ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿ- ಪತ್ರಕ್ಕೆ ರಕ್ತದ ಹೆಬ್ಬೆಟ್ಟು ಒತ್ತಿ ಮಂಡ್ಯದಲ್ಲಿ ಆಗ್ರಹ

Public TV
1 Min Read
VIJAYENDRA 3

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ (BJP State President) ಸ್ಥಾನಕ್ಕೆ ಜಟಾಪಟಿ ನಡೆಯುತ್ತಿದ್ದು, ಈ ನಡುವೆ ಮಂಡ್ಯದಲ್ಲಿ ಬಿ.ವೈ ವಿಜಯೇಂದ್ರಗೆ (B Y Vijayendra) ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ವಿನೂತನ ಪ್ರತಿಭಟನೆ ಕೈಗೊಳ್ಳಲಾಗಿದೆ.

ಮಂಡ್ಯ ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾಗೆ (J.P Nadda) ಪತ್ರ ಬರೆದಿದ್ದಾರೆ. ಮಂಡ್ಯದ ಪೋಸ್ಟ್ ಆಫೀಸ್ ಬಳಿ ಈ ಪ್ರತಿಭಟನೆ ನಡೆದಿದ್ದು, ಅಂಚೆ ಕಚೇರಿ (PostOffice) ಮೂಲಕ ನಡ್ಡಾಗೆ ಪತ್ರ ಪೋಸ್ಟ್ ಮಾಡಲಾಗಿದೆ. ಈ ಪತ್ರಕ್ಕೆ ರಕ್ತದ ಹೆಬ್ಬೆಟ್ಟು ಮುದ್ರೆ ಒತ್ತಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ.ವಿಜಯೇಂದ್ರರನ್ನ ನೇಮಕ ಮಾಡಿ. ಯಡಿಯೂರಪ್ಪ (B. S Yediyurappa) ಒಂದು ಸೀಟನ್ನ 114 ಸೀಟ್ ಮಾಡಿ ಪಕ್ಷವನ್ನ ಅಧಿಕಾರಕ್ಕೆ ತಂದ್ರು. ಆದರೆ ಈಗ ರಾಜ್ಯದ ನಾಯಕರ ಬೇಜವ್ದಾರಿತನದಿಂದ ಬಿಜೆಪಿ ಸೋತಿದೆ. ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರಿಗೆ ಪಟ್ಟಕಟ್ಟಿ. ಲೋಕಸಭಾ ಚುನಾವಣೆಯಲ್ಲಿ (Loksabha Election) ರಾಜ್ಯದಲ್ಲಿ ಹೆಚ್ಚು ಸೀಟನ್ನು ಬಿಜೆಪಿ ಗೆಲ್ಲುತ್ತೆ. ಪತ್ರದಲ್ಲಿ ರಕ್ತದ ಸಹಿ ಮಾಡಿ ನಿಮಗೆ ಅರ್ಪಣೆ ಮಾಡಿದ್ದೇವೆ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

Web Stories

Share This Article