ಮೈತ್ರಿಯಿಲ್ಲದಿದ್ರೆ ಜೆಡಿಎಸ್ 6 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ: ಸುರೇಶ್ ಗೌಡ

Public TV
1 Min Read
suresh gowda

ಮಂಡ್ಯ: ಮೈತ್ರಿಯಿಲ್ಲವಾದರೆ ಉಪಚುನಾವಣೆಯಲ್ಲಿ ಜೆಡಿಎಸ್ 5 ರಿಂದ 6 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ ಎಂದು ಶಾಸಕ ಸುರೇಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಜಿಲ್ಲೆಯ ನಾಗಮಂಗಲದ ಶಾಸಕರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್ ಪೇಟೆ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡಲಾಗುವುದು. ನಿಖಿಲ್ ಸ್ಪರ್ಧೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದರು.

nikhil

ಸಂಸದೆ ಸುಮಲತಾ ಪ್ರತಿಸ್ಪರ್ಧಿ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮಗೆ ಯಾರು ಪ್ರತಿಸ್ಪರ್ಧಿ ಎಂಬುದು ಮುಖ್ಯವಲ್ಲ. ಕಾರ್ಯಕರ್ತರು ಯಾರು ಅಭ್ಯರ್ಥಿ ಎಂಬುದನ್ನು ತಿಳಿಸುತ್ತಾರೆ ಅದು ಮುಖ್ಯ. ಸಿಎಂ ಯಡಿಯೂರಪ್ಪನವರು ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿ ಈಗಾಗಲೇ ದ್ವೇಷದ ರಾಜಕಾರಣ ಮಾಡಲು ಪ್ರಾರಂಭಿಸಿದ್ದಾರೆ. ಬಿಜೆಪಿಗೆ ಬಹುಮತವೂ ಇಲ್ಲ, ಅಲ್ಪ ಮತವೂ ಇಲ್ಲ ಎಂದು ವ್ಯಂಗ್ಯವಾಡಿದರು.

HDK 2

ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ಉಸ್ತುವಾರಿ ನೇಮಿಸಿಸುವುದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಮೈತ್ರಿ ಮುಂದುವರಿಯ ಬೇಕೇ ಅಥವಾ ಬೇಡವೆಂಬುದನ್ನು ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *