Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೌರತ್ವ ಪರ ಜನ ಜಾಗೃತಿ ಸಭೆ – ಹರಿದು ಬಂದ ಕೇಸರಿ ಸಾಗರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಪೌರತ್ವ ಪರ ಜನ ಜಾಗೃತಿ ಸಭೆ – ಹರಿದು ಬಂದ ಕೇಸರಿ ಸಾಗರ

Dakshina Kannada

ಪೌರತ್ವ ಪರ ಜನ ಜಾಗೃತಿ ಸಭೆ – ಹರಿದು ಬಂದ ಕೇಸರಿ ಸಾಗರ

Public TV
Last updated: January 28, 2020 12:44 am
Public TV
Share
2 Min Read
mng 18
SHARE

ಮಂಗಳೂರು: ಪೌರತ್ವ ವಿಚಾರ ಮಂಗಳೂರಿನಲ್ಲಿ ಮತ್ತೆ ಕಿಚ್ಚು ಹಚ್ಚಿದೆ. ಪೌರತ್ವ ಕಾಯ್ದೆ ಬೆಂಬಲಿಸಿ ಕಡಲನಗರಿಯಲ್ಲಿ ಲಕ್ಷಾಂತರ ಜನ ಒಂದಾಗಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪೌರತ್ವ ಕಾಯ್ದೆಯ ಬಗ್ಗೆ ಮಂಗಳೂರಿನಲ್ಲಿ ಘಂಟಾಘೋಷ ಮೊಳಗಿಸಿದ್ದು ಭಾರತದ ಯಾವುದೇ ಮುಸ್ಲಿಮರಿಗೂ ಇದರಿಂದ ತೊಂದರೆಯಾಗಲ್ಲ ಎಂದು ಸಾರಿದ್ದಾರೆ. ಮುಸ್ಲಿಮರನ್ನು ಎತ್ತಿಕಟ್ಟುವ ಪ್ರತಿಪಕ್ಷಗಳದ್ದು ದೊಡ್ಡ ಪಿತೂರಿ ಎಂದು ಕಿಡಿಕಾರಿದ್ದಾರೆ.

ಕರಾವಳಿ ಕೇಸರಿ ಪಾಳಯದ ಪ್ರಭಾವಿ ನೆಲ ಅನ್ನುವುದನ್ನು ಬಿಜೆಪಿ ನಾಯಕರು ಮತ್ತೆ ಸಾಬೀತು ಪಡಿಸಿದ್ದಾರೆ. ಪೌರತ್ವ ಕಾಯ್ದೆ ವಿರೋಧಿಸಿ ಲಕ್ಷಾಂತರ ಜನ ಸೇರಿದ್ದ ಮಂಗಳೂರಿನಲ್ಲಿಯೇ ಕಾಯ್ದೆ ಬೆಂಬಲಿಸಿ ಲಕ್ಷಾಂತರ ಜನರನ್ನು ಒಗ್ಗೂಡಿಸಿದ್ದಾರೆ. ಮಂಗಳೂರು ಹೊರವಲಯದ ಬಂಗ್ರಕುಳೂರಿನಲ್ಲಿ ನಡೆದ ಬೃಹತ್ ಜನಜಾಗೃತಿ ಸಮಾವೇಶದಲ್ಲಿ ಕೇಸರಿ ಪಾಳಯ ಅಬ್ಬರಿಸಿದ್ದು ವಿರೋಧ ಪಕ್ಷಗಳಿಗೆ ಎಚ್ಚರಿಕೆ ಗಂಟೆ ಮೊಳಗಿಸಿದೆ.

mng2 2

ಪೌರತ್ವ ಕಾಯಿದೆ, ಎನ್.ಆರ್.ಸಿ, ಎನ್.ಪಿ.ಆರ್ ಬಗ್ಗೆ ಹೆಚ್ಚು ಕಿಚ್ಚು ಕಾಣಿಸಿಕೊಂಡಿದ್ದು ಉತ್ತರ ಪ್ರದೇಶ ಬಿಟ್ಟರೆ, ಕರಾವಳಿಯ ಮಂಗಳೂರಿನಲ್ಲಿ. ಹೀಗಾಗಿ ಕಾಯ್ದೆ ಬಗ್ಗೆ ಸಮರ್ಥನಾ ಸಮಾವೇಶ ಬಿಜೆಪಿಗೆ ಅನಿವಾರ್ಯ ಆಗಿತ್ತು. ಆರಂಭದಲ್ಲಿ ಬಿಜೆಪಿ ಗೃಹ ಸಚಿವ ಅಮಿತ್ ಶಾರನ್ನು ಕರೆಸಲು ಯೋಜನೆ ಹಾಕಿತ್ತು. ಕೊನೆ ಕ್ಷಣದಲ್ಲಿ ಅಮಿತ್ ಶಾ ಬಿಟ್ಟು ಬಿಜೆಪಿ ಮಾಜಿ ಅಧ್ಯಕ್ಷ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನು ಕರೆಸಿ ಕಾಯ್ದೆ ಬಗ್ಗೆ ಜನರಿಗೆ ವಾಗ್ದಾನ ನೀಡುವಂತೆ ಮಾಡಿದೆ. ಒಂದು ಲಕ್ಷಕ್ಕೂ ಹೆಚ್ಚು ಸೇರಿದ್ದ ಜನರನ್ನು ನೋಡಿದ ರಾಜನಾಥ್ ಸಿಂಗ್, ಇಷ್ಟು ದೊಡ್ಡ ಸಮಾವೇಶ ಉದ್ದೇಶಿಸಿ ಇದೇ ಮೊದಲ ಬಾರಿಗೆ ಮಾತಾಡುತ್ತಿದ್ದೇನೆಂದು ಹರ್ಷ ವ್ಯಕ್ತಪಡಿಸಿದರು.

ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು 1949ರಲ್ಲಿ ಕಾಂಗ್ರೆಸ್ ನಾಯಕರೇ ಹೇಳಿದ್ದರು. 2004ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಲೋಕಸಭೆಯಲ್ಲಿ ಈ ಬಗ್ಗೆ ಮತ್ತೆ ಪ್ರಸ್ತಾಪ ಮಾಡಿದ್ದರು. ಆದರೆ, ಕಾಯ್ದೆಗೆ ತಿದ್ದುಪಡಿ ಆಗಲಿಲ್ಲ. ಈಗ ಮೋದಿ ಸರ್ಕಾರ ಆ ಕೆಲಸ ಮಾಡಿದಾಗ, ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಮುಸ್ಲಿಮರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದೆ. ಈ ಕಾಯ್ದೆಯಿಂದ ಯಾವುದೇ ಭಾರತೀಯ ಮುಸ್ಲಿಮರಿಗೆ ತೊಂದರೆಯಾಗಲ್ಲ. ಎನ್.ಪಿ.ಆರ್ ಜನಗಣತಿ ಅಷ್ಟೇ. ಅದರಿಂದ ಯಾವುದೇ ಸಮಸ್ಯೆ ಆಗಲ್ಲ ಎಂದು ಹೇಳಿದರು.

mng3

ಇದಲ್ಲದೆ, ತ್ರಿವಳಿ ತಲಾಖ್, ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ 370 ವಿಧಿ ರದ್ದತಿ ಬಗ್ಗೆಯೂ ಪ್ರಸ್ತಾಪಿಸಿದ ರಾಜನಾಥ್ ಸಿಂಗ್, ಮುಂದಿನ ಗುರಿ ಪಿಓಕೆಯಾಗಿದ್ದು ಅದನ್ನೂ ಪಡೆದೇ ತೀರುವುದಾಗಿ ಶಪಥ ಮಾಡಿದರು. ಅಲ್ಲದೆ ಕಾಶ್ಮೀರದಿಂದ ಹೊರಹಾಕಲ್ಪಟ್ಟಿದ್ದ ಕಾಶ್ಮೀರಿ ಪಂಡಿತರನ್ನೇ ಮತ್ತೆ ಅದೇ ಜಾಗದಲ್ಲಿ ಕೂರಿಸುತ್ತೇವೆ ಅಂತ ಹೇಳಿದರು.

mng4

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮೂಲೆ ಮೂಲೆಯಿಂದ ಜನ ಆಗಮಿಸಿದ್ದರು. ಸುಮಾರು 800 ಕ್ಕೂ ಹೆಚ್ಚು ಬಸ್, ಕಾರು ಸೇರಿ ಸಾವಿರಾರು ವಾಹನಗಳಲ್ಲಿ ಜನ ಆಗಮಿಸಿದ್ದು ಸಿಎಎ ಪರವಾಗಿ ಘಂಟಾಘೋಷ ಮೊಳಗಿಸಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಸಂಸದೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮಾತನಾಡಿದರು. ಕರಾವಳಿಯ ನೆಲ ಸಿಎಎ ವಿಚಾರದಲ್ಲಿ ಪರ-ವಿರೋಧಿ ಕಿಚ್ಚಿನ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿದ್ದು, ಉಭಯ ಬಣಗಳ ಮುಂದಿನ ನಡೆ ಕುತೂಹಲ ಸೃಷ್ಟಿಸಿದೆ.

TAGGED:bjpCAAMangaloremuslimPublic TVrajnath singhಪಬ್ಲಿಕ್ ಟಿವಿಬಿಜೆಪಿಮಂಗಳೂರುಮುಸ್ಲಿಂರಾಜನಾಥ್ ಸಿಂಗ್ಸಿಎಎ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Ashok Pattan
Bengaluru City

ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್

Public TV
By Public TV
8 minutes ago
Vijayapura Kidney Donate
Districts

9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

Public TV
By Public TV
33 minutes ago
Murugesh Nirani
Kalaburagi

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Public TV
By Public TV
36 minutes ago
shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
1 hour ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
1 hour ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?