ಮುಂಬೈ: ರಾತ್ರಿ ಊಟಕ್ಕೆ ಬಿರಿಯಾನಿ ಮಾಡಿಲ್ಲ ಎಂಬ ಕಾರಣಕ್ಕೆ ಕುಡಿದ ನಶೆಯಲ್ಲಿದ್ದ ಪತಿರಾಯ ಪತ್ನಿಯನ್ನೇ ಚಾಕುವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ನಡೆದಿದೆ.
ಆಗಸ್ಟ್ 31ರಂದು ರಾತ್ರಿ ವ್ಯಕ್ತಿ ಕುಡಿದ ಅಮಲಿನಲ್ಲಿ ಮನೆಗೆ ಬಂದು, ಊಟಕ್ಕೆ ಬಿರಿಯಾನಿ ಮಾಡದೇ ಇದ್ದುದಕ್ಕೆ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಬಳಿಕ ಕುಟುಂಬದ ಇತರ ಸದಸ್ಯರು ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗಲೂ ಆತ ತನ್ನ ಹೆಂಡತಿಗೆ ಥಳಿಸಿದ್ದಾನೆ. ಬಳಿಕ ಚಾಕು ತೆಗೆದುಕೊಂಡು ಆಕೆಗೆ ಇರಿದಿದ್ದಾನೆ. ಇದನ್ನೂ ಓದಿ: ಚೀನಾ ಭೂಕಂಪ – ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ ವೀಡಿಯೋಗಳು
ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಆರೋಪಿ ವಿಕ್ರಂ ವಿನಾಯಕ್ ದೇಡೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಇದುವರೆಗೂ ಆತನನ್ನು ಬಂಧಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭೀಮಾತೀರದಲ್ಲಿ ಮತ್ತೆ ರಕ್ತಪಾತ – ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದ ತಮ್ಮ