ಮಡಿಕೇರಿ: ಕಾಡಾನೆ ದಾಳಿಯಿಂದಾಗಿ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಸಮೀಪದ ಕೆಳಕೊಡ್ಲಿ ಗ್ರಾಮದಲ್ಲಿ ನಡೆದಿದೆ.
ಸತೀಶ್ ಗಂಭೀರ ಗಾಯಗೊಂಡ ವ್ಯಕ್ತಿ. ಇಂದು ಬೆಳಗ್ಗೆ 7 ಗಂಟೆಗೆ ಎಂದಿನಂತೆ ತಮ್ಮ ತೋಟಕ್ಕೆ ತಮ್ಮ ಮೋಟರ್ ಬೈಕಿನಲ್ಲಿ ತೆರಳುತ್ತಿದ್ದಾಗ 9 ಕಾಡಾನೆಗಳ ಹಿಂಡಿನಿಂದ ಬಂದ ಆನೆಯೊಂದು ದಾಳಿ ಮಾಡಿದೆ. ಹಿಂಬದಿಯಲ್ಲಿ ಬರುತ್ತಿದ್ದ ಜನರು ಕೂಗಾಡಿದ್ದರಿಂದ ಕಾಡಾನೆಗಳು ಕಾಡಿನೊಳಗೆ ಸೇರಿದೆ.
ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಸತೀಶ್ ಅವರಿಗೆ ಕೂಡಲೇ ಕೊಡ್ಲಿಪೇಟೆ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕರೆದೊಯ್ಯಲಾಗಿದೆ. ಯಸಳೂರು ಭಾಗದಿಂದ ಕಟ್ಟೆಪುರ ಅರಣ್ಯದೆಡೆಗೆ ಈ ಕಾಡಾನೆ ಹಿಂಡು ಬಂದಿದೆ.
ಕಳೆದ ಎರಡು ದಿನದ ಹಿಂದೆ ಯಸಳೂರು ಭಾಗದಲ್ಲಿ ಮರಿಯಾನೆಯೊಂದು ಮೃತಪಟ್ಟಿತ್ತು. ಇದರಿಂದ ಈ ಭಾಗಕ್ಕೆ ಬಂದಿದೆ ಎಂದು ಸ್ಥಳಿಯರು ಹೇಳುತ್ತಿದ್ದಾರೆ. ಸ್ಥಳಕ್ಕೆ ಶನಿವಾರ ಸಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv