ಮಂಡ್ಯ: ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 20 ಮೇಕೆಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪಾಲಹಳ್ಳಿ ಗ್ರಾಮದಲ್ಲಿ ಆಡುಗಳನ್ನು ಸಾಕಿ ಜೀವನ ಸಾಗಿಸುತ್ತಿದ್ದ, ಶ್ರೀನಿವಾಸು ಅವರಿಗೆ ಸೇರಿದ ಈ ಮೇಕೆಗಳು ಇಂದು ಬೆಳಿಗ್ಗೆ ನೋಡಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ನೆನ್ನೆ ಸಂಜೆ ಮೇಕೆಗಳನ್ನು ಮೇಯಿಸಿಕೊಂಡು ಬಂದು ಕೊಟ್ಟಿಗೆಗೆ ಕೂಡಿ ಹಾಕಲಾಗಿತ್ತು. ಇದನ್ನೂ ಓದಿ: ಫಟಾಫಟ್ ಅಂತ ಮಾಡಿ ಬಿಸಿ ಬಿಸಿಯಾದ ಅನ್ನದ ಪಕೋಡ
ಮೇಕೆಗಳ ನಿಗೂಢ ಸಾವಿನಿಂದ ಮೇಕೆಗಳನ್ನು ಸಾಕಿದ್ದ ವ್ಯಕ್ತಿ ಕಂಗಾಲಾಗಿದ್ದು, ಪರಿಹಾರಕ್ಕಾಗಿ ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಪಶುವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷದ ಪದಾರ್ಥ ತಿಂದು ಸಾವನ್ನಿಪ್ಪಿರಬೇಕೆಂದು ಶಂಕಿಸಿದ್ದಾರೆ.