ಕೊನೆಗೂ ಮಂಡ್ಯ ರೈತರ ಬೆಳೆಗಳಿಗೆ ನೀರು ಬಿಡಲು ತೀರ್ಮಾನ

Public TV
1 Min Read
KRS dam

ಮಂಡ್ಯ: ಕೆಆರ್‍ಎಸ್ ಅಣೆಕಟ್ಟೆ ಮೂಲಕ ರೈತರ ಬೆಳೆಗಳಿಗೆ ನೀರು ಬಿಡಲು ತೀರ್ಮಾನ ಮಾಡಲಾಗಿದೆ. ಈ ಮೂಲಕ ನೀರು ಹರಿಸುವಂತೆ ನಿರಂತರವಾಗಿ ಪ್ರತಿಭಟನೆ ನಡೆಸಿದ್ದ ರೈತರಿಗೆ ಜಯಸಿಕ್ಕಿದೆ.

ಇಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ನಡೆದ ಐಸಿಸಿ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದ್ದು, ಈ ಸಭೆಯಲ್ಲಿ ಸಚಿವರಾದ ಡಿಸಿ. ತಮ್ಮಣ್ಣ, ಸಾರಾ ಮಹೇಶ್ ಸೇರಿದಂತೆ ಮಂಡ್ಯ ಜಿಲ್ಲೆಯ ಶಾಸಕರು, ಟಿ.ನರಸೀಪುರ ಮತ್ತು ಪಿರಿಯಾಪಟ್ಟಣ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು.

mnd puttaraju 1

ದೆಹಲಿಯ ಕಮಿಟಿ ಸದಸ್ಯರೂ ಭಾಗಿಯಾಗಿದ್ದ ಈ ಸಭೆಯಲ್ಲಿ, ಬೆಳೆದು ನಿಂತಿರುವ ಬೆಳೆಗಳಿಗೆ ನೀರು ನೀಡುವ ಉದ್ದೇಶದಿಂದ ಹಾಗೂ ಕುಡಿಯುವ ನೀರಿಗೆ ಅನುಕೂಲ ಒದಗಿಸುವ ಸಲುವಾಗಿ ನೀರು ಬಿಡಲು ನಿರ್ಧಾರ ಮಾಡಲಾಗಿದೆ. ನಾಳೆ ಮಧ್ಯರಾತ್ರಿಯಿಂದ ನಾಲೆಗಳ ಮೂಲಕ ನೀರು ಹರಿಸಲು ತೀರ್ಮಾನ ಮಾಡಿದ್ದೇವೆ ಎಂದು ಸಚಿವ ಪುಟ್ಟರಾಜು ಮಾಹಿತಿ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *