Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿಯನ್ನು ಭೇಟಿಯಾದ ಸುಮಲತಾ – ಮಂಡ್ಯ ದೋಸ್ತಿ ರಾಜಕೀಯದಲ್ಲಿ ಢವಢವ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಧಾನಿಯನ್ನು ಭೇಟಿಯಾದ ಸುಮಲತಾ – ಮಂಡ್ಯ ದೋಸ್ತಿ ರಾಜಕೀಯದಲ್ಲಿ ಢವಢವ!

Bengaluru City

ಪ್ರಧಾನಿಯನ್ನು ಭೇಟಿಯಾದ ಸುಮಲತಾ – ಮಂಡ್ಯ ದೋಸ್ತಿ ರಾಜಕೀಯದಲ್ಲಿ ಢವಢವ!

Public TV
Last updated: February 9, 2024 3:20 pm
Public TV
Share
3 Min Read
sumalatha narendra modi
SHARE

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆ (Mandya LokSabha Election) ರಂಗೇರಿದ್ದು ಹಾಲಿ ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಅವರು ಗುರುವಾರ ಪ್ರಧಾನಿ  ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿದ್ದಾರೆ.

ಈ ಭೇಟಿಯ ಸಮಯದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ (BJP-JDS) ಮಧ್ಯೆ ಯಾರಿಗೆ ಟಿಕೆಟ್‌ ಸಿಗಲಿದೆ ಎನ್ನುವುದು ಇನ್ನೂ ಫೈನಲ್‌ ಆಗಿಲ್ಲ. ಈ ಹಿಂದೆ ಸುಮಲತಾ ಅಂಬರೀಶ್‌ ಅವರು ನಾನು ಈ ಬಾರಿ ಕಣಕ್ಕೆ ಇಳಿಯುತ್ತೇನೆ ಎಂದು ಹೇಳಿದ್ದರು. ಮೋದಿ ಭೇಟಿಗೂ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರನ್ನು ಭೇಟಿಯಾಗಿದ್ದರು.  ಇದನ್ನೂ ಓದಿ: NDA ಒಕ್ಕೂಟ ಸೇರಲಿರುವ ಆರ್‌ಎಲ್‌ಡಿ- INDIA ಒಕ್ಕೂಟಕ್ಕೆ ಮತ್ತೊಂದು ಶಾಕ್

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ @PMOIndia ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು. @narendramodi ಶ್ರೀ ನರೇಂದ್ರ ಮೋದಿರವರು ವಿಶ್ವದ ಮಹಾನ್… pic.twitter.com/60y9sX7H53

— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) February 9, 2024

ಸುಮಲತಾ ಪೋಸ್ಟ್‌ನಲ್ಲಿ ಏನಿದೆ?
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು.

ನರೇಂದ್ರ ಮೋದಿರವರು ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ದೇಶದ ಅಭಿವೃದ್ಧಿ ಹಾಗೂ ದೇಶದ ಭವಿಷ್ಯದ ಬಗ್ಗೆ ನಿಮಗಿರುವ ದೂರದೃಷ್ಟಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಭಾರತ ದೇಶವು ಇಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸನ್ಮಾನ್ಯ ಪ್ರಧಾನ ಮಂತ್ರಿಗಳ ಸಮರ್ಥ ನಾಯಕತ್ವವೇ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರಣದಿಂದಲೇ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ.  ಇದನ್ನೂ ಓದಿ: ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್‌, ಸ್ವಾಮಿನಾಥನ್‌ಗೆ ಭಾರತ ರತ್ನ

ತಮ್ಮನ್ನು ಭೇಟಿ ಮಾಡಿದ ಸಂಧರ್ಭದಲ್ಲಿ, ತಾವು ನೀಡಿದ ಪ್ರೋತ್ಸಾಹದಾಯಕ ಮಾತುಗಳು, ನಮ್ರತೆ, ಮತ್ತು ಗೌರವಕ್ಕೆ ನಾನು ಕೃತಜ್ಞಳಾಗಿದ್ದೇನೆ. ತಮ್ಮನ್ನು ಭೇಟಿ ಮಾಡಿದ ಆ ಕ್ಷಣಗಳು ನನ್ನನ್ನು ಸಾರ್ವಜನಿಕರ ಸೇವೆಯಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಳ್ಳಲು ಸ್ಫೂರ್ತಿಯಾಗಿದ್ದು, ನಿಮ್ಮ ಸಹಕಾರ ಮತ್ತು ಮಾರ್ಗದರ್ಶನಕ್ಕೆ ನಾನು ಹೃದಯಪೂರ್ವಕವಾಗಿ ಆಭಾರಿಯಾಗಿದ್ದೇನೆ.

ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿರುವ ನಿಮಗೆ, ನಮ್ಮ ದೇಶದ ಭವಿಷ್ಯದ ಬಗ್ಗೆ ಇರುವ ಪರಿಕಲ್ಪನೆ ಹಾಗೂ ದೂರದೃಷ್ಟಿ ನಮ್ಮ ದೇಶದ ಎಲ್ಲಾ ಭವಿಷ್ಯದ ಮಹತ್ವಾಕಾಂಕ್ಷಿ ನಾಯಕರಿಗೆ ಮಾದರಿಯಾಗಿದೆ. ಪ್ರಧಾನ ಮಂತ್ರಿಗಳಾಗಿ ಅಚಲವಾದ ಧೃಢತೆಯಿಂದ ಅದ್ಭುತವಾದ ನಾಯಕತ್ವದ ಗುಣಗಳೊಂದಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ದೇಶಕ್ಕೆ ನೀಡಿದ ಆಡಳಿತವು ಭಾರತ ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ.

17ನೇ ಲೋಕಸಭೆಯ ಕೊನೆಯ ಅಧಿವೇಶನವು ಮುಕ್ತಾಯದ ಹಂತದಲ್ಲಿದ್ದು, ನಿಮ್ಮ ಅಧಿಕಾರಾವಧಿಯಲ್ಲಿ ಸಂಸತ್ ಸದಸ್ಯೆಯಾಗಿ ಸೇವೆ ಸಲ್ಲಿಸಿರುವುದು ನಿಜಕ್ಕೂ ನನ್ನ ಸೌಭಾಗ್ಯವಾಗಿದೆ.

ಈ ಬಾರಿಯ ತಮ್ಮ ಭೇಟಿ ಸಂದರ್ಭದಲ್ಲಿ “ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ” ಎಂಬ ನಿಮ್ಮ ಮಾತುಗಳು ನನಗೆ ಸ್ಪೂರ್ತಿದಾಯಕವಾಗಿದ್ದು, ವಿಶ್ವದ ಹೆಮ್ಮೆಯ ನಾಯಕರಾದ ತಮ್ಮ ಅಮೂಲ್ಯ ಮಾರ್ಗದರ್ಶನದಲ್ಲಿ ಜನರ ಸೇವೆ ಮಾಡಲು ಮತ್ತು ಭಾರತವನ್ನು ಮುಂದುವರೆದ ದೇಶಗಳ ಸಾಲಿನಲ್ಲಿ ನೋಡಲು ನಾನು ಉತ್ಸುಕಳಾಗಿದ್ದೇನೆ.

ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆಸಕ್ತಿ ವಹಿಸಿ, ಉತ್ತಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುದಾನವನ್ನು ಒದಗಿಸಿದ್ದಕ್ಕಾಗಿ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು, ಕಾರ್ಯಕರ್ತರು, ನನ್ನ ಬೆಂಬಲಿಗರು ಮತ್ತು ಸಮಸ್ತ ಸಾರ್ವಜನಿಕರ ಪರವಾಗಿ, ಭಾರತ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ.

TAGGED:bjpkarnatakamandyanarendra modiSumalatha Ambareeshಕರ್ನಾಟಕನರೇಂದ್ರ ಮೋದಿಬಿಜೆಪಿಮಂಡ್ಯಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Rasikh Salam Dar and Virat Kohli
Bengaluru City

75 ರನ್‌ಗಳಿಗೆ 8 ವಿಕೆಟ್‌ ಪತನ| ಆರ್‌ಸಿಬಿ ಬೌಲರ್‌ಗಳ ಮುಂದೆ ಲಕ್ನೋ ಪಲ್ಟಿ – ಮೊದಲ ಸ್ಥಾನಕ್ಕೆ ಜಿಗಿದ ಬೆಂಗಳೂರು

Public TV
By Public TV
2 minutes ago
Turkey School Shooting By Student
Crime

ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – 9 ಮಂದಿ ದುರ್ಮರಣ, ದಾಳಿಕೋರ ಸಾವು

Public TV
By Public TV
10 minutes ago
ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
31 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
57 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
2 hours ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?