ಮೋದಿ ತಾಕತ್ ಪಾಕ್‍ಗೆ ಗೊತ್ತಾಗಿದೆ – ಮತ್ತೆ ಪ್ರಧಾನಿ ಆಗಬೇಕೆಂಬುದು ನನ್ನ ಆಸೆ: ಎಸ್‍ಎಂ ಕೃಷ್ಣ

Public TV
3 Min Read
SM KRISHNA MODI

-ಕಾಂಗ್ರೆಸ್ ಪಕ್ಷದಲ್ಲಿದ್ದ ನನ್ನ ಬೆಂಬಲಿಗರೆಲ್ಲರೂ ಬಿಜೆಪಿಗೆ ಬರಬೇಕು

ಮಂಡ್ಯ: ಲೋಕಸಭಾ ಚುನಾವಣೆಗೆ ರಾಜ್ಯದ ಕೆಲ ಭಾಗಗಳಲ್ಲಿ ನಾನು ಪಕ್ಷದ ಪರ ಪ್ರಚಾರಕ್ಕೆ ಹೋಗಲಿದ್ದು, ಮತ್ತೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು ಎನ್ನುವುದು ನನ್ನ ಆಸೆ ಎಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಹೇಳಿದ್ದಾರೆ.

ಮಂಡ್ಯದಲ್ಲಿ ನಡೆದ ಪಕ್ಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದಿಂದ ಯಾವ ಅಧಿಕಾರವನ್ನು ಅಪೇಕ್ಷೆ ಮಾಡುವುದಿಲ್ಲ. ಲೋಕಸಭೆ ಚುನಾವಣೆ ದೇಶದಲ್ಲಿ ಅತ್ಯಂತ ಮಹತ್ವವಾದಗಿದ್ದು, ನಮ್ಮ ಗಮನವೆಲ್ಲ ಲೋಕಸಭೆ ಚುನಾವಣೆಗೆ ಕೇಂದ್ರಿಕೃತವಾಗಿದೆ. ಬಿಜೆಪಿಗೆ ಈ ಬಾರಿ ಕ್ಷೇತ್ರದಲ್ಲಿ ದೊಡ್ಡ ಬೆಂಬಲ ಸಿಗುವ ನಿರೀಕ್ಷೆ ಇದ್ದು, ಭಾರತ ದೇಶ ಇಂದು ನಿರ್ಣಾಯಕ ಘಟ್ಟ ಮುಟ್ಟುತ್ತಿದೆ. 2014ರಲ್ಲಿ ಭಾರತದಲ್ಲಿ ದೊಡ್ಡ ಕ್ರಾಂತಿ ನಡೆಯಿತು. ಆ ಕ್ರಾಂತಿಯ ಹರಿಕಾರ ನರೇಂದ್ರ ಮೋದಿ ಆಗಿದ್ದು, ಇದರ ಫಲವಾಗಿ ದೇಶಕ್ಕೆ ಉತ್ತಮ ಕೊಡುಗೆಗಳನ್ನು ಕೊಟ್ಟಿದ್ದಾರೆ. ಅನೇಕ ಒಳ್ಳೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದಾರೆ. ಮೋದಿ ಅವರ ಈ ಯೋಜನೆಗಳು ಸಹಾಯಕ ಆಗಿದೆಯಾ ಎಂಬ ಬಗ್ಗೆ ಗುಣಾತ್ಮಕ ಚಿಂತನೆ ನಡೆಯಬೇಕು ಎಂದರು.

SM KRISHNA MANDYA 2

ಭಾರತ ರಕ್ಷಣೆ ಹಾಗೂ ಅಭಿವೃದ್ಧಿ ವಿಚಾರದಲ್ಲಿ ಬೆಳೆವಣಿಗೆ ಆಗುತ್ತಿದ್ದು, ಮೋದಿ ತಾಕತ್ತು ಪಾಕಿಸ್ತಾನಕ್ಕೆ ಗೊತ್ತು. ಸದ್ಯ ಪಾಕಿಸ್ತಾನ ಅನಾಯಕತ್ವದ ಹಾದಿ ಹಿಡಿದಿದ್ದು, ಭಾರತ ಆರ್ಥಿಕವಾಗಿ ಬೆಳೆಯುತ್ತಿದೆ. ಅದಕ್ಕೆ ಪ್ರಧಾನಿಗಳಾಗಿರುವ ಮೋದಿ ಕಾರಣ. ಆದ್ದರಿಂದ ಮೋದಿ ಮತ್ತೆ ಅಧಿಕಾರಕ್ಕೆ ಬರಬೇಕು. ಇದೇ ವೇಳೆ ಮೋದಿ ವಿರೋಧಿಗಳು ಇದ್ದು, ಅವರನ್ನು ಸರ್ವಾಧಿಕಾರಿ ಎಂದು ಗುಜರಾತ್ ಘಟನೆಗಳನ್ನು ತೆಗೆದು ಟೀಕಿಸುತ್ತಾರೆ. ಆದರೆ ಮೋದಿ ಗಟ್ಟಿ ಮನುಷ್ಯ, ಸರ್ದಾರ್ ವಲ್ಲಭಭಾಯ್ ಪಟೇಲರಿಗೆ ಕಾಂಗ್ರೆಸ್ ಕೊಡದ ಗೌರವವನ್ನ ಅವರು ಕೊಟ್ಟಿದ್ದಾರೆ. ಪಟೇಲರ ಆಡಳಿತ ದೇಶಕ್ಕೆ ಸಿಗದಿದ್ದರೆ ಭಾರತ ಛಿದ್ರವಾಗುತ್ತಿತ್ತು. ಈಗ ಮೋದಿ ಮತ್ತೆ 5 ವರ್ಷ ದೇಶವನ್ನು ಮುಂದುವರಿಸಬೇಕಾದ ಅಗತ್ಯತೆ ಇದೆ ಎಂದರು.

ರಾಹುಲ್ ವಿರುದ್ಧ ವಾಗ್ದಾಳಿ: 2004 ರಿಂದ 2014 ರವರೆಗೂ ಇದ್ದ ಕಾಂಗ್ರೆಸ್ ಮುಂದಾಳತ್ವದ ಯುಪಿಎ ಸರ್ಕಾರದಲ್ಲಿ ನಾನು ವಿದೇಶಾಂಗ ಸಚಿವನಾಗಿದ್ದೆ. ಆಗ ನಡೆದ ಒಳ್ಳೆಯ ಹಾಗೂ ಕೆಟ್ಟ ಬೆಳವಣಿಗೆಯಲ್ಲಿ ನಾನು ಸಹ ಭಾಗಿ ಆಗಿದೆ. ಆಗಿನ ಪ್ರಧಾನಿಗಳಾದ ಮನಮೋಹನ್ ಸಿಂಗ್ ಅವರಿಗೆ ಸರ್ಕಾರ ಮೇಲೆ ಹಿಡಿತ ಇರಲಿಲ್ಲ. ಕೆಲವೊಂದು ವಿಚಾರಗಳು ಪ್ರಧಾನಿಗಳ ಗಮನಕ್ಕೆ ಬರದೆ ಆಗುತ್ತಿದ್ದವು. ಆದ್ದರಿಂದಲೇ ದೊಡ್ಡ ದೊಡ್ಡ ಹಗರಣ ನಡೆಯಿತು. ಮೋದಿ ಸರ್ಕಾರದಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ. ಅದೇ ದೇಶಕ್ಕೆ ಮೋದಿ ಕೊಟ್ಟ ದೊಡ್ಡ ಕೊಡುಗೆ. ಆದರೆ ನಾನು ಸಚಿವನಾಗಿದ್ದಾಗ 80 ವರ್ಷ ವಯಸ್ಸಿನವರು ಸಚಿವರಾಗಬಾರದು ಎಂದರು. ನಾನು ರಾಜೀನಾಮೆ ಕೊಟ್ಟು ಹೊರ ಬಂದೆ ಎಂದರು.

Sonia Gandhi Rahul Gandhi

ರಾಷ್ಟ್ರದ, ಪಾರ್ಲಿಮೆಂಟಿನ ಜವಾಬ್ದಾರನಲ್ಲದ ರಾಹುಲ್ ಸರ್ಕಾರದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿದ್ದರು. ಅದೇ ತೀರ್ಮಾನ ಅಂತಿಮವಾಗಿ ಚಲಾವಣೆಗೆ ಬರುತ್ತಿದ್ದವು. ಪ್ರಧಾನ ಕಾರ್ಯದರ್ಶಿ ಸಹ ಆಗದ ರಾಹುಲ್ ಗಾಂಧಿ ಸರ್ಕಾರದ ಮೇಲೆ ಹಿಡಿತ ಸಾಧಿಸಿದ್ದರು ಎಂದು ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ ನಾನು ಮುಖ್ಯಮಂತ್ರಿ ಆಗಿದ್ದಾಗ ವಾಜಪೇಯಿಯವರು ಪ್ರಧಾನಿ ಆಗಿದ್ದರು. ಆಗ ಅವರು ನನ್ನ ಪಾಲಿಗೆ ಧರ್ಮರಾಯನ ರೀತಿಯಾಗಿ ಈ ದೇಶವನ್ನು ಅಟಲ್‍ಬಿಹಾರಿ ವಾಜಪೇಯಿ ಆಳಿದರು ಎಂದು ತಿಳಿಸಿದರು.

ಸ್ಪರ್ಧೆ ಮಾಡಲ್ಲ: ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟಪಡಿಸಿದ ಅವರು, ಮಂಡ್ಯ ಕ್ಷೇತ್ರದಲ್ಲಿ ನನ್ನ ಬೆಂಬಲಿಗರು ಬಿಜೆಪಿ ಪಕ್ಷಕ್ಕೆ ಬನ್ನಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಇಂದು ಕಾರ್ಯಕರ್ತರೊಂದಿಗೆ ಕರೆದಿರುವ ಸಭೆ ಯಶಸ್ವಿ ಆಗುವ ವಿಶ್ವಾಸವಿದೆ. ನನ್ನ ಜೊತೆ ಕಾಂಗ್ರೆಸ್‍ನಲ್ಲಿದ್ದವರು ಬಿಜೆಪಿಗೆ ಬರಬೇಕು ಎಂಬುವುದು ನನ್ನ ಆಸೆ. ನಿರಂತರವಾಗಿ ಈ ಬಗ್ಗೆ ಬೆಂಬಲಿಗರ ಜೊತೆ ಮಾತನಾಡುತ್ತಿದ್ದೇನೆ ಎಂದರು. ಅಲ್ಲದೇ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆ ಬಗ್ಗೆ ನನಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *