Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಡ್ಡಾಯ ಕನ್ನಡ ನಾಮಫಲಕ ಗಡುವು ಒಂದು ದಿನ ವಿಸ್ತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಡ್ಡಾಯ ಕನ್ನಡ ನಾಮಫಲಕ ಗಡುವು ಒಂದು ದಿನ ವಿಸ್ತರಣೆ

Bengaluru City

ಕಡ್ಡಾಯ ಕನ್ನಡ ನಾಮಫಲಕ ಗಡುವು ಒಂದು ದಿನ ವಿಸ್ತರಣೆ

Public TV
Last updated: February 28, 2024 5:35 pm
Public TV
Share
2 Min Read
Kannada Name Board
SHARE

– ನಾಳೆಯೊಳಗೆ ನಾಮಫಲಕ ಹಾಕದಿದ್ದರೆ ನಾವೇ ತೆರವು ಮಾಡ್ತೀವಿ
– ಅಂಗಡಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಎಚ್ಚರಿಕೆ

ಬೆಂಗಳೂರು: ಕಡ್ಡಾಯ ಕನ್ನಡ ನಾಮಫಲಕ (Kannada Name Board) ಅಳವಡಿಕೆಗೆ ಇಂದು ಕೊನೆಯ ದಿನವಾಗಿದ್ದು, ಈ ಗಡುವನ್ನು ಒಂದು ದಿನ ವಿಸ್ತರಣೆ ಮಾಡಿ ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಆದೇಶ ಹೊರಡಿಸಿದ್ದಾರೆ.

ಇಂದು ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಗಡುವು ನೀಡಲಾಗಿತ್ತು. ಆದರೆ ಇದನ್ನು ಕಮೀಷನರ್ ಒಂದು ದಿನ ವಿಸ್ತರಣೆ ಮಾಡಿದ್ದಾರೆ. 3,000 ಅಂಗಡಿಗಳು ಇನ್ನೂ ಕನ್ನಡ ನಾಮಫಲಕ ಹಾಕಿಲ್ಲ. ನಾಳೆಯೊಳಗೆ (ಫೆ.29) ನಾಮಫಲಕ ಹಾಕದಿದ್ದರೆ ನಾವೇ ತೆರವು ಮಾಡುತ್ತೇವೆ. ಕೂಡಲೇ ನಾಮಫಲಕ ಬದಲಾಯಿಸಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಕೇಸ್‌ – ಅಖಿಲೇಶ್‌ ಯಾದವ್‌ಗೆ ಸಿಬಿಐ ಸಮನ್ಸ್‌

ಕಡ್ಡಾಯ ಕನ್ನಡ ನಾಮಫಲಕ ಬಳಸದವರಿಗೆ ಮತ್ತೊಂದು ದಿನ ಅವಕಾಶ ನೀಡಲಾಗಿದೆ. ನಾಳೆ ಸಂಜೆಯವರೆಗೆ ನಾಮಫಲಕ ಬದಲಾವಣೆಗೆ ಅವಕಾಶ ನೀಡಿದ್ದು, ನಾಳೆಯೊಳಗೆ ಬದಲಾಯಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ಕೊಡಲಾಗಿದೆ. ಈಗಾಗಲೇ 90% ರಷ್ಟು ನಾಮಫಲಕ ಬದಲಾಗಿದೆ. ಇನ್ನು ಉಳಿದಿರೋದು 3 ಸಾವಿರ ನಾಮಫಲಕ ಮಾತ್ರ. ಅವರು ನಾಳೆ ಸಂಜೆಯೊಳಗೆ ಬದಲಾಯಿಸಬೇಕು. ಕೆಲವು ಅಂತಾರಾಷ್ಟ್ರೀಯ ಕಂಪನಿಗಳು ಹಾಗೂ ಎಸ್‌ಬಿಐ, ಕೆನರಾ ಬ್ಯಾಂಕ್ ಮನವಿ ಕೊಟ್ಟಿವೆ. ನಾಮಫಲಕ ಅಳವಡಿಕೆಗೆ ಮತ್ತಷ್ಟು ಗಡುವು ಕೇಳಿದ್ದಾರೆ. ಈ ಬಗ್ಗೆ ನಾಳೆ ಸಂಜೆ ತೀರ್ಮಾನ ಮಾಡುತ್ತೇವೆ ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ವಿದೇಶದಲ್ಲಿ ನೆಲೆಸಿರೋ ಭಾರತೀಯರಿಗೂ ರಕ್ಷಣೆ ಸಿಕ್ತಿದೆ: ಜೈಶಂಕರ್ ಶ್ಲಾಘನೆ

ಇನ್ನು ಈ ಕುರಿತು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಮಾತನಾಡಿದ್ದು, ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಬಿಬಿಎಂಪಿ ಹಾಗೂ ಸರ್ಕಾರ ನಾಮಫಲಕ ಜಾರಿಗೊಳಿಸಲು ಇವತ್ತಿನವರೆಗೂ ಗಡುವು ಕೇಳಿತ್ತು. ಒಟ್ಟು 50,216ಗಳಲ್ಲಿ 40,600 ಉದ್ಯಮಿಗಳಿಗೆ ನೋಟಿಸ್ ಕೊಟ್ಟಿದ್ದೇವೆ. 3,600 ಉದ್ಯಮಿಗಳು ಕನ್ನಡ ನಾಮಫಲಕ ಹಾಕಿಕೊಳ್ಳಬೇಕು. ಒಂದು ವೇಳೆ ನಾಳೆಯೊಳಗೆ ಕನ್ನಡ ನಾಮಫಲಕ ಜಾರಿಯಾಗದಿದ್ದರೆ ಅವರ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಕಮೀಷನರ್ ಹೇಳಿದ್ದಾರೆ. 100% ಕನ್ನಡೀಕರಣ ಆಗದಿದ್ದರೇ ಮತ್ತೆ ಬೀದಿಗೆ ಇಳಿಯುತ್ತೇವೆ ಎಂದರು. ಇದನ್ನೂ ಓದಿ: ಲೋಕಸಭಾ ಚುನಾವಣೆಗೂ ಮುನ್ನ I.N.D.I.A ಒಕ್ಕೂಟದಲ್ಲಿ ಒಡಕು – ಚೂರನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್‌?

ಇದು ಬೆಂಗಳೂರಿಗೆ ಮಾತ್ರ ಸೀಮಿತವಾಗಬಾರದು. ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಕನ್ನಡ ನಾಮಫಲಕಗಳು ಇರಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿ ಕರವೇ ಕಾರ್ಯಕರ್ತರು ಬೀದಿಗಿಳಿಯುತ್ತಾರೆ. ಬೆಂಗಳೂರಲ್ಲಿ 3,500-4,000 ಉದ್ಯಮಿಗಳು ಕನ್ನಡ ಬಳಸದೇ ಇರೋರು ನಾಮಫಲಕದಲ್ಲಿ 60% ಕನ್ನಡ ನಾಮಫಲಕ ಹಾಕಬೇಕು. ನುಡಿದಂತೆ ನಡೆಯದಿದ್ದರೇ, ಕನ್ನಡ ಬಳಸದೇ ಇದ್ದರೇ ಮತ್ತೆ ಬೆಂಗಳೂರಲ್ಲಿ ಕರವೇ ಕಾರ್ಯಕರ್ತರು ಬೀದಿಗೆ ಇಳಿಯುತ್ತೇವೆ. ನಾಮಫಲಕ ಹಾಕದೇ ಇರೋರ ಮೇಲೆ ಮಾರ್ಚ್ 1 ರವರೆಗೂ ಬಿಬಿಎಂಪಿ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ಕಾದುನೋಡುತ್ತೇವೆ. ಬಿಬಿಎಂಪಿಯಿಂದ ಯಾವುದೇ ಕ್ರಮ ಆಗದಿದ್ದರೇ ಮತ್ತೆ ಮಾರ್ಚ್ 5 ರಂದು ಬೀದಿಗಿಳಿಯುತ್ತೇವೆ. ಮಾರ್ಚ್ 5 ರಂದು ಬಿಬಿಎಂಪಿ ವಿರುದ್ಧ ಕರವೇ ಪ್ರೊಟೆಸ್ಟ್ ಮಾಡುವುದಾಗಿ ನಾರಾಯಣ ಗೌಡರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ: 15 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಸ್ಪೀಕರ್‌

TAGGED:bbmpbengalurukannada name boardKarnataka rakshana vedikenarayana gowdatushar girinathಕನ್ನಡ ನಾಮಫಲಕಕರ್ನಾಟಕ ರಕ್ಷಣಾ ವೇದಿಕೆತುಷಾರ್‌ ಗಿರಿನಾಥ್‌ನಾರಾಯಣ ಗೌಡಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

bigg boss season 12 kannada Dhanush becomes captain for the second time
ನಿಯಮ ಉಲ್ಲಂಘಿಸಿದ್ರೂ ಮನೆ ಮಂದಿಯ ಸಹಾಯದಿಂದ ಮತ್ತೆ ನಾಯಕನಾದ ಧನುಷ್‌
Cinema Latest Top Stories TV Shows
Akshay Kumar Rani Mukerji
ʻOh My God 3ʼ ಸಿನಿಮಾಗಾಗಿ ಒಂದಾದ ರಾಣಿ ಮುಖರ್ಜಿ – ಅಕ್ಷಯ್‌ ಕುಮಾರ್
Bollywood Cinema Latest
Ashwini Gowda and Gilli Nata Talk Fight
ಉಣ್ಕೊಂಡ್‌ ತಿನ್ಕೊಂಡ್ ಇರೋಕೆ ಬಿಗ್‌ಬಾಸ್ ಮನೆಗೆ ಬಂದಿದ್ಯಾ? – ಗಿಲ್ಲಿ ವಿರುದ್ಧ ಅಶ್ವಿನಿ ಕೆಂಡಾಮಂಡಲ
Cinema Latest Sandalwood
Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories

You Might Also Like

Ballari 1
Bellary

Video | ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಮುಂದೂಡಿಕೆ

Public TV
By Public TV
59 minutes ago
Madikeri
Districts

Kodagu | ಕಾವೇರಿ ನದಿ ತಟದಲ್ಲಿರೋ ನಿವಾಸಿಗಳ ಬದುಕು ಇಂದಿಗೂ ಅತಂತ್ರ

Public TV
By Public TV
1 hour ago
Park
Bengaluru City

ಬೆಂಗಳೂರಿನಲ್ಲಿ 250 ಕೋಟಿ ವೆಚ್ಚದಲ್ಲಿ ವಿಶ್ವ ಗುರು ಬಸವಣ್ಣ ಉದ್ಯಾನವನಕ್ಕೆ ಕ್ಯಾಬಿನೆಟ್‌ ಒಪ್ಪಿಗೆ

Public TV
By Public TV
2 hours ago
elon musk and x
Latest

ಅಶ್ಲೀಲ ವಿಚಾರ ಪೋಸ್ಟ್‌ಗಳಿಗೆ ವೇದಿಕೆ – ಎಕ್ಸ್‌ಗೆ ಕೇಂದ್ರದಿಂದ ನೋಟಿಸ್‌

Public TV
By Public TV
2 hours ago
Siddaramaiah 10
Bengaluru City

ಮೋದಿ ಹೊಗಳುಭಟ್ಟರ ಸಮೀಕ್ಷಾ ವರದಿಯಲ್ಲಿ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ? – EVM ಸರ್ವೆಗೆ ಸಿಎಂ ಕಿಡಿ

Public TV
By Public TV
2 hours ago
Siddaramaiah
Latest

Ballari Clash | ಘಟನಾ ಸ್ಥಳದಲ್ಲಿ ಇರದಿದ್ದಕ್ಕೆ ಎಸ್ಪಿ ಸಸ್ಪೆಂಡ್‌ ಮಾಡಿದ್ದೇನೆ – ಸಿಎಂ ಸಮರ್ಥನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?