Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Ayodhya Ram Mandir

ಜನವರಿ 23ರಿಂದ ಅಯೋಧ್ಯೆಯಲ್ಲಿ 48 ದಿನ ಮಂಡಲೋತ್ಸವ – ಉಡುಪಿ ಪೇಜಾವರ ಶ್ರೀಗಳ ನೇತೃತ್ವ

Public TV
Last updated: January 11, 2024 7:57 pm
Public TV
Share
4 Min Read
Vishwaprasanna Teertha Swamiji
SHARE

– ಮಂಡಲ ಪೂಜೆಗೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಕಲಿತ 150 ವಿದ್ವಾಂಸರು

ದೀಪಕ್‌ ಜೈನ್‌

ಉಡುಪಿ: ರಾಮಲಲ್ಲಾನ ಪ್ರತಿಷ್ಠೆ ನಂತರ ಅಯೋಧ್ಯೆಯಲ್ಲಿ 48 ದಿನದ ಮಂಡಲೋತ್ಸವ (Ayodhya Mandala Pooja) ನಡೆಯಲಿದೆ. ಜನವರಿ 23ರಿಂದ 48 ದಿನಗಳ ಕಾಲ ಮಂಡಲ ಪೂಜೆಯು ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Pejavara Seer) ನೇತೃತ್ವದಲ್ಲಿ ನಡೆಯಲಿದೆ.

ರಾಮಮಂದಿರ ಪ್ರಾಣ ಪ್ರತಿಷ್ಠೆ (Ayodhya Ram Mandir) ಇದೇ ಜನವರಿ 22ರಂದು ನಡೆಯಲಿದೆ. ಅದಕ್ಕೂ ಮುಂಚಿತವಾಗಿ ಅಂದರೆ ಜನವರಿ 17 ಕ್ಕೆ ಪ್ರತಿಮೆ ಕೆತ್ತಿದ ಸ್ಥಳದಿಂದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಪ್ರತಿಮೆಯನ್ನು ಸರಯೂ ನದಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಸರಯೂ ಜಲದ ಅಭಿಷೇಕ ಮಾಡಲಾಗುತ್ತದೆ. ಬಳಿಕ ಮಂದಿರದ ಕಡೆಗೆ ಪ್ರತಿಮೆ ತರಲಾಗುತ್ತದೆ. ಜನವರಿ 18- 19 -20ರಂದು ಅಯೋಧ್ಯೆಯಲ್ಲಿ ಮಹತ್ವದ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಜಲಾಧಿವಾಸ, ಶಯ್ಯಾಧಿವಾಸ, ಧಾನ್ಯಾಧಿವಾಸ ಈ ಪ್ರಕ್ರಿಯೆಗಳು ನಡೆಯುತ್ತವೆ. ಇದು ಬಹಳ ಪ್ರಮುಖವಾದ ಧಾರ್ಮಿಕ ಪ್ರಕ್ರಿಯೆ ಎಂದು ‘ಪಬ್ಲಿಕ್‌ ಟಿವಿ’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರಕ್ಕೆ ಹರಿದುಬಂದ ದೇಣಿಗೆ ಎಷ್ಟು? ಅತಿ ಹೆಚ್ಚು ದೇಣಿಗೆ ಕೊಟ್ಟವರ‍್ಯಾರು ಗೊತ್ತಾ?

ayodhya ram mandir

150ಕ್ಕೂ ಹೆಚ್ಚು ಅರ್ಚಕರು:
ಜನವರಿ 21 ಪ್ರಾಣ ಪ್ರತಿಷ್ಠೆಗೆ ಬೇಕಾದ ಎಲ್ಲಾ ಪೂರ್ವ ಸಿದ್ಧತೆ ಅಯೋಧ್ಯೆಯಲ್ಲಿ ನಡೆಯುತ್ತಿದೆ. ಹೋಮ ಹವನ, ರಾಮಲಲ್ಲಾ ಮೂರ್ತಿಗೆ ಜೀವ ತುಂಬುವ ಎಲ್ಲಾ ವಿಧಿ ವಿಧಾನಗಳನ್ನು ವೇದೋಕ್ತವಾಗಿ, ಶ್ರದ್ಧಾಪೂರ್ವಕವಾಗಿ ನೆರವೇರಿಸಲಾಗುತ್ತದೆ. ಜನವರಿ 22 ರಂದು ಅಭಿಜಿನ್ ಮಹೂರ್ತದಲ್ಲಿ ಪ್ರಾಣ ಪ್ರತಿಷ್ಠೆ ಆಗಲಿದೆ. 150ಕ್ಕಿಂತಲೂ ಹೆಚ್ಚಿನ ಪ್ರಧಾನ ಅರ್ಚಕರು ಸಹಾಯಕರು ಈ ಧಾರ್ಮಿಕ ಪ್ರಕ್ರಿಯೆ ಮಂಡಲೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

