ಪಣಜಿ: ಪ್ರೀತಿ ಮುಂದುವರಿಸುವುದು ಬೇಡ ಅಂದಿದ್ದಕ್ಕೆ 19 ವರ್ಷದ ಯುವತಿಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ದಕ್ಷಿಣ ಗೋವಾದ ವೆಲ್ಸಾನ್ ಬೀಚ್ನಲ್ಲಿ ನಡೆದಿದೆ.
ಆರೋಪಿಯನ್ನು 26 ವರ್ಷದ ಕಿಶನ್ ಕಲಂಗುಟ್ಕರ್ ಎಂದು ರುತಿಸಲಾಗಿದ್ದು, ಯುವತಿಯ ಶವ ಸಮುದ್ರ ತೀರದಲ್ಲಿ ಪತ್ತೆಯಾದ ಒಂದು ದಿನದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ
ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯನ್ನು ಪ್ರೀತಿಸುತ್ತಿದ್ದ ಆರೋಪಿ, ಬುಧವಾರ ಆಕೆಯೊಂದಿಗೆ ಬೀಚ್ಗೆ ತೆರಳಿದ್ದನು. ಈ ವೇಳೆ ಯುವತಿ ಪ್ರೀತಿಯನ್ನು ಮುಂದುವರಿಸಲು ಬಯಸುವುದಿಲ್ಲ ಎಂದು ತಿಳಿಸಿದ್ದಾಳೆ. ಇದರಿಂದ ಕೋಪಗೊಂಡ ಆರೋಪಿ ಚಾಕುವಿನಿಂದ ಅನೇಕ ಬಾರಿ ಇರಿದು ಆಕೆಯನ್ನು ಕೊಂದಿದ್ದಾನೆ. ನಂತರ ಆಕೆಯ ಮೃತ ದೇಹವನ್ನು ಕಡಲ ತೀರದಲ್ಲಿರುವ ಪೊದೆಯೊಂದರಲ್ಲಿ ಎಸೆದು ಸ್ಥಳದಿಂದ ಪರಾರಿಯಾಗಿದ್ದಾನೆ.
ಮೃತದೇಹ ಪತ್ತೆಯಾದ ಬಳಿಕ ತನಿಖೆ ಆರಂಭಿಸಿ 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ದಕ್ಷಿಣ) ಅಭಿಷೇಕ್ ಧನಿಯಾ ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರ ಮುಂದೆ ಶರಣಾಗಲು ಹೆಚ್ಚಿನ ಸಮಯ ಕೇಳಿದ ಸಿಧು