ನಿಮಗೇನು ಮಾನ ಮರ್ಯಾದೆ ಇಲ್ವಾ, ಸಮಸ್ಯೆ ಬಗೆಹರಿಸಲು ಲಂಚ ಕೇಳ್ತೀರಾ – ಮಂಡ್ಯ ರೈತರ ಆಕ್ರೋಶ

Public TV
1 Min Read
mnd raitha

– ಅಧಿಕಾರಿಗಳು ಲಂಚ ಪಡೀತಾರೆ, ಲಂಚ ಪಡೆದರೂ ಕೆಲಸ ಮಾಡಲ್ಲ

ಮಂಡ್ಯ: ನಿಮಗೇನು ಮಾನ ಮರ್ಯಾದೆ ಇಲ್ವಾ? ರೈತರ ಸಮಸ್ಯೆ ಬಗೆಹರಿಸಿ ಎಂದರೆ ಲಂಚ ಕೇಳ್ತೀರಾ? ಲಂಚ ತಗೊಂಡು ಕೆಲಸ ಮಾಡಿಕೊಡದೇ ಸತಾಯಿಸುತ್ತೀರಾ ಎಂದು ಮಂಡ್ಯ ರೈತರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂದು ಶಾಸಕ ಸುರೇಶ್‍ಗೌಡ ಅಧ್ಯಕ್ಷತೆಯಲ್ಲಿ ಚೆಸ್ಕಾಂ ಎಂಡಿ ಗೋಪಾಲಕೃಷ್ಣ, ಮೈಸೂರು ಮುಖ್ಯ ಅಭಿಯಂತರ ಶ್ರೀನಿವಾಸ ಮೂರ್ತಿ ಮತ್ತು ನಾಗಮಂಗಲ ತಾಲೂಕಿನ ಚೆಸ್ಕಾಂ ಅಧಿಕಾರಿಗಳು ಸೇರಿದಂತೆ ಚೆಸ್ಕಾಂ ಕುಂದು ಕೊರತೆ ಸಭೆಯನ್ನು ನಡೆಸಲಾಯಿತು.

mnd raitha 1

ಈ ಸಭೆಯ ಮಧ್ಯೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಂಡ್ಯ ರೈತರು, ಶಾಸಕ ಸುರೇಶ್‍ಗೌಡ ಅವರ ಮುಂದೆಯೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಿಮಗೇನು ಮಾನ ಮರ್ಯಾದೆ ಇಲ್ವಾ. ನಿಮ್ಮಿಂದ ಶಾಸಕರ ಮರ್ಯಾದೇನೂ ಕಳೆಯುತ್ತಿರಾ. ಸರಿಯಾಗಿ ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಅಧಿಕಾರಿಗಳು ಲಂಚ ಪಡೆಯುತ್ತಾರೆ. ಲಂಚ ಪಡೆದರೂ ಕೆಲಸ ಮಾಡಲ್ಲ ಎಂದು ಆಕ್ರೋಶ ಹೊರಹಾಕಿದರು.

mnd raitha2

ಈ ಸಭೆಯಲ್ಲಿ ರೈತರ ಕಷ್ಟಗಳನ್ನು ಅಲಿಸಿದ ಶಾಸಕ ಸುರೇಶ್‍ಗೌಡ ಮತ್ತು ಚೆಸ್ಕಾಂ ಅಧಿಕಾರಿಗಳು ಸಮಸ್ಯೆ ಬಗೆಹರಿಸುವುದಾಗಿ ರೈತರಿಗೆ ಭರವಸೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *