– ಕೊಲೆಗೈದ ಕೋಮಲ್ಳನ್ನು ಕಾಲುವೆಗೆ ಎಸೆದ ಆಸಿಫ್
ನವದೆಹಲಿ: ದೇಶದಲ್ಲಿ ಕೊಲೆಯಂತಹ ಘನಘೋರ ಘಟನೆಗಳು ದಿನೇದಿನೇ ಹೆಚ್ಚುತ್ತಲೇ ಇದೆ. ಈ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ (New Delhi) ಯುವತಿಯ ಸ್ನೇಹಿತನೊಬ್ಬ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ, ಮೃತದೇಹಕ್ಕೆ ಕಲ್ಲು ಕಟ್ಟಿ ಚಾವ್ಲಾ ಕಾಲುವೆಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ.
- Advertisement 2-
- Advertisement 3-
ಸೀಮಾಪುರಿ ಸುಂದರ್ ನಗರದ ನಿವಾಸಿ ಕೋಮಲ್ ಕೊಲೆಯಾದ ಯುವತಿ. ಆಕೆಯ ಆಪ್ತ ಸ್ನೇಹಿತ ಆಸಿಫ್ ಕೊಲೆ ಮಾಡಿರುವ ಆರೋಪಿ. ಇದನ್ನೂ ಓದಿ: ಶರಣ್ಯ ಶೆಟ್ಟಿ ಹೆಸರಿನಲ್ಲಿ ಹಣ ವಂಚನೆ- ಎಚ್ಚರಿಕೆ ನೀಡಿದ ನಟಿ
- Advertisement 4-
ವೃತ್ತಿಯಲ್ಲಿ ಟ್ಯಾಕ್ಸಿ ಚಾಲಕನಾಗಿದ್ದ ಆಸಿಫ್ ಈ ಹಿಂದೆಯೇ ಯುವತಿಗೆ ಪರಿಚಯವಾಗಿದ್ದನು. ಮಾ. 12ರಂದು ಸೀಮಾಪುರಿಯಿಂದ ಆಸಿಫ್ ಆತನ ಕಾರಿನಲ್ಲಿ ಯುವತಿಯನ್ನು ಕರೆದುಕೊಂಡು ಹೋಗಿದ್ದ. ಈ ವೇಳೆ ಅವರಿಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಇದರಿಂದ ಕೋಪಗೊಂಡ ಆಸಿಫ್, ಯುವತಿಯನ್ನು ಕತ್ತು ಹಿಸುಕಿ ಕೊಂದಿದ್ದ. ಬಳಿಕ ಶವ ಮೇಲೆ ತೇಲಬಾರದೆಂದು ಆಕೆಯ ಮೃತದೇಹಕ್ಕೆ ಕಲ್ಲು ಕಟ್ಟಿ ಚಾವ್ಲಾ ಕಾಲುವೆಗೆ ಎಸೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಟ್ಟಿಂಗ್ ಆಪ್ ಪ್ರಚಾರ – ದೇವರಕೊಂಡ, ಪ್ರಕಾಶ್ ರಾಜ್, ರಾಣಾ ಸೇರಿದಂತೆ 25 ಮಂದಿ ಮೇಲೆ ಕೇಸ್
ಯುವತಿಯ ಶವ ಕೊಳೆತಿದ್ದರಿಂದ ಮಾ. 17ರಂದು ಕಾಲುವೆಯಲ್ಲಿ ತೇಲುತ್ತಿತ್ತು. ಇದನ್ನೂ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಚಾವ್ಲಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಗೂಗಲ್ ಪೇ, ಫೋನ್ಪೇ & ಪೇಟಿಎಂ ಬಳಕೆದಾರರಿಗೆ ಸೂಚನೆ – ಏ.1ರಿಂದ ಕೆಲವು ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ ಪಾವತಿ ಸಮಸ್ಯೆ
ಯುವತಿ ನಾಪತ್ತೆಯಾದ ದಿನದಂದು ಆಕೆಯ ಮನೆಯವರು ಸೀಮಾಪುರಿ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು. ಆರೋಪಿ ಆಸಿಫ್ನನ್ನು ಬಂಧಿಸಲಾಗಿದ್ದು, ಕಾರನ್ನು ವಶಕ್ಕೆ ಪಡಿಸಿಕೊಂಡಿದ್ದೇವೆ. ಕೊಲೆಯ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.