ತುಮಕೂರು: ಮಾಜಿ ಶಾಸಕ ಮಸಾಲೆ ಜಯರಾಮ್ (Masale Jayaram) ಅವರ ಕಿಸೆಯಿಂದ ಪಿಕ್ ಪಾಕೆಟ್ ಮಾಡಲು ಮುಂದಾವನನ್ನು ಹಿಡಿದು ಗೂಸಾ ಕೊಟ್ಟು ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.
ಬಿಜೆಪಿ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಬಿ.ವೈ ವಿಜಯೇಂದ್ರ (bY Vijayendra) ಅವರು ಟೆಂಪಲ್ ರನ್ ಮಾಡುತ್ತಿದ್ದಾರೆ. ಅಂತೆಯೇ ಇಂದು ಬೆಳಗ್ಗೆ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು. ವಿಜಯೇಂದ್ರ ಅವರು ಮಠಕ್ಕೆ ಹೋಗುತ್ತಿದ್ದಂತೆಯೇ ನೂಕುನುಗ್ಗಲು ಉಂಟಾಯಿತು. ಈ ವೇಳೆ ಕಳ್ಳನೊಬ್ಬ ಪಿಕ್ ಪಾಕೆಟ್ ಮಾಡಲು ಯತ್ನಿಸಿದ್ದಾರೆ.
ವಿಜಯೇಂದ್ರ ಅವರನ್ನು ಬರ ಮಾಡಿಕೊಳ್ಳಲು ಮಸಾಲೆ ಜಯರಾಮ್ ಅವರು ಬಂದಿದ್ದರು. ಈ ನೂಕುನುಗ್ಗಲು ನಡುವೆ ಮಸಾಲೆ ಜಯರಾಮ್ ಕಿಸೆಗೆ ಕಳ್ಳರು ಕತ್ತರಿ ಹಾಕಲು ಹೊರಟಿದ್ದ. ಪಿಕ್ ಪಾಕೆಟ್ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ಟವರ್ ಏರಿದ ಯುವತಿಯನ್ನು ‘ಮಗಳೇ ಕೆಳಗಿಳಿ’ ಎಂದ ಪ್ರಧಾನಿ ಮೋದಿ!
ವಿಜಯೇಂದ್ರ ಮಠಕ್ಕೆ ಭೇಟಿ ನೀಡಿ ವಾಪಸ್ ಹೋಗುತ್ತಿರುವಾಗ ಜೇಬಿಗೆ ಕೈ ಹಾಕಿ ಕಂತೆ ಹಣ ಎತ್ತುತ್ತಿರುವುದನ್ನು ಗಮನಿಸಿದ ಹಿಂಬಾಲಕರು ಕಳ್ಳನಿಗೆ ಗೂಸಾ ನೀಡಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.