ಹೈದರಾಬಾದ್: ಶೀಲ ಶಂಕಿಸಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಗುರುವಾರ ಆಂಧ್ರ ಪ್ರದೇಶದ ತೆನಾಲಿಯಲ್ಲಿ ನಡೆದಿದೆ.
ಸತ್ಯನಾರಾಯಣ ಪ್ರೇಯಸಿಯನ್ನು ಕತ್ತು ಸೀಳಿದ ಪ್ರಿಯಕರ. ಸತ್ಯನಾರಾಯಣ ಹಲವು ವರ್ಷಗಳಿಂದ ಜ್ಯೋತಿಯನ್ನು ಪ್ರೀತಿಸುತ್ತಿದ್ದನು. ಅಲ್ಲದೆ ಇಬ್ಬರು ಬಹಳ ಸಮಯದಿಂದ ಒಟ್ಟಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ.
ಇಬ್ಬರು ಜೊತೆಯಲ್ಲಿ ವಾಸಿಸುತ್ತಿದ್ದ ವೇಳೆ ಸತ್ಯನಾರಾಯಣ ತನ್ನ ಪ್ರೇಯಸಿ ಜ್ಯೋತಿಯ ಶೀಲದ ಬಗ್ಗೆ ಹೆಚ್ಚು ಅನುಮಾನ ಪಡಲು ಶುರು ಮಾಡಿದ್ದನು. ಅಲ್ಲದೆ ಆಕೆಯ ಬಗ್ಗೆ ಕೆಟ್ಟದಾಗಿ ಮಾತನಾಡಲು ಶುರು ಮಾಡಿದ್ದನು. ಇದೇ ವೊಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆ ಆಗಾಗ ಜಗಳಗಳು ನಡೆಯುತ್ತಿತ್ತು.
ಗುರುವಾರ ಸತ್ಯನಾರಾಯಣ ತನ್ನ ಪ್ರೇಯಸಿ ಜ್ಯೋತಿಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಹೋಗಿ ತಾನು ಕೊಲೆ ಮಾಡಿರುವುದಾಗಿ ಸ್ವತಃ ಆತನೇ ಒಪ್ಪಿಕೊಂಡಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv