ಭುವನೇಶ್ವರ್: ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಗಳ ವಿರುದ್ಧ ಪ್ರತಿಭಟನೆಗಾಗಿ ವರನೊಬ್ಬ ಮದುವೆಗೆ ಸೈಕಲ್ನಲ್ಲಿ ಬಂದ ಘಟನೆ ಒಡಿಶಾದ ಭುವನೇಶ್ವರ್ದಲ್ಲಿ ನಡೆದಿದೆ.
ಸುಭ್ರಾಂಶು ಸಮಲ್ ಸೈಕಲ್ ಮೇಲೆ ಬಂದ ವರ. ಈತನ ಕುಟುಂಬವು ಮದುವೆ ಮರವಣಿಗೆಗೆ ಭಾರೀ ವ್ಯವಸ್ಥೆ ಮಾಡಿತ್ತು. ಆದರೆ ದೇಶದಲ್ಲಿ ಹೆಚ್ಚುತ್ತಿರವ ಇಂಧನ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟಿಸಲು ಸುಭ್ರಾಂಶು ಸೈಕಲ್ನ್ನು ಬಳಸುವ ನಿರ್ಧಾರವನ್ನು ಮಾಡಿದ್ದಾನೆ.
ಇದರಂತೆ ಮದುವೆ ಬಟ್ಟೆಯನ್ನು ಧರಿಸಿ ಸೈಕಲ್ನಲ್ಲಿ ಸುಮಾರು ಒಂದು ಕಿ.ಮೀ ವರೆಗೆ ಸೈಕಲ್ನ್ನು ತುಳಿದು ಮಂಟಪಕ್ಕೆ ಬಂದಿದ್ದಾನೆ. ಅವನ ಜೊತೆಗೆ ಮದುವೆಗೆ ಆಗಮಿಸಿದ್ದ ಆತನ ಕುಟುಂಬ ಮತ್ತು ಸ್ನೇಹಿತರು ಕಾಲ್ನಡಿಗೆಯಲ್ಲೇ ಮದುವೆ ಮಂಟಪಕ್ಕೆ ತಲುಪಿದರು. ಇದನ್ನೂ ಓದಿ: ಸ್ಪಷ್ಟವಾಗಿ ಹೇಳ್ತೇನೆ ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ: ಶ್ರೀನಿವಾಸ್ ಪೂಜಾರಿ
ನಿರಂತರವಾಗಿ ಪೆಟ್ರೋಲ್ ಹಾಗೂ ಡಿಸೇಲ್ಗಳ ಬೆಲೆ ಏರಿಕೆ ಆಗುತ್ತಿರುವುದರಿಂದ ಹಲವಾರು ಜನರು ಹತಾಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ಕಡೆ ಪ್ರತಿಭಟನೆ ನಡೆಯುತ್ತಿರುವುದು ಸಾಮಾನ್ಯ ಪ್ರತಿಕ್ರಿಯೆ ಆಗಿದೆ. ಆದರೆ ವಿಭಿನ್ನವಾಗಿ ಪ್ರತಿಭಟನೆ ಮಾಡುವ ಮೂಲಕ ಸರ್ಕಾರವನ್ನು ಗಮನ ಸೆಳೆಯುವುದು ಉದ್ದೇಶವಾಗಿದೆ ಎಂದು ಸುಭ್ರಾಂಶು ತಿಳಿಸಿದರು. ಇದನ್ನೂ ಓದಿ: ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿದ ಪಾದಚಾರಿಗಳು – ಓರ್ವ ಸಾವು, ನಿರ್ದೇಶಕ ವಶಕ್ಕೆ