ಮಂಡ್ಯ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ತಂದೆ ಸಾವನ್ನಪ್ಪಿ ಮಗ ಗಾಯಗೊಂಡ ಘಟನೆ ಕದಬಹಳ್ಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.
ನಾಗಮಂಗಲ ತಾಲ್ಲೂಕಿನ ಹಡೇನಹಳ್ಳಿ ಗ್ರಾಮದ ಲಕ್ಷ್ಮಣ (40) ಸಾವಿಗೀಡಾದ ಬೈಕ್ ಸವಾರ. ಹಿಂಬದಿಯಲ್ಲಿ ಕುಳಿತ್ತಿದ್ದ ಮೃತ ಲಕ್ಷ್ಮಣ ಮಗ ಶರತ್ಗೆ ಗಾಯಗೊಂಡಿದ್ದು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚನ್ನರಾಯಪಟ್ಟಣದ ಕಡೆಯಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್, ಕದಬಹಳ್ಳಿಯಿಂದ ಸ್ವಗ್ರಾಮದ ಹಡೇನಹಳ್ಳಿ ಕಡೆಗೆ ಮಗನೊಂದಿಗೆ ಹೊರಟಿದ್ದ ಲಕ್ಷ್ಮಣ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಲಕ್ಷ್ಮಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಿಂಬದಿಯಲ್ಲಿ ಕುಳಿತ್ತಿದ್ದ ಮಗನಿಗೆ ಗಾಯವಾಗಿದ್ದು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನ ಎಡವಟ್ಟೇ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.