Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನ ಮಂಡ್ಯ ಜನರದ್ದು – ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನ ಮಂಡ್ಯ ಜನರದ್ದು – ಸಿಎಂ

Districts

ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನ ಮಂಡ್ಯ ಜನರದ್ದು – ಸಿಎಂ

Public TV
Last updated: December 20, 2024 10:44 pm
Public TV
Share
3 Min Read
CM Siddaramaiah in Mandya
SHARE

– ಸಮಗ್ರ ಕನ್ನಡ ಭಾಷಾ ಬಳಕೆ ಕಾಯ್ದೆ ಜಾರಿಗೆ ಸರ್ಕಾರ ಬದ್ಧ
– ಖಾಸಗಿ ಮತ್ತು ಸರ್ಕಾರಿ ವಲಯದ ಉತ್ಪನ್ನಗಳ ಮೇಲೆ ಕಡ್ಡಾಯ ಕನ್ನಡ ಮುದ್ರಣವಾಗಬೇಕು

ಮಂಡ್ಯ: ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನ ಮಂಡ್ಯ (Mandya) ಜನರದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಸಮ್ಮೇಳನದಲ್ಲಿ ಸಂತೋಷದಿಂದ ಪಾಲ್ಗೊಂಡಿದ್ದೇನೆ. ಈ ಸಮ್ಮೇಳನ ಕನ್ನಡದ ಹಬ್ಬ. ಮಂಡ್ಯ ಜಿಲ್ಲೆ ಕನ್ನಡ ಸಾಹಿತ್ಯ ಪರಂಪರೆಯನ್ನು ಮೆರೆಸಿದೆ. ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನವನ್ನು ಈ ಜನರು ಹೊಂದಿದ್ದಾರೆ. ಸತ್ಯಾಗ್ರಹ ಸೌಧ ಈ ಭಾಗದ ಧೈರ್ಯ, ಶೌರ್ಯವನ್ನು ಪ್ರತಿಬಿಂಬಿಸುತ್ತದೆ. ಈ ಜಿಲ್ಲೆ ಅಪ್ಪಟ ಕನ್ನಡಿಗರನ್ನು ಹೊಂದಿದ್ದು, ಜಾತ್ಯತೀತ ಈ ನೆಲದ ಗುಣವಾಗಿದೆ. ಕನ್ನಡ ಭಾಷೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ ಎಂದರು.ಇದನ್ನೂ ಓದಿ: 4 ಜಿಲ್ಲೆ, 50ಕ್ಕೂ ಹೆಚ್ಚು ಗ್ರಾಮ, 14 ಗಂಟೆ ಅಲೆದಾಡಿಸಿದ್ರು.. ಪೊಲೀಸರು ದೌರ್ಜನ್ಯ ಎಸಗಿದ್ರು: ನೋವು ಹೇಳಿಕೊಂಡ ಸಿ.ಟಿ.ರವಿ

ಮನೆಯ ಒಡವೆ ಮಾರಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೆಆರ್‌ಎಸ್ ಕಟ್ಟಿಸಿದ್ದರು. ಕೆಆರ್‌ಎಸ್ ಕಟ್ಟುವಾಗ ಟಿಪ್ಪು ಸುಲ್ತಾನ್ ಸ್ಮರಿಸಿದರು. ಆಧುನಿಕ ಮಂಡ್ಯದ ನಿರ್ಮಾಣದಲ್ಲಿ ಮೈಸೂರು ಅರಸರು, ಹೈದರಾಲಿ, ಟಿಪ್ಪು ಸುಲ್ತಾನ್ ಅವರನ್ನು ಮರೆಯುವಂತಿಲ್ಲ. ವಿಶ್ವವೇ ಜಾಗತಿಕ ಹಳ್ಳಿಯಾಗಿರುವಾಗ ನಮ್ಮತನವನ್ನು ಬಿಟ್ಟುಕೊಡಬಾರದು. ಭಾಷೆ ಉಳಿಯುವುದು, ಬೆಳೆಯುವುದು ಅದನ್ನು ಬಳಸಿದಾಗ ಮಾತ್ರ. ನುಡಿಬಿಟ್ಟರೇ ನಾಡು ಬಿಟ್ಟಂತೆ ಭಾಷೆಗೇಡಿ ದೇಶಗೇಡಿಯಂತೆ. ಬಳಸದೆ ಹೋದರೆ ಭಾಷೆಯ ಅಸ್ತಿತ್ವ ಮತ್ತು ಬೆಳವಣಿಗೆಗೆ ಅಪಾಯವಾಗುತ್ತದೆ. ಕನ್ನಡದ ಅಸ್ಮಿತೆಗೆ ಉಂಟಾಗುವ ಸಮಸ್ಯೆ ಗುರುತಿಸಿ, ಪರಿಹಾರ ಕಂಡುಕೊಳ್ಳಲು ಸಮ್ಮೇಳನ ಸಹಾಯಕಾರಿಯಾಗುತ್ತದೆ. ಕನ್ನಡ ನೆಲದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮವಾಗಿರಬೇಕು. ಅವರದೇ ಭಾಷೆಯಲ್ಲಿ ಮಾತನಾಡುವುದನ್ನು ಬಿಟ್ಟು, ಇದು ನಿನ್ನ ಭಾಷೆ, ದೇಶ ಭಾಷೆ, ಸಾವಿರಾರು ವರ್ಷಗಳ ಸುಪುಷ್ಪ, ಸಾಹಿತ್ಯ ಭಾಷೆ ಎಂದು ಕುವೆಂಪುರವರ ಸಾಲು ನೆನೆದು ಮಾತನಾಡಿದರು.

ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೃಹತ್ ವೇದಿಕೆಯಲ್ಲಿ ಚಾಲನೆ ನೀಡಿ, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದೆ.

ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ, ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ… pic.twitter.com/RVOYKtDvoc

— Siddaramaiah (@siddaramaiah) December 20, 2024

ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ 25 ಅಡಿ ಪ್ರತಿಮೆಯಿದೆ. ಕರ್ನಾಟಕ ಸಾಹಿತ್ಯಿಕವಾಗಿ ಸಮೃದ್ಧ ಇತಿಹಾಸ ಹೊಂದಿದೆ. ಕರ್ನಾಟಕ 8 ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿದೆ. ಕನ್ನಡ ಡಿಜಿಟಲೀಕರಣ ಆರಂಭಿಸಲಾಗಿದೆ. ಸಮಗ್ರ ಕನ್ನಡ ಭಾಷಾ ಬಳಕೆ ಕಾಯ್ದೆ ಜಾರಿಗೆ ಹಾಗೂ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಎಷ್ಟೇ ಭಾಷೆ ಕಲಿತರು ಹೃದಯದ ಭಾಷೆ ಕನ್ನಡವಾಗಿರಬೇಕು. ಮಾತೃಭಾಷೆ ಶಿಕ್ಷಣಕ್ಕೆ ಒತ್ತುನೀಡಬೇಕು. ಖಾಸಗಿ ಮತ್ತು ಸರ್ಕಾರಿ ವಲಯದ ಉತ್ಪನ್ನಗಳ ಮೇಲೆ ಕಡ್ಡಾಯ ಕನ್ನಡ ಮುದ್ರಣವಾಗಬೇಕು ಎಂದು ತಿಳಿಸಿದರು.

ಸಾಹಿತ್ಯ ಜನಜೀವನದ ಪ್ರತಿಬಿಂಬವಾಗಿಬೇಕು. ಸಾಹಿತಿಗಳು ಜನಸಾಮಾನ್ಯರ ನೋವು ನಲಿವನ್ನು ಬರಹದ ಮೂಲಕ ಹಿಡಿದಿಡಬೇಕು. ಜಗತ್ತಿನ ಮಹತ್ವದ ಕೃತಿಗಳನ್ನು ತುರ್ತಾಗಿ ಕನ್ನಡಕ್ಕೆ ಅನುವಾದ ಮಾಡಬೇಕು. ವೈಜ್ಞಾನಿಕ, ವೈಚಾರಿಕ ದೃಷ್ಟಿಯಿಂದ ಪರಿಶೀಲಿಸಬೇಕು. ಮಂಡ್ಯದಲ್ಲಿ ನಡೆಯುತ್ತಿರುವ ಸಮ್ಮೇಳನ ಮಾಮೂಲಿ ಸಮ್ಮೇಳನವಾಗದೇ ನಾಡಿನ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಸಮ್ಮೇಳನವಾಗಬೇಕು. ದ್ವೇಷವಾದಿ ಶಕ್ತಿಗಳು ಮಂಡ್ಯದಲ್ಲಿ ವಿಷ ಬಿತ್ತಲು ಪ್ರಯತ್ನಿಸಿದರು. ಆದರೆ ಸಿಹಿ ಬೆಳೆಯುವ ಮಂಡ್ಯದವರು ವಿಷಹಾಕಲು ಬಂದವರನ್ನು ಒಳಗೆ ಬಿಟ್ಟುಕೊಳ್ಳಲಿಲ್ಲ. ಇತಿಹಾಸದಲ್ಲಿ ಮತ್ತೊಮ್ಮೆ ಮಂಡ್ಯದವರು ಸಿಹಿ ನೀಡುವವರು ವಿಷ ನೀಡುವವರಲ್ಲ ಎಂದು ಸಾಬೀತು ಮಾಡಿದ್ದೀರಿ ಎಂದು ಮಂಡ್ಯದ ಜನರನ್ನು ಕೊಂಡಾಡಿದರು.ಇದನ್ನೂ ಓದಿ: ಒಂದೇ ರಾತ್ರಿ 8ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ – 3.87 ಲಕ್ಷ ಮೌಲ್ಯದ ವಸ್ತು ಲೂಟಿ

TAGGED:87th Akhila Bharatha Kannada Sahitya Sammelanacm siddaramaiahkannadaKannada Literaturekannada sahitya sammelanamandyaಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕನ್ನಡಕನ್ನಡ ಸಾಹಿತ್ಯಮಂಡ್ಯಮುಖ್ಯಮಂತ್ರಿ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

PM Narendramodi and Emmanuel Macron virtually inaugurated the Tata Airbus Light Helicopter Final Assembly Line facility at Vemagal in Kolar
Karnataka

ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Public TV
By Public TV
43 minutes ago
DK Shivakumar 3
Bengaluru City

ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Public TV
By Public TV
47 minutes ago
indian railways
Bengaluru City

ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Public TV
By Public TV
1 hour ago
Big Bash League
Cricket

ಭಾರತದಲ್ಲಿ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ – ಪಾಕ್‌ ಆಟಗಾರರ ಕಥೆ ಏನು?

Public TV
By Public TV
1 hour ago
Tarique Rahman 2
Latest

ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ

Public TV
By Public TV
1 hour ago
T20 World Cup Australia out Zimbabwe reach Super 8 stage after Pallekele washout
Cricket

ಟಿ-20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ – ಸೂಪರ್‌-8ಕ್ಕೆ ಜಿಂಬಾಬ್ವೆ ಜಿಗಿತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?