Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೂಂಡಾಗಿರಿ ಮಾಡಿ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ: ಶ್ರೀಕಂಠೇಗೌಡ ವಿರುದ್ಧ ಸುಮಲತಾ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಗೂಂಡಾಗಿರಿ ಮಾಡಿ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ: ಶ್ರೀಕಂಠೇಗೌಡ ವಿರುದ್ಧ ಸುಮಲತಾ ಕಿಡಿ

Corona

ಗೂಂಡಾಗಿರಿ ಮಾಡಿ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ: ಶ್ರೀಕಂಠೇಗೌಡ ವಿರುದ್ಧ ಸುಮಲತಾ ಕಿಡಿ

Public TV
Last updated: April 25, 2020 3:38 pm
Public TV
Share
2 Min Read
sumalatha 1
SHARE

ಮಂಡ್ಯ: ಇಂದು ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್‍ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿಕಾರಿದ್ದಾರೆ. ಈ ರೀತಿ ಗೂಂಡಾಗಿರಿ ಮಾಡಿ, ಗಲಾಟೆ ಮಾಡೋರಿಗೆ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ ಎಂದು ಪ್ರಶ್ನಿಸಿದ್ದಾರೆ.

MND 3

ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಅವರು, ಎಸ್‍ಪಿ, ಪೊಲೀಸ್ ಅಧಿಕಾರಿಗಳು, ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿದ್ದ ಪತ್ರಕರ್ತರ ಕೋವಿಡ್-19 ಪರೀಕ್ಷೆಗೆ ಅಡ್ಡಿಪಡೆಸಿ, ರೌಡಿಗಿರಿ ಮೆರೆದಿದ್ದು ಖಂಡನೀಯ. ಶ್ರೀಕಂಠೇಗೌಡರು ತಪ್ಪು ಮಾಡಿದ್ದಾರೆ. ಅವರ ವಿರುದ್ಧ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುತ್ತೆ, ಅದನ್ನು ಅವರು ಎದುರಿಸಲೇಬೇಕು. ಅವರು ನಿಯಮಗಳನ್ನು ಉಲ್ಲಂಘಿಸಿ ಕಾನೂನಿನ ವಿರುದ್ಧ ಹೋಗಿದ್ದಾರೆ. ಸರ್ಕಾರದ ಅನುಮತಿ ಪಡೆದು ಮಂಡ್ಯದಲ್ಲಿ ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿದೆ. ಫೀಲ್ಡ್ ಅಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಸೋಂಕು ತಗುಲಿದರೆ ಅದು ಬೇರೆ ಅವರಿಗೆ ಹರಡುವ ಸಾಧ್ಯತೆ ಹೆಚ್ಚು, ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಪರೀಕ್ಷೆ ಕೈಗೊಳ್ಳಲಾಗಿದೆ ಅದನ್ನು ಶ್ರೀಕಂಠೇಗೌಡರು ಅರ್ಥ ಮಾಡಿಕೊಳ್ಳಬೇಕು ಎಂದು ಹರಿಹಾಯ್ದರು.

MND 1

ಇಲ್ಲಿ ಪರೀಕ್ಷೆ ಮಾಡಬೇಡಿ, ನಮ್ಮ ಮನೆ ಇದೆ ಎಂದರೆ ಬೇರೆ ಕಡೆ ಪರೀಕ್ಷೆ ಮಾಡಿದರೂ ಮನೆಗಳು ಇರುತ್ತೆ ಅಲ್ವಾ? ಪರಿಸ್ಥಿತಿ ಅರ್ಥಮಾಡಿಕೊಳ್ಳದೇ ಹೀಗೆ ಗಲಾಟೆ ಮಾಡಿದರೆ ಈ ಘಟನೆಗೂ ಪಾದರಾಯನಪುರದಲ್ಲಿ ನಡೆದ ಘಟನೆಗೂ ಏನು ವ್ಯತ್ಯಾಸ? ಇಲ್ಲಿ ಕೋವಿಡ್-19 ಪರೀಕ್ಷೆ ನಡೆಸಿದರೆ ನಿಮಗೂ ಕೊರೊನಾ ಬರುತ್ತೆ, ಇದನ್ನು ವಿರೋಧಿಸಿ ಎಂದು ಶ್ರೀಕಂಠೆಗೌಡರು ಸ್ಥಳೀಯರಿಗೆ ಹೇಳಿರುವುದು ಅವರ ಸಂಸ್ಕಾರವನ್ನು ತೋರಿಸುತ್ತದೆ. ಇದು ಬಹಳ ಶೋಷನೀಯ. ಒಬ್ಬರು ಎಂಎಲ್‍ಸಿ ಆಗಿ ಈ ರೀತಿ ಹೇಳಿಕೆ ಕೊಡುತ್ತಾರೆ ಎಂದರೆ ಅವರ ಶಿಕ್ಷಣ ಹಾಗೂ ಮಾಹಿತಿ ಎಷ್ಟರ ಮಟ್ಟಿಗೆ ತಿಳಿದುಕೊಂಡಿದ್ದಾರೆ ಎನ್ನೋದನ್ನ ನಾವು ಪ್ರಶ್ನಿಸಬೇಕಾಗಿದೆ ಎಂದರು.

MND 1 1

ಕೊರೊನಾ ಪರೀಕ್ಷೆ ಮಾಡಿದರೆ ಸೋಂಕು ಹರಡುತ್ತೆ ಎಂದು ಎಲ್ಲೂ ಹೇಳಿಲ್ಲ. ಬದಲಾಗಿ ಅತೀ ಹೆಚ್ಚು ಪರೀಕ್ಷೆ ಮಾಡಿ ಎಂದಿದ್ದಾರೆ. ಕೊರೊನಾ ಇರುವ ಅದೆಷ್ಟೋ ಮಂದಿಗೆ ಸೋಂಕಿನ ಲಕ್ಷಣಗಳು ಇರುವುದಿಲ್ಲ. ಹೀಗಾಗಿ ಪರೀಕ್ಷೆ ಮಾಡುವುದು ಅಗತ್ಯ. ಇದನ್ನು ಅರ್ಥ ಮಾಡಿಕೊಳ್ಳದೇ ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಬೇರೆ ಸಮಯದಲ್ಲಿ ಮಾಡುವಂತೆ ಗೂಂಡಾಗಿರಿ, ಗಲಾಟೆ, ರಾಜಕಾರಣ ಮಾಡುವುದು ಸರಿಯಲ್ಲ. ಹೀಗೆ ಮಾಡಿ ಜನಪ್ರತಿನಿಧಿಯಾಗುವ ಅರ್ಹತೆಯನ್ನೇ ಇವರು ಕಳೆದುಕೊಂಡಿದ್ದಾರೆ ಎನ್ನಬಹುದು ಎಂದು ಕಿಡಿಕಾರಿದ್ದಾರೆ.

ಈಗಾಗಲೇ ನಾನು ಪೊಲೀಸ್ ಅಧಿಕಾರಿಗಳ ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಅವರು ಎಫ್‍ಐಆರ್ ದಾಖಲಾದ ಮೇಲೆ ಅದರ ಕಾಫಿಯನ್ನ ಕಳುಹಿಸುವುದಾಗಿ ಹೇಳಿದ್ದಾರೆ. ಈ ರೀತಿ ತಪ್ಪು ಮಾಡಿದರೆ ಸಾಮಾನ್ಯ ವ್ಯಕ್ತಿ ಮೇಲೆ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೋ ಅದೇ ರೀತಿ ಕ್ರಮವನ್ನು ಎಂಎಲ್‍ಸಿ ಮೇಲೂ ತೆಗೆದುಕೊಳ್ಳಬೇಕು. ತಪ್ಪು ಯಾರೇ ಮಾಡಿದರು ತಪ್ಪು ತಪ್ಪೇ. ಎಂಎಲ್‍ಸಿ, ಎಂಪಿ, ಎಂಎಲ್‍ಎ ಯಾರೇ ಮಾಡಿದರೂ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಎಷ್ಟೆಲ್ಲಾ ರಿಸ್ಕ್ ತೆಗೆದುಕೊಂಡು ಅಗತ್ಯ ಸೇವೆಗಳಲ್ಲಿ ಇರುವವರು ಕೆಲಸ ಮಾಡುತ್ತಿದ್ದಾರೆ ಎನ್ನುವುದು ಇವರಿಗೆ ಅರ್ಥ ಆಗುತ್ತಿಲ್ಲ. ಇವರು ನಾವು ಮಾತ್ರ ಸುರಕ್ಷಿತವಾಗಿರಬೇಕು ಎನ್ನುವ ಉದ್ದೇಶದಲ್ಲಿ ಇದ್ದಾರೋ ಏನೋ ಗೊತ್ತಿಲ್ಲ. ಆದರೆ ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸುಮಲತಾ ಅವರು ಒತ್ತಾಯಿಸಿದ್ದಾರೆ.

TAGGED:Corona Viruscovid-19 testJournalistsmandyaPublic TVSrikantegowdaSumalatha Ambareeshಕೊರೊನಾ ವೈರಸ್ಕೋವಿಡ್-19 ಪರೀಕ್ಷೆಪತ್ರಕರ್ತರುಪಬ್ಲಿಕ್ ಟಿವಿಮಂಡ್ಯಶ್ರೀಕಂಠೇಗೌಡಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಯೊಬ್ಬರ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
11 minutes ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
43 minutes ago
Bidar Accident
Bidar

ವೇಗವಾಗಿ ಬಂದು ಕಾರು ಡಿಕ್ಕಿ – ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕ ದುರ್ಮರಣ

Public TV
By Public TV
1 hour ago
kkr vs pbks rain
Cricket

IPL 2026: ಕೋಲ್ಕತ್ತಾ ನೈಟ್‌ ರೈಡರ್ಸ್‌ vs ಪಂಜಾಬ್‌ ಕಿಂಗ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
IIT Baba Abhay Singh ties with bengaluru engineer
Bengaluru City

ಬೆಂಗಳೂರು ಹುಡುಗಿ ಮದುವೆಯಾದ ಮಹಾಕುಂಭಮೇಳ ಖ್ಯಾತಿಯ ಐಐಟಿ ಬಾಬಾ

Public TV
By Public TV
2 hours ago
Siddaramaiah 6
Bengaluru City

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಕೇಸ್‌ – ಬಿ ರಿಪೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ED ಅರ್ಜಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?