48 ದಿನಗಳ ಅವಧಿಯೇ ಒಂದು ಮಂಡಲ:
ಜನವರಿ 23 ರಿಂದ ಮಂಡಲಪೂಜೆ ನಡೆಯಲಿದೆ. 48 ದಿನಗಳ ಕಾಲ ಅವಧಿಯೇ ಒಂದು ಮಂಡಲ. ಪ್ರಾಣಪ್ರತಿಷ್ಠೆಯ 48 ದಿನಗಳ ಕಾಲ ನಿತ್ಯ ಪ್ರತಿಮೆಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಅದಕ್ಕೆ ವೇದೋಕ್ತ ಮಹಾಮಂತ್ರದ ಮೂಲಕ ಆರಾಧನೆ ಮಾಡುತ್ತೇವೆ. ಪ್ರತಿನಿತ್ಯ ಎರಡು ಮಂತ್ರಗಳನ್ನು ಇಟ್ಟುಕೊಂಡು ಆರಾಧನೆ ಮಾಡುತ್ತೇವೆ ಎಂದು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ‘ಪಬ್ಲಿಕ್‌ ಟಿವಿ’ಗೆ ಹೇಳಿದ್ದಾರೆ. ಇದನ್ನೂ ಓದಿ: ಸರಯೂ ನದಿ ತಟದಲ್ಲಿ 1008 ಯಜ್ಞ ಮಂಟಪ ನಿರ್ಮಾಣ – 21 ಸಾವಿರ ಯತಿಗಳಿಂದ ರಾಮನಾಮ ಮಹಾ ಯಜ್ಞ

Ayodhya Ram Mandir 1

ಮೊದಲ 44 ದಿನ 2 ಮಂತ್ರದ ಆರಾಧನೆ:
ಜಪ, ಹೋಮ, ತರ್ಪಣ ಜೊತೆಗೆ ಪ್ರತಿಮೆಗೆ ಕಲಶಾಭಿಷೇಕ ನಡೆಯುತ್ತದೆ. ಬೆಳಿಗ್ಗೆ ಯಜ್ಞ, ಯಾಗ, ಕಲಶ ಅಭಿಷೇಕ ನಡೆಯುತ್ತದೆ. ಮುಸ್ಸಂಜೆ ಬಳಿಕ ವೇದ ಪಾರಾಯಣ, ಅಷ್ಟಾದಶ ಪುರಾಣ ಪಾರಾಯಣ, ರಾಮಾಯಣ, ಮಹಾಭಾರತ ಪಾರಾಯಣ ನಡೆಯಲಿದೆ. ಮುಸ್ಸಂಜೆ ನಿತ್ಯ ಪಲ್ಲಕ್ಕಿ ಉತ್ಸವ ನಡೆಯುತ್ತದೆ. ದೇವರ ವಿಗ್ರಹ ಇಟ್ಟು ಆರಾಧನೆ ಮಾಡಲಾಗುತ್ತದೆ. ನೃತ್ಯ, ವಾದ್ಯ ಸಹಿತ ಶೋಡಷೋಪಚಾರ ಪೂಜೆ ಜರುಗಲಿದೆ. ಮೊದಲನೇ 44 ದಿನಗಳ ಕಾಲ ಪ್ರತಿದಿನ ಎರಡು ಮಂತ್ರ ಇಟ್ಟುಕೊಂಡು ಆರಾಧನೆ ನಡೆಯುತ್ತದೆ. ಕೊನೆಯ ನಾಲ್ಕು ದಿನ ಸಹಸ್ರ ಕಲಶಾಭಿಷೇಕ ನಡೆಯುತ್ತದೆ.

