30 ವರ್ಷವಾದ್ರೂ ವಧು ಸಿಕ್ಕಿಲ್ಲ ಅಂತಾ `ಬ್ರಹ್ಮಚಾರಿಗಳ ನಡೆ ಮಾದಪ್ಪನ ಕಡೆ’

Public TV
1 Min Read
Male Mahadeshwara Hills

ಮಂಡ್ಯ: 30 ವರ್ಷ ದಾಟಿದ ಬ್ರಹ್ಮಚಾರಿಗಳು ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ಫೆ.23ರಂದು ಮಂಡ್ಯ (Mandya) ಜಿಲ್ಲೆಯ ಕೆ.ಎಂ ದೊಡ್ಡಿಯಿಂದ `ಬ್ರಹ್ಮಚಾರಿಗಳ ನಡೆ ಮಹದೇಶ್ವರ ಬೆಟ್ಟದ ಕಡೆ’ ಹೆಸರಿನಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

30 ವರ್ಷ ದಾಟಿದರೂ ಮದುವೆಯಾಗಿಲ್ಲ (Unmarried) ಅಂತಾ 200ಕ್ಕೂ ಹೆಚ್ಚು ಮಂದಿ ಬ್ರಹ್ಮಚಾರಿಗಳು ಶ್ರೀಘ್ರ ವಧು ಸಿಗಲೆಂದು ಪ್ರಾರ್ಥನೆ ಸಲ್ಲಿಸುವ ಸಲುವಾಗಿ ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿಯಿಂದ ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ. ಇದನ್ನೂ ಓದಿ: ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

Poster

ಈ ಪಾದಯಾತ್ರೆಯಲ್ಲಿ ಕೇವಲ ಮಂಡ್ಯ ಜಿಲ್ಲೆಯವರಲ್ಲದೇ ಮೈಸೂರು, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬ್ರಹ್ಮಚಾರಿಗಳು ಭಾಗಿಯಾಗಲಿದ್ದಾರೆ. ನೋಂದಣಿ ಮಾಡಿಕೊಂಡವರಿಗೆ ಮಾತ್ರ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಲ್ಪಿಸಲಾಗಿದೆ. ಇದನ್ನೂ ಓದಿ: `ನನ್ನ ಹೆಂಡತಿಗಿಂತ ಹೆಚ್ಚಾಗಿ ವಿರಾಟ್ ಕೊಹ್ಲಿಯನ್ನ ಪ್ರೀತಿಸುತ್ತೀನಿ’ – ಅಭಿಮಾನಿ ಪೋಸ್ಟರ್‌ಗೆ ನೆಟ್ಟಿಗರು ಫಿದಾ

MARRIAGE

ಈ ಪಾದಯಾತ್ರೆಯಲ್ಲಿ ವಿವಾಹಿತರು ಪಾಲ್ಗೊಳ್ಳುವಂತಿಲ್ಲ, ವಿವಾಹ ನಿಶ್ಚಿತಾರ್ಥ ಆದವರೂ ಬರುವಂತಿಲ್ಲ ಹಾಗೂ 30 ವರ್ಷ ದಾಟಿದ ಬ್ರಹ್ಮಚಾರಿಗಳು ಮಾತ್ರ ಪಾಲ್ಗೊಳ್ಳಬೇಕು ಎಂದು ಆಯೋಜಕರು ಷರತ್ತು ವಿಧಿಸಿದ್ದಾರೆ.

ವಿವಾಹವಾಗಲು ಹುಡುಗಿ ಸಿಗದೇ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಧೈರ್ಯವಾಗಿ ಇರಬೇಕೆಂದು ಅವಿವಾಹಿತರನ್ನು ಸಂಘಟಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಇದಾಗಿದೆ ಎಂದು ಆಯೋಜಕರು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *