ಮಂಡ್ಯ: ಒಂಟಿ ಮಹಿಳೆಯ (Wpmen) ಮೃತದೇಹ ಮಲಗಿದ್ದಲ್ಲೇ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಮೇಲ್ನೋಟಕ್ಕೆ ಇದು ಶಾರ್ಟ್ ಸರ್ಕ್ಯೂಟ್ನಂತೆ ಕಂಡುಬಂದಿತ್ತು. ಈ ಕುರಿತು ಪ್ರಾಥಮಿಕ ತನಿಖೆ ನಡೆಸಿದಾಗ ಮೃತರ ಚಿನ್ನಾಭರಣ ಸೇರಿ ಬೆಲೆ ಬಾಳುವ ವಸ್ತುಗಳು ಕಳುವಾಗಿದ್ದು, ಕೊಲೆ ಎಸಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಶಾಲಾ ಮಕ್ಕಳಿಗೆ ಎನ್ಇಪಿ ತರುವ ಬದಲು ಡ್ರಗ್ಸ್ ದಂಧೆ ತಡೆಯಲಿ: ಕುಮಾರಸ್ವಾಮಿ
ಮಾರಸಿಂಗನಹಳ್ಳಿ ಗ್ರಾಮದ ಪ್ರೇಮಾ (42) ಎಂಬಾಕೆ ಮೃತಪಟ್ಟ ಮಹಿಳೆ. ಪ್ರೇಮಾಳ ಗಂಡ 10 ವರ್ಷಗಳ ಹಿಂದೆಯೇ ಅನಾರೋಗ್ಯದಿಂದ ಮೃತಪಟ್ಟಿದ್ದರು. ಒಬ್ಬನೇ ಮಗ ಹಾಗೂ ಸೊಸೆ ಬೆಂಗಳೂರಿನಲ್ಲಿ ವಾಸವಿದ್ದಾರೆ. ಹೀಗಾಗಿ ಪ್ರೇಮ ಊರಿನಲ್ಲಿ ಒಂಟಿಯಾಗಿ ವಾಸವಿದ್ದರು. ಇದನ್ನೂ ಓದಿ: ಮ್ಯೂಸಿಕ್ ಸೌಂಡ್ ಕಡಿಮೆ ಮಾಡಿ ಎಂದಿದ್ದಕ್ಕೆ ಸೇನಾಧಿಕಾರಿ ಕಾರಿಗೆ ಬೆಂಕಿ ಇಟ್ಟವರ ಹೋಟೆಲ್ಗೆ ಬಿತ್ತು ಬೀಗ
ಶನಿವಾರ ಊರಿಗೆ ಬಂದಿದ್ದ ಮಗ ಸೊಸೆ ಸೋಮವಾರ ಬೆಳಿಗ್ಗೆಯಷ್ಟೇ ವಾಪಸ್ಸಾಗಿದ್ರು. ಮಂಗಳವಾರ ಬೆಳಿಗ್ಗೆ ಅಕ್ಕಪಕ್ಕದ ಮನೆಯವರು ಎಂದಿನಂತೆ ಎದ್ದು ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿದ್ದರು. ಈ ವೇಳೆ ಪ್ರೇಮಾ ಮನೆಯಿಂದ ದಟ್ಟ ಹೊಗೆ ಬರ್ತಿತ್ತು. ಬೆಂಕಿಯನ್ನು ನಂದಿಸಲು ಅಂತ ಒಳಗೆ ತೆರಳಿದವರಿಗೆ ಶಾಕ್ ಕಾದಿತ್ತು. ರೂಮಿನಲ್ಲಿ ಪ್ರೇಮ ಮಲಗಿದ್ದ ಮಂಚಕ್ಕೆ ಬೆಂಕಿ ಬಿದ್ದಿದ್ದು, ಅಷ್ಟರಲ್ಲಿ ಮೃತ ದೇಹ ಭಾಗಶಃ ಸುಟ್ಟು ಕರಕಲಾಗಿತ್ತು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರಿಗೆ ತನಿಖೆ (Police Investigation) ವೇಳೆ ಗೊಂದಲಗಳು ಎದುರಾಗಿತ್ತು. ಹಿಂದೊಮ್ಮೆ ಅದೇ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದರಿಂದ ಅದೇ ಸಮಸ್ಯೆ ಆಗಿರಬಹುದಾ ಅನ್ನೋ ಪ್ರಶ್ನೆ ಉದ್ಭವಿಸಿತ್ತು. ಬಳಿಕ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಹಾಗೂ ಕೆಇಬಿ ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಿ ಕೆಲವು ಸಾಕ್ಷ್ಯಗಳನ್ನ ಕಲೆ ಹಾಕಿದ್ರು.
ಮನೆಯ ಬೀರು ಬಾಗಿಲು ತೆರೆದಿತ್ತು. ಬಟ್ಟೆಗಳು ಚಲ್ಲಾಪಿಲ್ಲಿ ಆಗಿದ್ದವು. ಅದ್ರಲ್ಲಿದ್ದ ಸುಮಾರು 100 ಗ್ರಾಮ್ ಚಿನ್ನಾಭರಣ, ಒಂದು ಲ್ಯಾಪ್ಟಾಪ್ ಕಳುವಾಗಿದೆ. ಈ ಹಿನ್ನೆಲೆಯಲ್ಲಿ ಕೊಲೆ ಶಂಕೆ ವ್ಯಕ್ತವಾಗಿದೆ. ಸದ್ಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k