ಮೈಸೂರು, ಬೆಂಗ್ಳೂರು ಹೆದ್ದಾರಿ ಅಗಲೀಕರಣ- ಮಣ್ಣು ಕುಸಿದು ಇಬ್ಬರ ಸಾವು

Public TV
1 Min Read
mnd 3

ಮಂಡ್ಯ: ರಸ್ತೆ ಅಗಲೀಕರಣದ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಬಳಿಯ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣದ ಕೆಲಸ ಸದ್ಯ ನಡೆಯುತ್ತಿದ್ದು, ಈ ವೇಳೆ ಮಣ್ಣು ಕುಸಿದ ಪರಿಣಾಮ ಜಾರ್ಖಂಡ್ ಮೂಲದ ಕಾರ್ಮಿಕರಾದ ಕಾಶಿನಾಥ್ (36) ಮತ್ತು ರಾಜ್‍ಗಂಧ್ (30) ಇಬ್ಬರು ಸಾವನ್ನಪ್ಪಿದ್ದಾರೆ.

mnd1

ಹೆದ್ದಾರಿ ಅಗಲೀಕರಣದ ಹಿನ್ನೆಲೆಯಲ್ಲಿ ಮದ್ದೂರು ಪಟ್ಟಣದ ಕೃಷಿ ಕಚೇರಿ ಬಳಿ ಜೆಸಿಬಿಯಲ್ಲಿ ಗುಂಡಿ ತೆಗೆಯಲಾಗುತ್ತಿತ್ತು. ಈ ವೇಳೆ ಈ ಇಬ್ಬರು ನೌಕರರು ಗುಂಡಿಗೆ ಇಳಿದು ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಮಣ್ಣು ಕುಸಿದಿದೆ. ಕುಸಿದ ಮಣ್ಣು ಇಬ್ಬರು ನೌಕರರ ಮೇಲೆ ಬಿದ್ದಿದ್ದು, ಬಳಿಕ ಮಣ್ಣನ್ನು ತೆರವು ಮಾಡಿ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಮದ್ದೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದೆ.

Share This Article
Leave a Comment

Leave a Reply

Your email address will not be published. Required fields are marked *