Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಚ್‍ಡಿಕೆ ವಿರುದ್ಧ ಚಲುವರಾಯಸ್ವಾಮಿ ಹೊಸ ಬಾಂಬ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹೆಚ್‍ಡಿಕೆ ವಿರುದ್ಧ ಚಲುವರಾಯಸ್ವಾಮಿ ಹೊಸ ಬಾಂಬ್

Districts

ಹೆಚ್‍ಡಿಕೆ ವಿರುದ್ಧ ಚಲುವರಾಯಸ್ವಾಮಿ ಹೊಸ ಬಾಂಬ್

Public TV
Last updated: September 16, 2019 11:25 am
Public TV
Share
2 Min Read
HDK CHALUVA
SHARE

– ದೇವೇಗೌಡ್ರ ಕುಟುಂಬಕ್ಕೂ ಡಿಕೆಶಿಗೂ ವೈಮನಸ್ಸಿತ್ತು

ಮಂಡ್ಯ: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದರೋಡೆ ಮಾಡುವುದಕ್ಕೆ ನಾವು ಹೇಳಿದ್ವಾ, ಇದಕ್ಕೆಲ್ಲ ನಾನು ಹೊಣೆಯೇ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ ಎನ್ನುವ ಮೂಲಕ ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಎಲ್ಲರೂ ತಮ್ಮ ಮೊಬೈಲ್ ಸ್ವಿಚ್ಛ್ ಆಫ್ ಮಾಡಿದ್ದರು. ಒಕ್ಕಲಿಗ ಸಮಾಜದ ನಾಯಕರು, ಯುವಕರು ಹಾಗೂ ನಾನು ಆ ಸಭೆಗೆ ಹೋಗಿಲ್ಲ ಎಂದು ನನ್ನನ್ನು ಸಾಮಾಜಿಕ ಜಾಲತಾಣಗಳಲ್ಲಿ ದೂಷಣೆ ಮಾಡುತ್ತಿದ್ದಾರೆ. ಇಂತಹ ದರೋಡೆ ಮಾಡಲು ನಾವು ಹೇಳಿದ್ವಾ. ದರೋಡೆ ಮಾಡಿ ಸಾರ್ವಜನಿಕರಿಗೆ ಹಂಚುತ್ತಾರಾ. ಇದಕ್ಕೆ ನಾನು ಹೊಣೆನಾ..? ನಾನು ಸಭೆಗೆ ಯಾಕೆ ಹೋಗಬೇಕಿತ್ತು..? ಎಂದೆಲ್ಲ ಹೆಚ್‍ಡಿಕೆ ಅವರು ಮಾತನಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಇದು ಎಷ್ಟು ಸತ್ಯ, ಸುಳ್ಳು ಎಂದು ನನಗೆ ಗೊತ್ತಿಲ್ಲ. ಹೀಗಾಗಿ ಸತ್ಯ ಗೊತ್ತಿಲ್ಲದೇ ನಾನು ಮಾತನಾಡುವುದು ತಪ್ಪು ಎಂದು ಗಂಭೀರ ಆರೋಪ ಮಾಡಿ ಯಾರೋ ಹೇಳುತ್ತಿದ್ದಾರೆಂದು ಹೇಳಿ ಚಲುವರಾಯಸ್ವಾಮಿ ಜಾರಿಕೊಂಡಿದ್ದಾರೆ.

dkshivakumar

ಹೆಚ್‍ಡಿಕೆ ಅವರು ಸಿಎಂ ಪಟ್ಟ ಉಳಿಸಲು ಎಲ್ಲರನ್ನೂ ಎದುರಾಕಿಕೊಂಡರು. ಇಂದು ಡಿಕೆಶಿ ಜೊತೆಯಲ್ಲಿ ಕುಮಾರಸ್ವಾಮಿ ನಿಲ್ಲಲಿಲ್ಲ. ಕುಮಾರಸ್ವಾಮಿ ಅವರಿಗೆ ಇಂತಹ ಕಷ್ಟ ಬಂದಿದ್ದರೆ ಡಿಕೆಶಿ ಸ್ಟೇಷನ್ ಹತ್ತಿರನೇ ಕೂರುತ್ತಿದ್ದರು. ಆದರೆ ಡಿಕೆಶಿಗೆ ಮಾನಸಿಕವಾಗಿ ಧೈರ್ಯ ತುಂಬ ಬಹುದಿತ್ತು. ಒಕ್ಕಲಿಗ ಸಂಘಟನೆಗಳಿಂದ ನಡೆದ ಹೋರಾಟಕ್ಕೂ ಸಪೋರ್ಟ್ ಮಾಡಲಿಲ್ಲ. ಅದನ್ನು ಬಿಟ್ಟು ಅಂದು ಚನ್ನಪಟ್ಟಣದಲ್ಲಿ ಕಾರ್ಯಕ್ರಮವನ್ನು ಹಾಕಿಕೊಂಡರು. ಉದ್ದೇಶ ಪೂರ್ವಕವಾಗಿ ಚನ್ನಪಟ್ಟಣಕ್ಕೆ ಹೋಗಿದ್ರಾ ಅಥವಾ ಹೋರಾಟಕ್ಕೆ ಹೋಗುವ ಜನರನ್ನು ಅವೈಡ್ ಮಾಡೋದಕ್ಕೆ ಹೋಗಿದ್ರಾ ಎಂದು ಡಿಕೆಶಿ ಪರ ಒಕ್ಕಲಿಗ ಸಮುದಾಯದ ಹೋರಾಟಕ್ಕೆ ಗೈರಾದ ಹೆಚ್‍ಡಿಕೆಗೆ ಮಾಜಿ ಸಚಿವರು ಪ್ರಶ್ನೆ ಮಾಡಿದರು.

ಡಿ.ಕೆ.ಶಿವಕುಮಾರ್ ಮಾಡಬಾರದ ಕ್ರೈಮ್ ಮಾಡಿಲ್ಲ. ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆಗೆ ಮಾಡಿಕೊಳ್ಳಲು ಡಿಕೆಶಿ ಬಿಡಲಿಲ್ಲ. ಕಾಂಗ್ರೆಸ್ ರಕ್ಷಣೆ ಮಾಡಿಕೊಳ್ಳಲು ನಿಂತಿದ್ದರು. ಈ ಸಿಟ್ಟು ಡಿಕೆಶಿ ಬಿಜೆಪಿ ನಾಯಕರಿಗೆ ಇತ್ತು. ಹಿಂದೆ ದೇವೇಗೌಡರ ಕುಟುಂಬಕ್ಕೂ ಡಿಕೆಶಿಗೂ ವೈಮನಸ್ಸಿತ್ತು. ಹೀಗೆ ಇಲ್ಲದೆಲ್ಲ ಚರ್ಚೆ ನಡೆಯುತ್ತಿದೆ. ಒಂದಲ್ಲೊಂದು ದಿನ ಸತ್ಯ ಹೊರಗಡೆ ಬರುತ್ತದೆ. ಜಾಣ್ಮೆಯಿಂದಲೇ, ಪರೋಕ್ಷವಾಗಿ ಡಿಕೆಶಿ ಬಂಧನಕ್ಕೆ ದೇವೇಗೌಡರ ಕುಟುಂಬ ಕಾರಣ ಎಂದು ಚಲುವರಾಯಸ್ವಾಮಿ ಆರೋಪ ಮಾಡಿದರು.

HDD 2

ದೇವೇಗೌಡರು ಹೇಳೋದೆಲ್ಲ ಸುಳ್ಳು. ಅವರಿಂದ ಅನೇಕರಿಗೆ ನೋವಾಗಿದೆ. ಜನರಿಗೆ ಮನವರಿಕೆ ಆಗುವವರೆಗೂ ಇದು ನಡೆಯುತ್ತಲೇ ಇರುತ್ತದೆ. ಜನರಿಗೆ ಅರ್ಥವಾದಾಗ ಎಲ್ಲವೂ ಸರಿಹೋಗುತ್ತದೆ. ಆ ದಿನ ಬೇಗ ಬರುತ್ತದೆ. ಜಿ.ಟಿ ದೇವೇಗೌಡರು ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಶ್ರೀನಿವಾಸ್ ಕೂಡ ಸಿಡಿದೆದ್ದು ಹಲವು ವಿಚಾರ ಪ್ರಸ್ತಾಪ ಮಾಡಿದ್ದಾರೆ. ಜೆಡಿಎಸ್ ವರಿಷ್ಠರಿಗೆ ಯಾರೇ ಹೋದರೂ, ಬಂದ್ರೂ ತೆಲೆಕೆಡಿಸಿಕೊಳ್ಳಲ್ಲ. ಈ ಭಾಗದ ಜನ ತಮ್ಮನ್ನು ನಂಬುತ್ತಾರೆ, ಯಾವುದೇ ಸರ್ಕಾರಗಳಲ್ಲಿ ಕಿಂಗ್ ಮೇಕರ್ ಆಗುತ್ತೇವೆ ಅಂದುಕೊಂಡಿದ್ದಾರೆ. ಅಂತಿಮವಾಗಿ ಮತದಾರರೇ ತೀರ್ಮಾನ ಮಾಡಬೇಕು ಎಂದರು.

ಒಕ್ಕಲಿಗರು ಬೆಳೆಯಲು ದೇವೇಗೌಡರು ಬಿಡಲ್ಲ ಎಂಬ ನಾರಾಯಣಗೌಡ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಬಹಳ ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಬಹಳಷ್ಟು ಒಕ್ಕಲಿಗರು ಪರಿಸ್ಥಿತಿ ಎದುರಿಸಿದ್ದಾರೆ. ಮಾಜಿ ಮಂತ್ರಿಯಾಗಿ ಸ್ವಲ್ಪ ಗುರುತಿಸಿಕೊಂಡವರು ಜೆಡಿಎಸ್ ನಲ್ಲಿ ಉಳಿದಿಲ್ಲ. ಜೆಡಿಎಸ್ ಅನ್ನು ಸಾರ್ವತ್ರಿಕ ಪಕ್ಷವಾಗಿ, ರಾಜಕೀಯ ಪಕ್ಷವಾಗಿ ಬೆಳೆಸಲಿಲ್ಲ. ಪಕ್ಷವನ್ನು ಕೇವಲ ಕುಟುಂಬದ ಹಿಡಿತಕ್ಕೆ ಸೀಮಿತಗೊಳಿಸಿದರು. ಆದ್ದರಿಂದ ಯಾರೂ ಬೆಳೆಯಲು ಸಾಧ್ಯವಾಗಲಿಲ್ಲ ಎಂದು ಗರಂ ಆದರು.

TAGGED:bjpChaluvaraya SwamycongressDK ShivakumarHD Devegowdahd kumaraswamyjdsmandyaPublic TVಎಚ್ ಡಿ ಕುಮಾರಸ್ವಾಮಿಎಚ್.ಡಿ. ದೇವೇಗೌಡಕಾಂಗ್ರೆಸ್ಚಲುವರಾಯಸ್ವಾಮಿಜೆಡಿಎಸ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿಮಂಡ್ಯ
Share This Article
Facebook Whatsapp Whatsapp Telegram

Cinema news

Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories
Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows

You Might Also Like

Trump to davos
Latest

ದಾವೋಸ್‌ಗೆ ತೆರಳುತ್ತಿದ್ದ ಟ್ರಂಪ್ ವಿಮಾನದಲ್ಲಿ ತಾಂತ್ರಿಕ ದೋಷ

Public TV
By Public TV
8 minutes ago
Donald Trump 3
Latest

ನನ್ನನ್ನ ಹತ್ಯೆ ಮಾಡಿದ್ರೆ, ಅಮೆರಿಕ ಇರಾನ್‌ ದೇಶವನ್ನ ಸರ್ವನಾಶ ಮಾಡಲಿದೆ – ಟ್ರಂಪ್‌ ಎಚ್ಚರಿಕೆ

Public TV
By Public TV
23 minutes ago
Bidar Protest
Bidar

ವೈದ್ಯರ ನಿರ್ಲಕ್ಷ್ಯ ಆರೋಪ – ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು

Public TV
By Public TV
34 minutes ago
CP Radhakrishnan 2
Bengaluru City

ಬೆಂಗ್ಳೂರಿಗೆ ಉಪರಾಷ್ಟ್ರಪತಿ ಆಗಮನ – ಇಂದು ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

Public TV
By Public TV
46 minutes ago
Belagavi 2
Belgaum

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ – ಸುಪ್ರೀಂ ಕೋರ್ಟ್‌ನಲ್ಲಿಂದು ಅರ್ಜಿ ವಿಚಾರಣೆ

Public TV
By Public TV
1 hour ago
Sunita Williams 1
Latest

608 ದಿನ, 3 ಮಿಷನ್‌, 9 ಬಾಹ್ಯಾಕಾಶ ನಡಿಗೆ – 27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?