Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಪೌರತ್ವ ಪರ ಜನ ಜಾಗೃತಿ ಸಭೆ – ಹರಿದು ಬಂದ ಕೇಸರಿ ಸಾಗರ

Public TV
Last updated: January 28, 2020 12:44 am
Public TV
Share
2 Min Read
mng 18
SHARE

ಮಂಗಳೂರು: ಪೌರತ್ವ ವಿಚಾರ ಮಂಗಳೂರಿನಲ್ಲಿ ಮತ್ತೆ ಕಿಚ್ಚು ಹಚ್ಚಿದೆ. ಪೌರತ್ವ ಕಾಯ್ದೆ ಬೆಂಬಲಿಸಿ ಕಡಲನಗರಿಯಲ್ಲಿ ಲಕ್ಷಾಂತರ ಜನ ಒಂದಾಗಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪೌರತ್ವ ಕಾಯ್ದೆಯ ಬಗ್ಗೆ ಮಂಗಳೂರಿನಲ್ಲಿ ಘಂಟಾಘೋಷ ಮೊಳಗಿಸಿದ್ದು ಭಾರತದ ಯಾವುದೇ ಮುಸ್ಲಿಮರಿಗೂ ಇದರಿಂದ ತೊಂದರೆಯಾಗಲ್ಲ ಎಂದು ಸಾರಿದ್ದಾರೆ. ಮುಸ್ಲಿಮರನ್ನು ಎತ್ತಿಕಟ್ಟುವ ಪ್ರತಿಪಕ್ಷಗಳದ್ದು ದೊಡ್ಡ ಪಿತೂರಿ ಎಂದು ಕಿಡಿಕಾರಿದ್ದಾರೆ.

ಕರಾವಳಿ ಕೇಸರಿ ಪಾಳಯದ ಪ್ರಭಾವಿ ನೆಲ ಅನ್ನುವುದನ್ನು ಬಿಜೆಪಿ ನಾಯಕರು ಮತ್ತೆ ಸಾಬೀತು ಪಡಿಸಿದ್ದಾರೆ. ಪೌರತ್ವ ಕಾಯ್ದೆ ವಿರೋಧಿಸಿ ಲಕ್ಷಾಂತರ ಜನ ಸೇರಿದ್ದ ಮಂಗಳೂರಿನಲ್ಲಿಯೇ ಕಾಯ್ದೆ ಬೆಂಬಲಿಸಿ ಲಕ್ಷಾಂತರ ಜನರನ್ನು ಒಗ್ಗೂಡಿಸಿದ್ದಾರೆ. ಮಂಗಳೂರು ಹೊರವಲಯದ ಬಂಗ್ರಕುಳೂರಿನಲ್ಲಿ ನಡೆದ ಬೃಹತ್ ಜನಜಾಗೃತಿ ಸಮಾವೇಶದಲ್ಲಿ ಕೇಸರಿ ಪಾಳಯ ಅಬ್ಬರಿಸಿದ್ದು ವಿರೋಧ ಪಕ್ಷಗಳಿಗೆ ಎಚ್ಚರಿಕೆ ಗಂಟೆ ಮೊಳಗಿಸಿದೆ.

mng2 2

ಪೌರತ್ವ ಕಾಯಿದೆ, ಎನ್.ಆರ್.ಸಿ, ಎನ್.ಪಿ.ಆರ್ ಬಗ್ಗೆ ಹೆಚ್ಚು ಕಿಚ್ಚು ಕಾಣಿಸಿಕೊಂಡಿದ್ದು ಉತ್ತರ ಪ್ರದೇಶ ಬಿಟ್ಟರೆ, ಕರಾವಳಿಯ ಮಂಗಳೂರಿನಲ್ಲಿ. ಹೀಗಾಗಿ ಕಾಯ್ದೆ ಬಗ್ಗೆ ಸಮರ್ಥನಾ ಸಮಾವೇಶ ಬಿಜೆಪಿಗೆ ಅನಿವಾರ್ಯ ಆಗಿತ್ತು. ಆರಂಭದಲ್ಲಿ ಬಿಜೆಪಿ ಗೃಹ ಸಚಿವ ಅಮಿತ್ ಶಾರನ್ನು ಕರೆಸಲು ಯೋಜನೆ ಹಾಕಿತ್ತು. ಕೊನೆ ಕ್ಷಣದಲ್ಲಿ ಅಮಿತ್ ಶಾ ಬಿಟ್ಟು ಬಿಜೆಪಿ ಮಾಜಿ ಅಧ್ಯಕ್ಷ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನು ಕರೆಸಿ ಕಾಯ್ದೆ ಬಗ್ಗೆ ಜನರಿಗೆ ವಾಗ್ದಾನ ನೀಡುವಂತೆ ಮಾಡಿದೆ. ಒಂದು ಲಕ್ಷಕ್ಕೂ ಹೆಚ್ಚು ಸೇರಿದ್ದ ಜನರನ್ನು ನೋಡಿದ ರಾಜನಾಥ್ ಸಿಂಗ್, ಇಷ್ಟು ದೊಡ್ಡ ಸಮಾವೇಶ ಉದ್ದೇಶಿಸಿ ಇದೇ ಮೊದಲ ಬಾರಿಗೆ ಮಾತಾಡುತ್ತಿದ್ದೇನೆಂದು ಹರ್ಷ ವ್ಯಕ್ತಪಡಿಸಿದರು.

ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು 1949ರಲ್ಲಿ ಕಾಂಗ್ರೆಸ್ ನಾಯಕರೇ ಹೇಳಿದ್ದರು. 2004ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಲೋಕಸಭೆಯಲ್ಲಿ ಈ ಬಗ್ಗೆ ಮತ್ತೆ ಪ್ರಸ್ತಾಪ ಮಾಡಿದ್ದರು. ಆದರೆ, ಕಾಯ್ದೆಗೆ ತಿದ್ದುಪಡಿ ಆಗಲಿಲ್ಲ. ಈಗ ಮೋದಿ ಸರ್ಕಾರ ಆ ಕೆಲಸ ಮಾಡಿದಾಗ, ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಮುಸ್ಲಿಮರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದೆ. ಈ ಕಾಯ್ದೆಯಿಂದ ಯಾವುದೇ ಭಾರತೀಯ ಮುಸ್ಲಿಮರಿಗೆ ತೊಂದರೆಯಾಗಲ್ಲ. ಎನ್.ಪಿ.ಆರ್ ಜನಗಣತಿ ಅಷ್ಟೇ. ಅದರಿಂದ ಯಾವುದೇ ಸಮಸ್ಯೆ ಆಗಲ್ಲ ಎಂದು ಹೇಳಿದರು.

mng3

ಇದಲ್ಲದೆ, ತ್ರಿವಳಿ ತಲಾಖ್, ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ 370 ವಿಧಿ ರದ್ದತಿ ಬಗ್ಗೆಯೂ ಪ್ರಸ್ತಾಪಿಸಿದ ರಾಜನಾಥ್ ಸಿಂಗ್, ಮುಂದಿನ ಗುರಿ ಪಿಓಕೆಯಾಗಿದ್ದು ಅದನ್ನೂ ಪಡೆದೇ ತೀರುವುದಾಗಿ ಶಪಥ ಮಾಡಿದರು. ಅಲ್ಲದೆ ಕಾಶ್ಮೀರದಿಂದ ಹೊರಹಾಕಲ್ಪಟ್ಟಿದ್ದ ಕಾಶ್ಮೀರಿ ಪಂಡಿತರನ್ನೇ ಮತ್ತೆ ಅದೇ ಜಾಗದಲ್ಲಿ ಕೂರಿಸುತ್ತೇವೆ ಅಂತ ಹೇಳಿದರು.

mng4

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮೂಲೆ ಮೂಲೆಯಿಂದ ಜನ ಆಗಮಿಸಿದ್ದರು. ಸುಮಾರು 800 ಕ್ಕೂ ಹೆಚ್ಚು ಬಸ್, ಕಾರು ಸೇರಿ ಸಾವಿರಾರು ವಾಹನಗಳಲ್ಲಿ ಜನ ಆಗಮಿಸಿದ್ದು ಸಿಎಎ ಪರವಾಗಿ ಘಂಟಾಘೋಷ ಮೊಳಗಿಸಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಸಂಸದೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮಾತನಾಡಿದರು. ಕರಾವಳಿಯ ನೆಲ ಸಿಎಎ ವಿಚಾರದಲ್ಲಿ ಪರ-ವಿರೋಧಿ ಕಿಚ್ಚಿನ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿದ್ದು, ಉಭಯ ಬಣಗಳ ಮುಂದಿನ ನಡೆ ಕುತೂಹಲ ಸೃಷ್ಟಿಸಿದೆ.

TAGGED:bjpCAAMangaloremuslimPublic TVrajnath singhಪಬ್ಲಿಕ್ ಟಿವಿಬಿಜೆಪಿಮಂಗಳೂರುಮುಸ್ಲಿಂರಾಜನಾಥ್ ಸಿಂಗ್ಸಿಎಎ
Share This Article
Facebook Whatsapp Whatsapp Telegram

You Might Also Like

Crime
Bengaluru City

ಮಗುವಿಗೆ ಜನ್ಮ ನೀಡಿ ರಕ್ತಸ್ರಾವದಿಂದ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿ ಸಾವು

Public TV
By Public TV
7 hours ago
kannadigas israel and iran return
Bengaluru City

ಇಸ್ರೇಲ್-ಇರಾನ್ ಸಂಘರ್ಷ; 18 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

Public TV
By Public TV
7 hours ago
Amit Shah in Benagluru
Bengaluru City

ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ – ತಡರಾತ್ರಿ ರೆಬೆಲ್ ನಾಯಕ ಸಭೆ

Public TV
By Public TV
7 hours ago
Chess Divya Deshmukh
Latest

ಚೆಸ್ | ದಿವ್ಯಾ ದೇಶಮುಖ್ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

Public TV
By Public TV
8 hours ago
TIGER
Chamarajanagar

ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು

Public TV
By Public TV
9 hours ago
Ramagara Murder
Court

ವರದಕ್ಷಿಣೆ ಕಿರುಕುಳದಿಂದ ಪತ್ನಿ ಸಾವು ಪ್ರಕರಣ – ಪತಿಗೆ ಜೀವಾವಧಿ ಶಿಕ್ಷೆ

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?