ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ (West Bengal) 3 ಹಂತದ ಪಂಚಾಯತಿ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪಂಚಾಯ್ತಿ ಚುನಾವಣೆಯಲ್ಲೇ (Panchayat Election) ನೆತ್ತರು ಹರಿದಿದೆ. ಮತಗಟ್ಟೆಗಳಿಗೆ ನುಗ್ಗಿ ದಾಂಧಲೆ ನಡೆಸಿ, ಮತಪೆಟ್ಟಿಗೆಗಳಿಗೆ ಬೆಂಕಿ ಹಚ್ಚಿ ಉದ್ಧಟತನ ಪ್ರದರ್ಶಿಸಲಾಗಿದೆ. ಈ ವೇಳೆ ಯುವಕನೊಬ್ಬ ಮತಪೆಟ್ಟಿಗೆಯನ್ನೇ ಹೊತ್ತೊಯ್ದ ಘಟನೆ ನಡೆದಿದೆ.
ಕೂಚ್ ಬೆಹಾರ್ ಜಿಲ್ಲೆಯಲ್ಲಿ ಶನಿವಾರ ಪಂಚಾಯತ್ ಚುನಾವಣೆಗೆ ಮತದಾನ ನಡೆಯುತ್ತಿತ್ತು. ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದ ವೇಳೆ ಯುವಕನೊಬ್ಬ ಮತಗಟ್ಟೆಯಲ್ಲಿದ್ದ ಮತಪೆಟ್ಟಿಗೆಯನ್ನೇ ಹೊತ್ತೊಯ್ದಿದ್ದಾನೆ. ಆತ ಮತಪೆಟ್ಟಿಗೆ ಹಿಡಿದು ಓಡುತ್ತಿರುವ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಬಂಗಾಳದಲ್ಲಿ ನಿಲ್ಲದ ಸಂಘರ್ಷ – ಗುಂಡು ಹಾರಿಸಿ ಪಕ್ಷೇತರ ಅಭ್ಯರ್ಥಿ ಪುತ್ರಿಯ ಹತ್ಯೆ
ರಾಜ್ಯದ ಹಲವೆಡೆ ಟಿಎಂಸಿ-ಬಿಜೆಪಿ-ಕಾಂಗ್ರೆಸ್-ಸಿಪಿಎಂ ಕಾರ್ಯಕರ್ತರ ಮಧ್ಯೆ ಹಿಂಸಾಚಾರ ಸಂಭವಿಸಿದೆ. ದುಷ್ಕರ್ಮಿಗಳು ಬ್ಯಾಲೆಟ್ ಬಾಕ್ಸನ್ನೇ ಕದ್ದೊಯ್ದಿದ್ದಾರೆ. ಅಷ್ಟೇ ಅಲ್ಲ, ಕೈಯಲ್ಲಿ ಗನ್ ಹಿಡಿದು ಬೆದರಿಸಿ ಕಲ್ಲು ತೂರಿದ್ದಾರೆ. ಮತಗಟ್ಟೆ ಸುತ್ತಮುತ್ತ ನಾಡ ಬಾಂಬ್ಗಳ ಮಳೆಗರಿದಿದ್ದಾರೆ. ಇದಕ್ಕೆಲ್ಲಾ ಆಡಳಿತರೂಢ ಟಿಎಂಸಿಯೇ ಕಾರಣ ಅಂತ ಬಿಜೆಪಿ ದೂರಿದೆ. ಹಿಂಸಾಚಾರದ ಬಗ್ಗೆ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದೆ.
ಇನ್ನು, ಮುರ್ಷಿದಾಬಾದ್, ಮಾಲ್ಡಾ, ಕೂಚ್ಬೆಹಾರ್, ಹೂಗ್ಲಿ, ನಾರ್ತ್ 24 ಪರಗಣ ಜಿಲ್ಲೆಗಳಲ್ಲಿ ವ್ಯಾಪಕ ಹಿಂಸಾಚಾರ ಸಂಭವಿಸಿದೆ. ಒಂದೊಂದು ದೃಶ್ಯಗಳೂ ರಣಭೀಕರವಾಗಿವೆ. ಇದನ್ನೂ ಓದಿ: West Bengal Violence: ಭುಗಿಲೆದ್ದ ಹಿಂಸಾಚಾರಕ್ಕೆ 11 ಮಂದಿ ಬಲಿ
Web Stories