ಬೆಂಗಳೂರು: ನಿನ್ನನ್ನು ಭೇಟಿಯಾಗಬೇಕು ಎಂದು ಸಂಬಂಧಿ ಯುವತಿಯನ್ನು ಕರೆಸಿ ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣವೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ರಮೇಶ್ ಎಂದು ಗುರುತಿಸಲಾಗಿದೆ.
ಈತ ಆಗಸ್ಟ್ 6 ರಂದು ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದಾನೆ. ಈ ವೇಳೆ ಸಂಬಂಧಿ ಯುವತಿಗೆ ಕರೆ ಮಾಡಿ ತನ್ನನ್ನು ಭೇಟಿಯಾಗುವಂತೆ ತಿಳಿಸಿದ್ದಾನೆ. ಇತ್ತ ದೂರದ ಸಂಬಂಧಿ ಅಪರೂಪಕ್ಕೆ ಬೆಂಗಳೂರಿಗೆ ಬಂದಿದ್ದಾನೆ ಅಂತಾ ತಿಳಿದು ಯುವತಿ ಕಬ್ಬನ್ ಪಾರ್ಕ್ ಗೆ ಬಂದಿದ್ದಳು.
ಈ ಸಮಯಯವನ್ನ ದುರುಪಯೋಗಪಡಿಸಿಕೊಂಡ ರಮೇಶ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆಯಿಂದ ಶಾಕ್ ಗೆ ಒಳಗಾಗಿದ್ದ ಯುವತಿ ಮೂರು ದಿನಗಳ ಬಳಿಕ ಪೊಲಿಸರಿಗೆ ದೂರು ನೀಡಿದ್ದಾಳೆ.
ಸದ್ಯ ಆರೋಪಿ ರಮೇಶ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆ ಬಳಿಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿರುವ ರಮೆಶ್ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.