ ರಾಜೇಶ್ವರಿ ಮತ್ತು ವಸಂತಾ ಪುತ್ರ ಸಾಯಿ ಧರ್ಮತೇಜ್
ಕೊಲೆಯಾದ ರಾಜೇಶ್ವರಿ ಮತ್ತು ವಸಂತಾ ಪುತ್ರ ಸಾಯಿ ಧರ್ಮತೇಜ್

ಮೂವರ ಶವದ ಮೇಲೆ ಯಾವುದೇ ಗಾಯದ ಗುರುತುಗಳು ಇರಲಿಲ್ಲ. ಹೀಗಾಗಿ ಮೇಲ್ನೋಟಕ್ಕೆ ಕೌಟುಂಬಿಕ ಕಲಹದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಬಗ್ಗೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. ಸ್ಥಳಕ್ಕೆ ಕೊಪ್ಪಳ ಎಸ್ಪಿ ಯಶೋಧಾ ವಂಟಗೋಡಿ ಕೂಡಾ ಆಗಮಿಸಿ ಪರಿಶೀಲನೆ ನಡೆಸಿದ್ದರು.

ಮೂವರ ಶವಗಳನ್ನು ನೋಡಿದಾಗ ಆರಂಭದಲ್ಲಿಯೇ ಪೊಲೀಸರು ಕೂಡಾ ಆತ್ಮಹತ್ಯೆಯ ಶಂಕೆಯನ್ನೇ ಹೊಂದಿದ್ದರು. ಆದರೆ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ? ಆತ್ಮಹತ್ಯೆ ಹೇಗೆ ಮಾಡಿಕೊಂಡರು ಅನ್ನೋದರ ತನಿಖೆ ಆರಂಭಿಸಿದಾಗ ಪೊಲೀಸರಿಗೆ ಆತ್ಮಹತ್ಯೆಗೈಯಲು ಕಾರಣಾದ ಯಾವುದೇ ಸಂಗತಿ ಕೂಡಾ ಪತ್ತೆಯಾಗಿರಲಿಲ್ಲ.

ತನಿಖೆಯಲ್ಲಿ ಮೂವರು ಕೂಡಾ ಆತ್ಮಹತ್ಯೆ ಮಾಡಿಕೊಂಡಿಲ್ಲ. ಬದಲಾಗಿ ಮೂವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎನ್ನುವುದು ದೃಢಪಟ್ಟಿತ್ತು. ಹಾಗಾದ್ರೆ ಕೊಲೆ ಮಾಡಿದವರು ಯಾರು ಅಂತ ಪತ್ತೆ ಹಚ್ಚಿದಾಗ ವಸಂತಾಳನ್ನು ಎರಡನೇ ಮದುವೆಯಾಗಿದ್ದ ಆಸೀಫ್‌ ಎನ್ನುವುದು ಗೊತ್ತಾಗಿ ಪೊಲೀಸರು ಬೆಚ್ಚಿಬಿದ್ದಿದ್ದಾರೆ.

ಕೊಲೆ ಮಾಡಿದ್ದು ಯಾಕೆ?
ವಸಂತಾ ಎರಡನೇ ಮದುವೆಯಾಗಿದ್ದ ಆರೀಫ್‌ನ ಸಹೋದರ ಹೊಸಪೇಟೆ ನಿವಾಸಿ ಆಸೀಫ್‌ (28) ಮೂವರನ್ನು ಕೊಲೆ ಮಾಡಿದ್ದಾನೆ. ಕೊಲೆಯಾಗಿರುವ ವಸಂತಾಳಿಗೆ ಮೊದಲು ಆಂಧ್ರಪ್ರದೇಶದ ನಂದ್ಯಾಲ ಮೂಲದ ವ್ಯಕ್ತಿ ಜೊತೆ ಮದುವೆಯಾಗಿತ್ತು. ದಂಪತಿಗೆ ಪುತ್ರ ಸಾಯಿ ಧರ್ಮತೇಜ್ ಜನಿಸಿದ್ದ. ಆದರೆ ಕೌಟುಂಬಿಕ ಕಲಹದಿಂದ ವಸಂತಾ, ಮೊದಲ ಪತಿಯನ್ನು ಬಿಟ್ಟು ಬಂದು, ಹೊಸಲಿಂಗಾಪುರ ಗ್ರಾಮದಲ್ಲಿ ತಾಯಿ ಮತ್ತು ಮಗನ ಜೊತೆ ಬಾಡಿಗೆ ಮನೆ ಮಾಡಿಕೊಂಡು ಜೀವನ ನಡೆಸುತ್ತಿದ್ದಳು.

