ಮಂಡ್ಯ: ಹಳೆ ಮೈಸೂರು (Old Mysuru) ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯದ ನೀರಿನ ಮಟ್ಟ ಪ್ರತಿ ದಿನ ಒಂದು ಅಡಿ ಕುಸಿಯುತ್ತಿದೆ. ಇದರಿಂದ ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ.
- Advertisement 2
ಶುಕ್ರವಾರ 78 ಅಡಿ ಇದ್ದ ಕೆಆರ್ಎಸ್ ಜಲಾಶಯದ (KRS Dam) ನೀರಿನ ಮಟ್ಟ ಶನಿವಾರ 77 ಅಡಿಗೆ ಕುಸಿದಿದೆ. ದಿನೇ-ದಿನೇ ಭಾರೀ ಪ್ರಮಾಣದಲ್ಲಿ ಡ್ಯಾಂ ನೀರಿನ ಮಟ್ಟ ಕುಸಿಯುತ್ತಿದೆ. ಈ ಹಿನ್ನೆಲೆಯಲ್ಲಿ ರೈತರ (Farmers) ಬೆಳೆಗಳಿಗೆ ಬಿಟ್ಟಿದ್ದ ನೀರನ್ನ ನಿಲ್ಲಿಸಲಾಗಿದೆ. ಮುಂದೆ ಮಳೆ ಬಿದ್ದು ಡ್ಯಾಂ ಕೊಂಚ ಪ್ರಮಾಣದಲ್ಲಿ ಭರ್ತಿಯಾಗುವವರೆಗೆ ಬೆಳೆಗಳಿಗೆ ನೀರು ಬಿಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಸಿದ್ದರಾಮಯ್ಯ
- Advertisement 3
- Advertisement 4
ಅಲ್ಲದೇ ಜಲಾಶಯದಲ್ಲಿರುವ ನೀರು ಜುಲೈ 2ನೇ ವಾರದವರೆಗೆ ಕುಡಿಯಲು ಬಳಕೆಯಾಗುತ್ತದೆ. ಒಂದು ವೇಳೆ ಉತ್ತಮ ಮಳೆಯಾಗದಿದ್ದಲ್ಲಿ ಕಾವೇರಿ ನೀರು ಅವಲಂಬಿತ ಜನರಿಗೆ ಕುಡಿಯುವ ನೀರಿಗೂ (Drinking Water) ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 80 ಅಡಿಗೆ ತಲುಪಿದ ಕೆಆರ್ಎಸ್ ನೀರಿನ ಮಟ್ಟ – ಕುಡಿಯುವ ನೀರಿಗೆ ಶುರುವಾಗಿದೆ ಆತಂಕ
124.80 ಗರಿಷ್ಠ ಮಟ್ಟದ ಡ್ಯಾಂನಲ್ಲಿ 77.005 ಅಡಿಯಷ್ಟೇ ನೀರಿದೆ. ಕೆಆರ್ಎಸ್ ಡ್ಯಾಂ 49.452 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿದ್ದರೂ ಈಗ ಇರೋದು 9.808 ಟಿಎಂಸಿ ನೀರು ಮಾತ್ರ. ಈ ಪೈಕಿ 2.808 ಟಿಎಂಸಿ ಮಾತ್ರ ಬಳಕೆಗೆ ಯೋಗ್ಯವಾಗಿದೆ. ಉಳಿದ 7 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದೆ. ಸದ್ಯ ಜಲಾಶಯಕ್ಕೆ 514 ಕ್ಯೂಸೆಕ್ ನೀರು ಒಳಹರಿವು ಇದ್ದು, 834 ಕ್ಯೂಸೆಕ್ ನೀರು ಡ್ಯಾಂನಿಂದ ಹೊರ ಹೋಗುತ್ತಿದೆ.