ಬೆಂಗಳೂರು: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಆನೆಗಳನ್ನು (Elephant) ನೋಡಲು ಜನರು ಜಮಾಯಿಸಿದ್ದು, ಈ ವೇಳೆ ವಿಚಲಿತವಾದ ಆನೆಗಳು ಯುವಕನೊಬ್ಬನನ್ನು (Man) ಅಟ್ಟಾಡಿಸಿ ಸಾಯಿಸಿರುವ ಘಟನೆ ಕೃಷ್ಣಗಿರಿ ಜಿಲ್ಲೆಯ ಸಪ್ಪಾನಿಪಟ್ಟಿಯಲ್ಲಿ ನಡೆದಿದೆ.
ಕಳೆದೆರಡು ದಿನಗಳಿಂದ ಸುತ್ತಮುತ್ತಲಿನ ಗ್ರಾಮಗಳ ಬಳಿ ಬೀಡುಬಿಟ್ಟ ಕಾಡಾನೆಗಳು ರೈತರು ಬೆಳೆದಿದ್ದ ತರಕಾರಿ ಬೆಳೆಗಳನ್ನು ತಿಂದು, ತುಳಿದು ಹಾಳು ಮಾಡಿದ್ದವು. ಹೊಲ-ಗದ್ದೆಗಳ ಬಳಿ ಆನೆಗಳು ಇರುವ ಮಾಹಿತಿ ತಿಳಿದು ಸೆಲ್ಫಿ ತೆಗೆಯಲು ಮುಂದಾಗಿದ್ದ ಯುವಕ ರಾಮಕುಮಾರ್ ಮೇಲೆ ಕಾಡಾನೆ ದಾಳಿ (Elephant Attack) ಮಾಡಿದೆ. ಇದರಿಂದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಗ್ಯಾಸ್ ಪೈಪ್ಲೈನ್ ಕಟ್ಟಾಗಿ ಭೀಕರ ಸ್ಫೋಟ- ಮನೆಗಳು ಧ್ವಂಸ, ಮೂವರಿಗೆ ಗಂಭೀರ ಗಾಯ
- Advertisement -
- Advertisement -
ಇದೇ ವೇಳೆ ಜನರು ಗುಂಪು ಗುಂಪಾಗಿ ಸೇರಿದ್ದರಿಂದ ಭಯಗೊಂಡು ಓಡಲು ಪ್ರಾರಂಭಿಸಿದ 2 ಕಾಡಾನೆಗಳು ಹೆದ್ದಾರಿ ದಾಟುತ್ತಿದ್ದಾಗ ಕಾರೊಂದಕ್ಕೆ ಡಿಕ್ಕಿ ಹೊಡೆದಿವೆ. ಇದರಿಂದ ಕಾರು ಜಖಂಗೊಂಡಿದ್ದು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
- Advertisement -
ಪದೇ ಪದೇ ಕಾಡಾನೆಗಳು ಗ್ರಾಮದತ್ತ ಆಗಮಿಸಿ ಜನರಿಗೆ ಪ್ರಾಣ ಭಯದ ವಾತಾವರಣ ಸೃಷ್ಟಿಸಿದೆ. ಇದೀಗ ಅವಾಂತರಗಳಿಂದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಸ್ತೆ ಮಧ್ಯೆಯೇ ಯಡಿಯೂರಪ್ಪರನ್ನ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು