Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿರ್ದೇಶಕನೊಂದಿಗೆ ನಟಿ ಪರಾರಿ- ತಾಯಿ ಆತ್ಮಹತ್ಯೆಗೆ ಯತ್ನ, ಅಜ್ಜಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಿರ್ದೇಶಕನೊಂದಿಗೆ ನಟಿ ಪರಾರಿ- ತಾಯಿ ಆತ್ಮಹತ್ಯೆಗೆ ಯತ್ನ, ಅಜ್ಜಿ ಸಾವು

Cinema

ನಿರ್ದೇಶಕನೊಂದಿಗೆ ನಟಿ ಪರಾರಿ- ತಾಯಿ ಆತ್ಮಹತ್ಯೆಗೆ ಯತ್ನ, ಅಜ್ಜಿ ಸಾವು

Public TV
Last updated: January 8, 2020 6:27 pm
Public TV
Share
3 Min Read
MND Actress Vijayalakshmi
SHARE

– ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ತಾಯಿ
– ಸಾಕು ತಂದೆಗೆ ಮೋಸ ಮಾಡಿದ್ಲಾ ನಟಿ?

ಮಂಡ್ಯ: ಸ್ಯಾಂಡಲ್‍ವುಡ್ ನಟಿ ಮೂರು ಸಿನಿಮಾಗಳಿಗೆ ಸಹಿ ಹಾಕಿ ಅಡ್ವಾನ್ಸ್ ತೆಗೆದುಕೊಂಡು ನಿರ್ದೇಶಕನೊಂದಿಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದ ಮನನೊಂದು ಆತ್ಮಹತ್ಯೆ ಯತ್ನಿಸಿದ್ದ ತಾಯಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು, ಅಜ್ಜಿ ಮೃತಪಟ್ಟಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಸುಮಾರು 16 ಸಿನಿಮಾಗಳಲ್ಲಿ ನಟಿಸಿರುವ ವಿಜಯಲಕ್ಷ್ಮಿ ಇದೀಗ ಪ್ರೇಮಮಹಲ್, ಜವಾರಿ ಲವ್, ಪ್ರೊಡಕ್ಷನ್ ನಂ.1 ಎಂಬ ಸಿನಿಮಾಗಳಿಗೆ ಸಹಿ ಹಾಕಿ ತುಂಗಾಭದ್ರಾ ಚಿತ್ರದ ನಿರ್ದೇಶಕ ಆಂಜನಪ್ಪ ಎಂಬವನ ಜೊತೆ ಓಡಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮೆಳ್ಳಹಳ್ಳಿ ಗ್ರಾಮದ ವಿಜಯಲಕ್ಷ್ಮಿ, ಕಳೆದ 10 ವರ್ಷಗಳಿಂದ ಚನ್ನಪಟ್ಟಣದಲ್ಲಿ ವಾಸವಾಗಿದ್ದರು. ತಮ್ಮ ಸಾಕು ತಂದೆ ಸ್ವಾಮಿ ಅವರ ಪೋಷಣೆಯಲ್ಲಿ ವಿದ್ಯಾಭ್ಯಾಸ ಮುಗಿಸಿ, ಚಿತ್ರರಂಗಕ್ಕೆ ಕಾಲಿಟ್ಟಿದ್ದರು.

MND Actress Vijayalakshmi B

ನಟಿ ವಿಜಯಲಕ್ಷ್ಮಿ ಶಿವರಾಜ್‍ಕುಮಾರ್ ನಟನೆಯ ಆಯುಷ್ಮಾನುಭವ ಸೇರಿದಂತೆ 16 ಚಿತ್ರಗಳಲ್ಲಿ ಸಹ ನಟಿಯಾಗಿ ನಟಿಸಿದ್ದರು. ನಂತರ ತುಂಗಾಭಧ್ರಾ, ಪ್ರೇಮಮಹಲ್, ಜವಾರಿ ಲವ್, ಪ್ರೊಡಕ್ಷನ್ ನಂ.1 ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯಿಸುವ ಅವಕಾಶ ಬಂದಿದ್ದವು. ಈ ಸಿನಿಮಾಗಳಲ್ಲಿ ಕೆಲವು ಸಿನಿಮಾಗಳು ಅರ್ಧದಷ್ಟು ಶೂಟಿಂಗ್ ಆಗಿದೆ.

ತುಂಗಾಭದ್ರಾ ಚಿತ್ರದ ನಿರ್ದೇಶಕ ಆಂಜನಪ್ಪ ಜೊತೆ ಶೂಟಿಂಗ್ ವೇಳೆ ಲವ್ ಆಗಿದೆ ಎಂದು ವಿಜಯಲಕ್ಷ್ಮಿ ಸಾಕು ತಂದೆ ಸ್ವಾಮಿ ಹೇಳಿದ್ದಾರೆ. ಕಳೆದ ಡಿಸೆಂಬರ್ ತಿಂಗಳಿನಲ್ಲಿ ರಾಯಚೂರಿಗೆ ಶೂಟಿಂಗ್‍ಗಾಗಿ ಹೋದ ಮಗಳು ಮತ್ತೆ ಮನೆಗೆ ಬಂದಿರಲಿಲ್ಲ. ಇದಕ್ಕೆ ಗಾಬರಿಯಾದ ಸ್ವಾಮಿ ಹಾಗೂ ತಾಯಿ ಎಲ್ಲಾ ಕಡೆ ಹುಡುಕಾಟ ನಡೆಸಿದ್ದರು. ನಂತರ ಆಂಜನಪ್ಪ ಜೊತೆ ವಿಜಯಲಕ್ಷ್ಮಿ ಇದ್ದಾಳೆ ಎಂದು ತಿಳಿದು ಬಂದಿತ್ತು. ಆದರೆ ಸ್ವಾಮಿ ಅವರು ಆಂಜನಪ್ಪನನ್ನು ವಿಚಾರಿಸಿದರೆ, ವಿಜಯಲಕ್ಷ್ಮಿ ನನ್ನ ಬಳಿ ಇಲ್ಲ ಎಂದು ಹೇಳಿದ್ದ. ಇದಾದ ಬಳಿಕ ಡಿಸೆಂಬರ್ ಮೂರನೇ ವಾರದಲ್ಲಿ ವಿಜಯಲಕ್ಷ್ಮಿ ಮನೆಗೆ ಬಂದಿದ್ದಳು. ಆಗ ಆಕೆಗೆ ಮನೆಯವರು ಬೈದು ಬುದ್ಧಿ ಹೇಳಿದ್ದರು. ಪೋಷಕರ ಮಾತಿನಂತೆ ನಡೆದುಕೊಳ್ಳುವ ಭರವಸೆ ನೀಡಿದ್ದ ವಿಜಯಲಕ್ಷ್ಮಿ, ಆಂಜನಪ್ಪ ತನ್ನನ್ನು ಒಂದು ಮನೆಯಲ್ಲಿ ಇರಿಸಿದ್ದ. ಮುಖಕ್ಕೆ ಬಟ್ಟೆ ಕಟ್ಟಿದ್ದ. ಇನ್ನು ಮುಂದೆ ನಾನು ಅವನೊಂದಿಗೆ ಹೋಗುವುದಿಲ್ಲ ಎಂದು ಹೇಳಿಕೊಂಡಿದ್ದಳು.

MND Actress Vijayalakshmi A

ವಿಜಯಲಕ್ಷ್ಮಿ ಜನವರಿ 3 ರಂದು ಬೆಳಗ್ಗೆ ಇದ್ದಕ್ಕಿಂದ್ದಂತೆ ಕಾಣೆಯಾಗಿದ್ದಳು. ಇದರಿಂದ ಮತ್ತೆ ಗಾಬರಿಗೊಂಡ ಸಾಕು ತಂದೆ ಸ್ವಾಮಿ ಅವರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದರು. ಆದರೆ ವಿಜಯಲಕ್ಷ್ಮಿಯ ಪತ್ತೆ ಆಗಲಿಲ್ಲ. ಹೀಗಾಗಿ ಅವರು ಮತ್ತೆ ಆಂಜನಪ್ಪನಿಗೆ ಫೋನ್ ಮಾಡಿ ವಿಜಯಲಕ್ಷ್ಮಿ ಎಲ್ಲಿ ಎಂದು ವಿಚಾರಿಸಿದ್ದರು. ಆದರೆ ಆಂಜನಪ್ಪ, ಆಕೆ ನನ್ನ ಬಳಿ ಇಲ್ಲ ಎಂದು ಹೇಳಿದ್ದ. ಈ ಬೆನ್ನಲ್ಲೇ ಆಂಜನಪ್ಪನ ಸಂಬಂಧಿಯೊಬ್ಬರು ಸ್ವಾಮಿ ಅವರಿಗೆ ಫೋನ್ ಮಾಡಿ, ವಿಜಯಲಕ್ಷ್ಮಿ ಆಂಜನಪ್ಪ ಬಳಿಯೇ ಇದ್ದಾಳೆ ಎಂದು ತಿಳಿಸಿದ್ದರು.

MND Actress Vijayalakshmi C

ಖಚಿತ ಮಾಹಿತಿಯೊಂದಿಗೆ ಸ್ವಾಮಿ ಅವರು ಆಂಜನಪ್ಪ ಮನೆಗೆ ಹೋಗಿದ್ದರು. ಆದರೆ ಅಲ್ಲಿ ಆಂಜನಪ್ಪ ಮತ್ತು ವಿಜಯಲಕ್ಷ್ಮಿ ಇಬ್ಬರು ಸಹ ಇರಲಿಲ್ಲ. ಹೀಗಾಗಿ ಸ್ವಾಮಿ ಅವರು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹಾಗೂ ಚನ್ನಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಗಳು ಕಾಣೆಯಾದ ಆತಂಕದಲ್ಲಿ ಇದ್ದ ವಿಜಯಲಕ್ಷ್ಮಿ ತಾಯಿ ಹಾಗೂ ಅಜ್ಜಿಗೆ ಪ್ರತಿ ದಿನವೂ ನಿರ್ಮಾಪಕರು ಬಂದು ನಿಮ್ಮ ಮಗಳು ಎಲ್ಲಿ ಎಂದು ಕೇಳುತ್ತಿದ್ದರು. ಹೀಗೆ ಪದೇ ಪದೇ ಕೇಳುತ್ತಿದ್ದರಿಂದ ಮನನೊಂದ ವಿಜಯಲಕ್ಷ್ಮಿ ತಾಯಿ ಮತ್ತು ಅಜ್ಜಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷ ತೆಗೆದುಕೊಂಡ ಪರಿಣಾಮ ವಿಜಯಲಕ್ಷ್ಮಿ ಅಜ್ಜಿ ಸಾವನ್ನಪ್ಪಿದ್ದು, ತಾಯಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

MND Actress Vijayalakshmi D

TAGGED:directorlovemandyaPublic TVSandalwood Actressvijayalakshmiನಟಿನಿರ್ದೇಶಕಪಬ್ಲಿಕ್ ಟಿವಿಮಂಡ್ಯವಿಜಯಲಕ್ಷ್ಮಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

mann ki baat
Dharwad

56gw ದಾಟಿದ ಭಾರತದ ಪವನಶಕ್ತಿ ಉತ್ಪಾದನೆ ಸಾಮರ್ಥ್ಯಕ್ಕೆ ಮೋದಿ ಶ್ಲಾಘನೆ: ಜೋಶಿ

Public TV
By Public TV
11 minutes ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
16 minutes ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
18 minutes ago
Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
21 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
24 minutes ago
teacher committed suicide by being shot in madikeri
Crime

ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
24 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?