ನಮ್ಮ ಬ್ರಹ್ಮಕಲಶವೇ, ಉತ್ತರ ಭಾರತದ ಕುಂಬಾಭಿಷೇಕ!
ನಮ್ಮಲ್ಲಿ ನಡೆಯುವ ಬ್ರಹ್ಮ ಕುಂಭಾಭಿಷೇಕ ಅಥವಾ ಬ್ರಹ್ಮಕಲಶವನ್ನು ಉತ್ತರ ಭಾರತದಲ್ಲಿ ಕುಂಭಾಭಿಷೇಕ ಎನ್ನುತ್ತಾರೆ. ಪ್ರಾಣ ಪ್ರತಿಷ್ಠೆಯಿಂದ 48 ದಿನಗಳ ಒಟ್ಟು ಆಚರಣೆ ಶಾಸ್ತ್ರೋಕ್ತವಾಗಿ ನಡೆಯುತ್ತದೆ. 48 ದಿನ ವೇದೋಕ್ತಕರ್ಮದಿಂದ ನಡೆಯಲಿದೆ. 48 ದಿನಗಳ ಮಂಡಲ ಪೂಜೆಯ ಜವಾಬ್ದಾರಿಯನ್ನು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ವಹಿಸಲಾಗಿದೆ. ಇದನ್ನೂ ಓದಿ: ಅಯೋಧ್ಯೆಗೆ ತಲುಪಿತು 2,400 ಕೆ.ಜಿಯ ದೇಶದ ಅತೀ ದೊಡ್ಡ ಘಂಟೆ

Ram Mandir

ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದವರು:
ವಿಶ್ವೇಶ ತೀರ್ಥರು ಬೆಂಗಳೂರಿನಲ್ಲಿ ಪೂರ್ಣಪ್ರಜ್ಞ ವಿದ್ಯಾಪೀಠ ಸ್ಥಾಪಿಸಿದ್ದರು. 65 ವರ್ಷಗಳಿಂದ ಬೆಂಗಳೂರಿನ ವಿದ್ಯಾಪೀಠದಲ್ಲಿ ವಿದ್ಯಾರ್ಥಿ, ವಿದ್ವಾಂಸರು ಸೃಷ್ಟಿಯಾಗಿದ್ದಾರೆ. ರಾಜ್ಯದ ನಾನಾ ಮೂಲೆಯಲ್ಲಿರುವ, ದೇಶದ ಅನೇಕ ಕಡೆಗಳಲ್ಲಿರುವ ಇಂತಹ ವಿದ್ವಾಂಸರು ಮಂಡಲೋತ್ಸವ ಧಾರ್ಮಿಕ ಕಾರ್ಯ ನಡೆಸುತ್ತಾರೆ. ಮಂಡಲೋತ್ಸವದಲ್ಲಿ ಭಾಗಿಯಾಗ್ತಾರೆ‌.

400 ವೈದಿಕರು ಶಿಫ್ಟ್‌ಗಳಲ್ಲಿ ಭಾಗಿ!:
ಹೆಚ್ಚು ವಿದ್ವಾಂಸರು, ವೈದಿಕರು ಭಾಗವಹಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ದಿನ ಪ್ರತ್ಯೇಕ ಪ್ರತ್ಯೇಕವಾಗಿ ಒಟ್ಟು 400 ವೈದಿಕರು ಯಜ್ಞ ಯಾಗದಲ್ಲಿ ಭಾಗಿಯಾಗ್ತಾರೆ. ಒಂದು ದಿನ ಭಾಗಿಯಾದವರು, ಅನುಷ್ಠಾನದಲ್ಲಿ ಇದ್ದವರು ಮರುದಿನ ಇರುವುದಿಲ್ಲ. ಬದಲಿಸಿ ಹಲವರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಶಿಫ್ಟ್‌ ವ್ಯವಸ್ಥೆಯಲ್ಲಿ ಈ ಕಾರ್ಯಚಟುವಟಿಕೆಗಳು ನೆರವೇರಲಿವೆ ಎಂದು ಪೇಜಾವರ ಶ್ರೀಗಳು ‘ಪಬ್ಲಿಕ್‌ ಟಿವಿ’ಗೆ ತಿಳಿಸಿದ್ದಾರೆ. ಇದನ್ನೂ ಓದಿ: 8‌ ಕೆಜಿ ಬೆಳ್ಳಿ ಪಾದುಕೆ ಹೊತ್ತು 7,200 km ಪಾದಯಾತ್ರೆ – 64ರ ವೃದ್ಧನ ಭಕ್ತಿಗೆ ರಾಮನ ಭಕ್ತರಿಂದ ಮೆಚ್ಚುಗೆ

ಪ್ರತಿ ದಿನ ಪ್ರತ್ಯೇಕ ವಿದ್ವಾಂಸರಿಂದ ಧಾರ್ಮಿಕ ಕಾರ್ಯಕ್ರಮ ಇರಲಿದೆ. ಪ್ರತಿದಿನ 10 ರಿಂದ 15 ವಿದ್ವಾಂಸರು ಬೇಕಾಗುತ್ತಾರೆ. ಕೊನೆಯ ನಾಲ್ಕು ದಿನಗಳ ಕಾಲ ನೂರು ಮಂದಿ ವಿದ್ವಾಂಸರು ಬೇಕಾಗುತ್ತದೆ. ಅಷ್ಟು ದಿನಗಳ ಕಾಲ ನಾನು ಅಯೋಧ್ಯೆಯಲ್ಲಿ ಇರುತ್ತೇನೆ. ಇವತ್ತು ಧಾರ್ಮಿಕ ವಿಧಿ ವಿಧಾನಗಳ ಮೇಲೆ ಉಸ್ತುವಾರಿಯನ್ನು ನೋಡಿಕೊಳ್ಳುತ್ತೇನೆ ಎಂದು ಪೇಜಾವರ ಶ್ರೀಗಳು ‘ಪಬ್ಲಿಕ್‌ ಟಿವಿ’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾಹಿತಿ ನೀಡಿದ್ದಾರೆ.

TAGGED:AyodhyaMandalotsavaRam Mandirಅಯೋಧ್ಯೆಮಂಡಲೋತ್ಸವರಾಮಮಂದಿರ
Share This Article
Facebook Whatsapp Whatsapp Telegram

Cinema Updates

Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
6 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
8 hours ago
Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
10 hours ago
shivarame gowda
ಕಮಲ್ ಹೇಳಿಕೆ ನೋಡಿದ್ರೆ.. ಕನ್ನಡಿಗರೆಲ್ಲಾ ತಮಿಳಿಗೆ ಹುಟ್ಟಿದ್ದಾರೆ ಅನ್ನೋ ರೀತಿಯಿದೆ – ಶಿವರಾಮೇಗೌಡ ಲೇವಡಿ
11 hours ago

You Might Also Like

RCB vs PBKS
Cricket

IPL Final | ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಮದಗಜಗಳ ಗುದ್ದಾಟ – ಆರ್‌ಸಿಬಿಯೇ ಗೆಲ್ಲುವ ಫೆವರೆಟ್‌

Public TV
By Public TV
3 hours ago
pathrode
Food

ಮಳೆಗಾಲಕ್ಕೆ ಮಲೆನಾಡು ಸ್ಪೆಷಲ್‌ – ಟೇಸ್ಟಿ ಪತ್ರೊಡೆ ರೆಸಿಪಿ!

Public TV
By Public TV
4 hours ago
Vladimir Putin
Latest

ಶಾಂತಿ ಸಭೆ ಮೊಟಕು – ಬೇಷರತ್‌ ಕದನ ವಿರಾಮ ಮಾತುಕತೆ ತಿರಸ್ಕರಿಸಿದ ರಷ್ಯಾ

Public TV
By Public TV
5 hours ago
H K Patil
Districts

ಗದಗ | ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಸ್ಕೂಲ್‌ಗೆ ಸೇರಿಸಿದ ಹೆಚ್.ಕೆ ಪಾಟೀಲ್

Public TV
By Public TV
5 hours ago
Ayodhya Ram Mandir
Latest

ಜೂ.3ರಂದು ಅಯೋಧ್ಯಾ ರಾಮಮಂದಿರದ ಸ್ವರ್ಣಗೋಪುರ ಉದ್ಘಾಟನೆ

Public TV
By Public TV
5 hours ago
MC SUDHAKAR
Chikkaballapur

ಪ್ರತಿ ಬಾರಿ ಕಪ್ ನಮ್ದೆ ಅಂತಿದ್ವಿ, ಈ ಸಲ ಆದ್ರೂ ಕಪ್ ನಮ್ಮದಾಗಲಿ: ಎಂ.ಸಿ ಸುಧಾಕರ್

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?