ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ಕೆಲವೊಂದು ಕ್ಲುಲ್ಲಕ ಕಾರಣಗಳಿಗೆ ನಡೆಯುವ ಜಗಳ ಕೊಲೆಯಲ್ಲಿ ಅಂತ್ಯವಾಗುತ್ತಿವೆ. ಕೆಲವೊಮ್ಮೆ ಈ ಘಟನೆಗಳು ಅಚ್ಚರಿ ಮೂಡಿಸುತ್ತವೆ. ಬರೀ ಇಷ್ಟಕ್ಕೆ ಕೊಲೆ ಮಾಡಬೇಕಾ ಅಂತಾ ಅನಿಸೋದು ಸಹಜ. ಇದೀಗ ಅಂಥದ್ದೇ ಒಂದು ಘಟನೆ ಬಾಗಲಕೋಟೆಯಲ್ಲಿ (Bagalkote) ನಡೆದಿದೆ.
ಹೌದು. ಹಾಲು ಹಾಕಿಕೊಂಡು ಊಟ ಮಾಡಬೇಡ ಎಂದು ತನ್ನೆತ್ತರಕ್ಕೆ ಬೆಳೆದ ಮಗನಿಗೆ ಬುದ್ಧಿ ಹೇಳಿದ್ದಾರೆ. ಆದರೆ ತಂದೆಗೆ ಇದು ಬುದ್ಧಿ ಮಾತು ಅನಿಸಿರೂ ಇಬ್ಬರ ಮಧ್ಯೆ ಇದೇ ವಿಚಾರಕ್ಕೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ತಂದೆ ಮಗನ ಕೊಲೆ ಮಾಡಲು ಸ್ಕೆಚ್ ಹಾಕುತ್ತಾನೆ.
ಮಗ ಮಲಗಿದ್ದಾಗ ಕಂಠಪೂರ್ತಿ ಕುಡಿದು ಬಂದ ತಂದೆ, ಕೊಡಲಿಯಿಂದ ಮುಖ ಹಾಗೂ ಕತ್ತಿಗೆ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಸೋಮವಾರ ರಾತ್ರಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಿಸನಾಳ ಗ್ರಾಮದಲ್ಲಿ ನಡೆದಿದೆ.
ಕರಿಯಪ್ಪ ಬೀಳಗಿ (21) ನನ್ನು ತಂದೆ ಡೊಂಗರೆಪ್ಪ ಬೀಳಗಿಯಿಂದ ಹತ್ಯೆ ಮಾಡಿದ್ದಾನೆ. ಬೀಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ತಂದೆ!