man kills 3 family members in Koppala arrested 2

ಹೊಸಲಿಂಗಾಪುರ ಗ್ರಾಮದ ಹೊರವಲಯಲ್ಲಿರುವ ಗೊಂಬೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ಸಮಯದಲ್ಲಿ ತನ್ನದೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಆರೀಫ್‌ ಜೊತೆ ಪ್ರೇಮ ಬೆಳೆದಿತ್ತು. ಹೀಗಾಗಿ ಆರೀಫ್‌ ಮತ್ತು ವಸಂತಾ 6 ತಿಂಗಳ ಹಿಂದೆ ಮದುವೆಯಾಗಿದ್ದರು. ಮದುವೆಯಾದ ನಂತರ ಆರೀಫ್‌ ಆಗಾಗ ವಸಂತಾ ಇದ್ದ ಬಾಡಿಗೆ ಮನೆಗೆ ಬಂದು ಹೋಗುತ್ತಿದ್ದ.

ಆರೀಫ್‌ಗೆ ಕೂಡಾ ಮೊದಲ ಪತ್ನಿಯಿದ್ದು, ದಂಪತಿಗೆ ಮಕ್ಕಳು ಕೂಡಾ ಇದ್ದರು. ಯಾವಾಗ ಆರೀಫ್‌ ವಸಂತಾಳನ್ನು ಮದುವೆಯಾದನೋ ಆಗ ಆಸೀಫ್‌ ಸಿಟ್ಟಾಗಿದ್ದ. ಯಾಕೆಂದರೆ ಆರೀಫ್‌ ಮದುವೆಯಾಗುವ ಮೊದಲು ಆಸೀಫ್‌ ವಸಂತಾಳನ್ನು ಪ್ರೀತಿಸುತ್ತಿದ್ದ. ಇಬ್ಬರು ಕೂಡಾ ಮದುವೆಯಾಗಲು ನಿರ್ಧರಿಸಿದ್ದರಂತೆ. ಆದರೆ ಬದಲಾದ ಸಮಯದಲ್ಲಿ ವಸಂತಾ, ಆಸೀಫ್‌ ಬಿಟ್ಟು ಆತನ ಸಹೋದರ ಆರೀಫ್‌ನ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು.

ಆರೀಫ್‌ ಮತ್ತು ವಸಂತಾ ಮದುವೆಯಾದ ನಂತರ ಆಸೀಫ್‌ ಸಿಟ್ಟು ಮತ್ತಷ್ಟು ಹೆಚ್ಚಾಗಿತ್ತು. ಇದೇ ಸಿಟ್ಟಿನಲ್ಲಿ ಸೋಮವಾರ ಸಂಜೆ ಐದರಿಂದ ಆರು ಗಂಟೆ ಸಮಯದಲ್ಲಿ ವಸಂತಾಳ ಮನೆಗೆ ಬಂದಿದ್ದ. ಮೊದಲು ರಾಜೇಶ್ವರಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ನಂತರ ಸಾಯಿ ಧರ್ಮತೇಜ್ ನನ್ನು ಕೊಲೆ ಮಾಡಿದ್ದ. ನಂತರ ಕೆಲಸ ಮುಗಿಸಿ ಮನೆಗೆ ಬಂದಿದ್ದ ವಸಂತಾಳನ್ನು ಕೂಡಾ ಕೊಲೆ ಮಾಡಿದ್ದ. ಮೂವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಸದ್ಯ ಮೂವರ ಸಾವಿನ ಬಗ್ಗೆ ತನಿಖೆ ನಡೆಸಿದ ಪೊಲೀಸರು ಕೃತ್ಯ ನಡೆದ 24 ಗಂಟೆಯ ಒಳಗಡೆ ಆರೋಪಿಯನ್ನು ಬಂಧಿಸುವ ಮೂಲಕ ಕಂಬಿ ಹಿಂದೆ ಕಳುಹಿಸಿದ್ದಾರೆ. ಭಗ್ನ ಪ್ರೇಮಿಯ ಹುಚ್ಚಾಟಕ್ಕೆ ಬಾಳಿ ಬದುಕಬೇಕಿದ್ದ ಮೂವರು ಬಾರದ ಲೋಕಕ್ಕೆ ಹೋಗಿದ್ದು ಮಾತ್ರ ದುರಂತವೇ ಸರಿ.

TAGGED:KoppalmarriageMurderಕೊಪ್ಪಳಕೊಲೆಪ್ರೀತಿಮದುವೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
3 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
6 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
30 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
55 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
60 minutes ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?