Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕೆ.ಆರ್.ಪೇಟೆಯಲ್ಲಿ ಬಿಜೆಪಿ ಗೆಲುವಿಗೆ ಹರಕೆ ಕಾರಣವಂತೆ- ಮುಡಿಕೊಟ್ಟ ಬಿಜೆಪಿ ಯುವ ನಾಯಕ

Public TV
Last updated: March 10, 2020 11:25 pm
Public TV
Share
2 Min Read
MND KPL BJP Leader A
SHARE

ಮಂಡ್ಯ: ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಅಚ್ಚರಿ ಮೂಡಿಸಿತ್ತು. ಈ ಅಚ್ಚರಿಯ ಫಲಿತಾಂಶಕ್ಕೆ ದೇವರಿಗೆ ಹೊತ್ತುಕೊಂಡಿದ್ದ ಒಂದು ಹರಕೆಯೆ ಪ್ರಮುಖ ಕಾರಣನಾ ಎಂಬ ಪ್ರಶ್ನೆ ಇದೀಗ ಎದ್ದಿದೆ.

ಮಂಡ್ಯ ಜಿಲ್ಲೆ ಜೆಡಿಎಸ್‍ನ ಭದ್ರ ಕೋಟೆ ಎನ್ನುವಷ್ಟರ ಮಟ್ಟಿಗೆ ರಾಜ್ಯದಲ್ಲಿ ಗುರುತಿಸಿಕೊಂಡಿತ್ತು. ಆದರೆ ಕಳೆದ ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿ ನಾರಾಯಣಗೌಡ ಅವರನ್ನು ಗೆಲ್ಲಿಸಿಕೊಳ್ಳುವ ಮೂಲಕ ಜೆಡಿಎಸ್ ಭದ್ರ ಕೋಟೆಯನ್ನು ಭೇದಿಸಿತ್ತು. ಈ ಕ್ಷೇತ್ರದ ಬಿಜೆಪಿಗೆ ಗೆಲುವಿಗೆ ಸಿಎಂ ಪುತ್ರ ವಿಜಯೇಂದ್ರ, ಸಚಿವ ಅಶ್ವತ್ಥನಾರಾಯಣ, ಹಾಸನ ಶಾಸಕ ಪ್ರೀತಮ್‍ಗೌಡ ಅವರ ಪಾತ್ರ ಮುಖ್ಯವಾಗಿತ್ತು ಎಂದು ಹಲವರು ಹೇಳುತ್ತಾರೆ. ಆದರೆ ಇದೀಗ ಗೆಲುವಿನ ಹಿಂದೆ ಮತ್ತೊಬ್ಬರ ಶ್ರಮವಿದೆ ಎಂದು ಸ್ವತಃ ವಿಜಯೇಂದ್ರ ಅವರೇ ಹೇಳಿಕೊಂಡಿದ್ದಾರೆ.

MND B.Y. Vijayendra

ಈ ಕ್ಷೇತ್ರದಲ್ಲಿ ಚುನಾವಣೆ ಮಾಡಬೇಕು ಬನ್ನಿ ಅಣ್ಣ. ಇಲ್ಲಿ ನಾವು ಒಂದು ಬಾರಿ ನಮ್ಮ ಶ್ರಮ ಹಾಕೋಣ ಅಂತ ಕೊಪ್ಪಳ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶರಣು ನನಗೆ ಹೇಳಿದ್ದರು. ಉಪಚುನಾವಣೆಯಲ್ಲಿ ಕೆಲಸ ಮಾಡಲು ಶಕ್ತಿ ತುಂಬಿದ್ದೆ ಶರಣು ಹಾಗಾಗಿ ನಾವು ಉತ್ಸಾಹದಿಂದ ಚುನಾವಣೆ ಎದುರಿಸಿ ಗೆಲವು ಪಡೆದುಕೊಂಡೆವು ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಸಿಎಂ ಯಡಿಯೂರಪ್ಪ ಅವರ ತವರು ಊರು ಕೆಆರ್.ಪೇಟೆ ಕ್ಷೇತ್ರದಲ್ಲಿ ನಾವು ಗೆಲ್ಲ ಬೇಕು ಎಂದು ಅಂದುಕೊಂಡಿದ್ದೆವು. ಆಗ ನಾನು ವಿಜಯೇಂದ್ರ ಅವರಿಗೆ ಹೇಳಿದಾಗ ಅಲ್ಲಿ ತುಂಬಾ ಕಷ್ಟ ಅಂತ ಹೇಳಿದ್ದರು. ನಮ್ಮಲ್ಲೂ ಆತಂಕ ಇತ್ತು. ಒಂದು ವೇಳೆ ವ್ಯತ್ಯಾಸ ಆದರೆ ವಿಜಯೇಂದ್ರ ಅವರ ರಾಜಕೀಯ ಸ್ವಲ್ಪ ಕುಗ್ಗತ್ತದೆ ಎಂಬ ಮಾತುಗಗಳು ಕೇಳಿ ಬಂದಿದ್ದವು. ಕೆಆರ್.ಪೇಟೆ ಚುನಾವಣೆಯ ಉಸ್ತುವಾರಿ ಎಂದು ವಿಜಯೇಂದ್ರ ಅವರ ಹೆಸರನ್ನು ಘೋಷಣೆ ಮಾಡಲಾಗಿತ್ತು. ಆಗ ನಾನು ಕೆಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿ ಸಾಸಲು ಗ್ರಾಮದಲ್ಲಿದ್ದೆ. ಇಲ್ಲಿನ ಸೋಮೇಶ್ವರ ಹಾಗೂ ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಹೋಗಿ ಗೆದ್ದರೆ ಮುಡಿಕೊಟ್ಟು ವಿಜಯೇಂದ್ರ ಅಣ್ಣನ ಜೊತೆ ಪೂಜೆ ಮಾಡಿಸುತ್ತೇವೆ ಎಂದು ಹರಕೆ ಹೊತ್ತಕೊಂಡಿದ್ದೆ. ಅಂತೆಯೇ ನಾವು ಈಗ ವಿಜಯ ಪಡೆದು ವಿಜಯೇಂದ್ರ ಅಣ್ಣನ ಜೊತೆ ಬಂದು ಹರಕೆ ತೀರಿಸಿದ್ದೇವೆ ಎಂದು ಕೊಪ್ಪಳ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶರಣು ಅವರು ಹೇಳಿದ್ದಾರೆ.

MND Vijayendra

ಶರಣು ಅವರು ಹರಕೆ ಹೊತ್ತ ಶಂಭುಲಿಂಗೇಶ್ವರ ಹಾಗೂ ಸೋಮೇಶ್ವರ ದೇವಸ್ಥಾನದಲ್ಲೇ ಸಂಸದೆ ಸುಮಲತಾ ಅಂಬರೀಶ್ ಅವರು ಕೂಡ ಚುನಾವಣೆಗೂ ಮುನ್ನ ಪೂಜೆ ಸಲ್ಲಿಸಿದ್ದರು. ಈ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು ಜಯಭೇರಿ ಬಾರಿಸಿದ್ದರು.

ಒಟ್ಟಾರೆ ಕೆಆರ್.ಪೇಟೆಯ ಜೆಡಿಎಸ್ ಭದ್ರ ಕೋಟೆಯನ್ನು ಭೇದಿಸಲು ಕೇವಲ ಪ್ರಥಮ ದರ್ಜೆಯ ಮಾಸ್ ಲೀಡರ್ ಗಳು ಕಾರ್ಯತಂತ್ರದ ಜೊತೆಗೆ ಬೇರೆ ಜಿಲ್ಲೆಯ ಮುಖಂಡರು ಕಾರಣವಾಗಿದ್ದಾರೆ ಎಂದು ಈಗ ತಿಳಿದುಬಂದಿದೆ. ಇದರ ಜೊತೆಗೆ ಆ ಮುಖಂಡ ಹೊತ್ತ ಹರಕೆಯೂ ಗೆಲವು ತಂದುಕೊಡಲು ಪ್ರಮುಖ ಕಾರಣ ಎನ್ನಲಾಗುತ್ತಿದೆ.

MND KPL BJP Leader

TAGGED:B.Y vijayendrabjpKoppalkr petenarayana gowdaPublic TVಕೆ.ಆರ್.ಪೇಟೆಜೆಡಿಎಸ್ದೇವಸ್ಥಾನನಾರಾಯಣಗೌಡಪಬ್ಲಿಕ್ ಟಿವಿಬಿಜೆಪಿಮಂಡ್ಯ
Share This Article
Facebook Whatsapp Whatsapp Telegram

Cinema Updates

Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
6 minutes ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 hour ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
2 hours ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
5 hours ago

You Might Also Like

01 7
Big Bulletin

ಬಿಗ್‌ ಬುಲೆಟಿನ್‌ 11 June 2025 ಭಾಗ-1

Public TV
By Public TV
5 minutes ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
10 minutes ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
22 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
38 minutes ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
1 hour ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?