ಅಂತ್ಯಕ್ರಿಯೆಗೂ ಮುನ್ನವೇ ಅಂಬಿ ಪ್ರತಿಮೆ ಅನಾವರಣ- ಗ್ರಾಮಸ್ಥರಿಂದ ಪೂಜೆ

Public TV
1 Min Read
MND AMBI copy

ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಂಬಿ ಪ್ರತಿಮೆ ಅನಾವರಣಗೊಳಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಹೊಸೂರು ಗ್ರಾಮದಲ್ಲಿ ಪಿಒಪಿ ಪ್ರತಿಮೆ ಅನಾವರಣಗೊಳಿಸಿದ್ದಾರೆ. ಅಂಬರೀಶ್ ಅವರ ಅಂತ್ಯಕ್ರಿಯೆಗೂ ಮುನ್ನವೇ ಗ್ರಾಮಸ್ಥರು ಈ ಪ್ರತಿಮೆ ಅನಾವರಣಗೊಳಿಸಿ ಪೂಜೆ ಸಲ್ಲಿಸಿದ್ದಾರೆ.

AMBAREESH copy

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಂಬರೀಶ್ ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದರು. ನಂತರ ಅವರ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ನಂತರ ಭಾನುವಾರ ಸಂಜೆ ಮಂಡ್ಯಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಮೃತದೇಹವನ್ನು ರವಾನೆ ಮಾಡಲಾಗಿತ್ತು. ಅಲ್ಲಿನ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಂಡ್ಯ ಜನತೆಯ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಇಂದು ಬೆಳಗ್ಗೆ ಪಾರ್ಥಿವ ಶರೀರವನ್ನು ಮತ್ತೆ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ ರವಾನಿಸಲಾಗಿತ್ತು. ನಂತರ ಕಂಠೀರವ ಕ್ರೀಡಾಂಗಣದಿಂದ ಕಂಠೀರವ ಸ್ಟುಡಿಯೋಗೆ ಮೆರವಣಿಗೆ ಮೂಲಕ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕೆ ಕೊಂಡೊಯ್ಯಲಾಯಿತು.

MND AMBI PUTTALI AV 5 copy

ಮೆರವಣಿಗೆಯಲ್ಲಿ ನಟರಾದ ದರ್ಶನ್, ಯಶ್, ಶಿವರಾಜ್ ಕುಮಾರ್, ರಾಕ್ ಲೈನ್ ವೆಂಕಟೇಶ್, ಡಿಕೆ ಶಿವಕುಮಾರ್ ಹಾಗೂ ಮುನಿರತ್ನ ಸೇರಿದಂತೆ ಹಲವಾರು ನಟರು, ನಟಿಯರು ಹಾಗೂ ಗಣ್ಯರು ಭಾಗವಹಿಸಿದ್ದರು.

https://www.youtube.com/watch?v=ei5fso60PsU

https://www.youtube.com/watch?v=vpV25SEDROE

https://www.youtube.com/watch?v=c6MUttZF6yM

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *