Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಡ್ಡಾಯ ಕನ್ನಡ ನಾಮಫಲಕ ಗಡುವು ಒಂದು ದಿನ ವಿಸ್ತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಡ್ಡಾಯ ಕನ್ನಡ ನಾಮಫಲಕ ಗಡುವು ಒಂದು ದಿನ ವಿಸ್ತರಣೆ

Bengaluru City

ಕಡ್ಡಾಯ ಕನ್ನಡ ನಾಮಫಲಕ ಗಡುವು ಒಂದು ದಿನ ವಿಸ್ತರಣೆ

Public TV
Last updated: February 28, 2024 5:35 pm
Public TV
Share
2 Min Read
Kannada Name Board
SHARE

– ನಾಳೆಯೊಳಗೆ ನಾಮಫಲಕ ಹಾಕದಿದ್ದರೆ ನಾವೇ ತೆರವು ಮಾಡ್ತೀವಿ
– ಅಂಗಡಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಎಚ್ಚರಿಕೆ

ಬೆಂಗಳೂರು: ಕಡ್ಡಾಯ ಕನ್ನಡ ನಾಮಫಲಕ (Kannada Name Board) ಅಳವಡಿಕೆಗೆ ಇಂದು ಕೊನೆಯ ದಿನವಾಗಿದ್ದು, ಈ ಗಡುವನ್ನು ಒಂದು ದಿನ ವಿಸ್ತರಣೆ ಮಾಡಿ ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಆದೇಶ ಹೊರಡಿಸಿದ್ದಾರೆ.

ಇಂದು ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಗಡುವು ನೀಡಲಾಗಿತ್ತು. ಆದರೆ ಇದನ್ನು ಕಮೀಷನರ್ ಒಂದು ದಿನ ವಿಸ್ತರಣೆ ಮಾಡಿದ್ದಾರೆ. 3,000 ಅಂಗಡಿಗಳು ಇನ್ನೂ ಕನ್ನಡ ನಾಮಫಲಕ ಹಾಕಿಲ್ಲ. ನಾಳೆಯೊಳಗೆ (ಫೆ.29) ನಾಮಫಲಕ ಹಾಕದಿದ್ದರೆ ನಾವೇ ತೆರವು ಮಾಡುತ್ತೇವೆ. ಕೂಡಲೇ ನಾಮಫಲಕ ಬದಲಾಯಿಸಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಕೇಸ್‌ – ಅಖಿಲೇಶ್‌ ಯಾದವ್‌ಗೆ ಸಿಬಿಐ ಸಮನ್ಸ್‌

ಕಡ್ಡಾಯ ಕನ್ನಡ ನಾಮಫಲಕ ಬಳಸದವರಿಗೆ ಮತ್ತೊಂದು ದಿನ ಅವಕಾಶ ನೀಡಲಾಗಿದೆ. ನಾಳೆ ಸಂಜೆಯವರೆಗೆ ನಾಮಫಲಕ ಬದಲಾವಣೆಗೆ ಅವಕಾಶ ನೀಡಿದ್ದು, ನಾಳೆಯೊಳಗೆ ಬದಲಾಯಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ಕೊಡಲಾಗಿದೆ. ಈಗಾಗಲೇ 90% ರಷ್ಟು ನಾಮಫಲಕ ಬದಲಾಗಿದೆ. ಇನ್ನು ಉಳಿದಿರೋದು 3 ಸಾವಿರ ನಾಮಫಲಕ ಮಾತ್ರ. ಅವರು ನಾಳೆ ಸಂಜೆಯೊಳಗೆ ಬದಲಾಯಿಸಬೇಕು. ಕೆಲವು ಅಂತಾರಾಷ್ಟ್ರೀಯ ಕಂಪನಿಗಳು ಹಾಗೂ ಎಸ್‌ಬಿಐ, ಕೆನರಾ ಬ್ಯಾಂಕ್ ಮನವಿ ಕೊಟ್ಟಿವೆ. ನಾಮಫಲಕ ಅಳವಡಿಕೆಗೆ ಮತ್ತಷ್ಟು ಗಡುವು ಕೇಳಿದ್ದಾರೆ. ಈ ಬಗ್ಗೆ ನಾಳೆ ಸಂಜೆ ತೀರ್ಮಾನ ಮಾಡುತ್ತೇವೆ ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ವಿದೇಶದಲ್ಲಿ ನೆಲೆಸಿರೋ ಭಾರತೀಯರಿಗೂ ರಕ್ಷಣೆ ಸಿಕ್ತಿದೆ: ಜೈಶಂಕರ್ ಶ್ಲಾಘನೆ

ಇನ್ನು ಈ ಕುರಿತು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಮಾತನಾಡಿದ್ದು, ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಬಿಬಿಎಂಪಿ ಹಾಗೂ ಸರ್ಕಾರ ನಾಮಫಲಕ ಜಾರಿಗೊಳಿಸಲು ಇವತ್ತಿನವರೆಗೂ ಗಡುವು ಕೇಳಿತ್ತು. ಒಟ್ಟು 50,216ಗಳಲ್ಲಿ 40,600 ಉದ್ಯಮಿಗಳಿಗೆ ನೋಟಿಸ್ ಕೊಟ್ಟಿದ್ದೇವೆ. 3,600 ಉದ್ಯಮಿಗಳು ಕನ್ನಡ ನಾಮಫಲಕ ಹಾಕಿಕೊಳ್ಳಬೇಕು. ಒಂದು ವೇಳೆ ನಾಳೆಯೊಳಗೆ ಕನ್ನಡ ನಾಮಫಲಕ ಜಾರಿಯಾಗದಿದ್ದರೆ ಅವರ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಕಮೀಷನರ್ ಹೇಳಿದ್ದಾರೆ. 100% ಕನ್ನಡೀಕರಣ ಆಗದಿದ್ದರೇ ಮತ್ತೆ ಬೀದಿಗೆ ಇಳಿಯುತ್ತೇವೆ ಎಂದರು. ಇದನ್ನೂ ಓದಿ: ಲೋಕಸಭಾ ಚುನಾವಣೆಗೂ ಮುನ್ನ I.N.D.I.A ಒಕ್ಕೂಟದಲ್ಲಿ ಒಡಕು – ಚೂರನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್‌?

ಇದು ಬೆಂಗಳೂರಿಗೆ ಮಾತ್ರ ಸೀಮಿತವಾಗಬಾರದು. ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಕನ್ನಡ ನಾಮಫಲಕಗಳು ಇರಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿ ಕರವೇ ಕಾರ್ಯಕರ್ತರು ಬೀದಿಗಿಳಿಯುತ್ತಾರೆ. ಬೆಂಗಳೂರಲ್ಲಿ 3,500-4,000 ಉದ್ಯಮಿಗಳು ಕನ್ನಡ ಬಳಸದೇ ಇರೋರು ನಾಮಫಲಕದಲ್ಲಿ 60% ಕನ್ನಡ ನಾಮಫಲಕ ಹಾಕಬೇಕು. ನುಡಿದಂತೆ ನಡೆಯದಿದ್ದರೇ, ಕನ್ನಡ ಬಳಸದೇ ಇದ್ದರೇ ಮತ್ತೆ ಬೆಂಗಳೂರಲ್ಲಿ ಕರವೇ ಕಾರ್ಯಕರ್ತರು ಬೀದಿಗೆ ಇಳಿಯುತ್ತೇವೆ. ನಾಮಫಲಕ ಹಾಕದೇ ಇರೋರ ಮೇಲೆ ಮಾರ್ಚ್ 1 ರವರೆಗೂ ಬಿಬಿಎಂಪಿ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ಕಾದುನೋಡುತ್ತೇವೆ. ಬಿಬಿಎಂಪಿಯಿಂದ ಯಾವುದೇ ಕ್ರಮ ಆಗದಿದ್ದರೇ ಮತ್ತೆ ಮಾರ್ಚ್ 5 ರಂದು ಬೀದಿಗಿಳಿಯುತ್ತೇವೆ. ಮಾರ್ಚ್ 5 ರಂದು ಬಿಬಿಎಂಪಿ ವಿರುದ್ಧ ಕರವೇ ಪ್ರೊಟೆಸ್ಟ್ ಮಾಡುವುದಾಗಿ ನಾರಾಯಣ ಗೌಡರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ: 15 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಸ್ಪೀಕರ್‌

TAGGED:bbmpbengalurukannada name boardKarnataka rakshana vedikenarayana gowdatushar girinathಕನ್ನಡ ನಾಮಫಲಕಕರ್ನಾಟಕ ರಕ್ಷಣಾ ವೇದಿಕೆತುಷಾರ್‌ ಗಿರಿನಾಥ್‌ನಾರಾಯಣ ಗೌಡಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
23 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
25 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
25 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
45 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
55 minutes ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
56 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?