Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ದೇವಾಲಯದಲ್ಲಿ ದಲಿತ ಮಹಿಳಾ ಪೊಲೀಸ್‍ಗೆ ಅವಮಾನ: ವರದಿ ಕೇಳಿದ ಸರ್ಕಾರ

Public TV
Last updated: December 7, 2019 5:56 pm
Public TV
Share
2 Min Read
mng temple 2
SHARE

– ಪಬ್ಲಿಕ್ ಟಿವಿ ವರದಿಗೆ ಕೊನೆಗೂ ಸ್ಪಂದನೆ

ಮಂಗಳೂರು: ದೇವಸ್ಥಾನದಿಂದ ದಲಿತ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಹೊರ ಹಾಕಿದ ಪ್ರಕರಣದ ವರದಿಯನ್ನು ಸರ್ಕಾರ ಕೇಳಿದೆ. ಈ ಮೂಲಕ ಪಬ್ಲಿಕ್ ಟಿವಿಯ ವರದಿಗೆ ಫಲಶೃತಿ ಸಿಕ್ಕಿದ್ದು, ನೊಂದ ಮಹಿಳಾ ಸಿಬ್ಬಂದಿಗೆ ನ್ಯಾಯ ಸಿಗುವ ಸೂಚನೆ ದೊರೆತಿದೆ.

ಕಳೆದ ಸೋಮವಾರದಂದು ಮೂಡಬಿದ್ರೆ ತಾಲೂಕಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ಷಷ್ಠಿ ಮಹೋತ್ಸವದ ದಿನ ದಲಿತ ಮಹಿಳೆಗೆ ಅವಮಾನಿಸಲಾಗಿತ್ತು. ಷಷ್ಠಿ ಮಹೋತ್ಸವದ ಹಿನ್ನಲೆಯಲ್ಲಿ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಬರುವ ಹಿನ್ನಲೆಯಲ್ಲಿ ಪೊಲೀಸರು ಭದ್ರತೆ ಕಲ್ಪಿಸಿದ್ದರು, ಈ ವೇಳೆ ಮೂಡಬಿದ್ರೆ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಕ್ಷೇತ್ರ ಒಳ ಪ್ರಾಂಗಣದಲ್ಲಿ ಕರ್ತವ್ಯ ನಿರತರಾಗಿದ್ದರು.

mng temple

ಆದರೆ ಅವರು ದಲಿತ ಮಹಿಳೆ ಎಂದು ತಿಳಿದ ಕ್ಷೇತ್ರದ ಅರ್ಚಕ ವೃಂದ ಆ ಮಹಿಳೆಯನ್ನು ನೀನು ಇಲ್ಲಿ ಡ್ಯೂಟಿ ಮಾಡಬೇಡ ಹೊರಗೆ ಹೋಗು ಎಂದು ಕಳಿಸಿದ್ದು, ಬಳಿಕ ಆಕೆ ಊಟಕ್ಕೆ ಬಂದಾಗಲೂ ಸಹ ಪಂಕ್ತಿ ಭೋಜನಕ್ಕೆ ಅವಕಾಶ ನೀಡದೆ ಪಂಕ್ತಿಯಿಂದಲೂ ಅರ್ಚಕ ವೃಂದ ಎಬ್ಬಿಸಿದ್ದರು. ಇದನ್ನು ಸ್ಥಳೀಯ ಭಕ್ತರು ವಿರೋಧಿಸಿದ್ದು, ಅವಮಾನವಾದ ಎಲ್ಲಾ ಪೊಲೀಸರು ಕ್ಷೇತ್ರದ ಭೋಜನ ಸ್ವೀಕರಿಸದೆ ಹೋಟೆಲ್ ನಲ್ಲಿ ಊಟ ಮಾಡಿದ್ದರು.

ಈ ಕುರಿತು ನಿಮ್ಮ ಪಬ್ಲಿಕ್ ಟಿವಿ ಮೊದಲು ಸುದ್ದಿ ಪ್ರಸಾರ ಮಾಡಿತ್ತು. ಈ ವರದಿಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದ್ದು ಸಾಕಷ್ಟು ಚರ್ಚೆಯೂ ಆಗಿತ್ತು. ಬಳಿಕ ಈ ವಿಚಾರ ಮುಜರಾಯಿ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರ ಗಮನಕ್ಕೆ ಬಂದು ತಕ್ಷಣ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದರು.

Police Jeep

ಇಂದು ಮುಜರಾಯಿ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಕಡಂದಲೆ ದೇವಸ್ಥಾನಕ್ಕೆ ಭೇಟಿ ನೀಡಿ ಅರ್ಚಕ ವೃಂದ ಹಾಗೂ ಆಡಳಿತ ಮಂಡಳಿಯಲ್ಲಿ ಮಾಹಿತಿ ಕಲೆ ಹಾಕಿದೆ. ಮುಜರಾಯಿ ಇಲಾಖೆಗೆ ಸೇರಿದ ಈ ದೇವಸ್ಥಾನದಲ್ಲಿ ಬಹಳ ವರ್ಷಗಳಿಂದಲೂ ನೀಚ ಪದ್ದತಿಗಳಿದ್ದು, ಇಂದಿಗೂ ಪಂಕ್ತಿಬೇದ ಇದೆ ಎನ್ನುವುದು ಅಧಿಕಾರಿಗಳಿಗೆ ಇಂದು ಖಚಿತಗೊಂಡಿದೆ. ಜೊತೆಗೆ ಈ ದೇವಸ್ಥಾನದಲ್ಲಿ ಎಷ್ಟು ಅರ್ಚಕರಿದ್ದಾರೆ, ಯಾವ ಯಾವ ಅರ್ಚಕರು ಏನು ಕೆಲಸ ಮಾಡುತ್ತಿದ್ದಾರೆ ಅನ್ನುವ ಮಾಹಿತಿಯೇ ಸರಿಯಾಗಿ ತನಿಖಾ ತಂಡಕ್ಕೆ ಸಿಕ್ಕಿಲ್ಲ.

ಇದರ ಜೊತೆಗೆ ಘಟನೆಯ ಬಗ್ಗೆಯೂ ಸಾಕಷ್ಟು ಮಾಹಿತಿ ಕಲೆ ಹಾಕಿರುವ ತನಿಖಾ ತಂಡ ಶೀಘ್ರದಲ್ಲೇ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಿದೆ. ಈ ಘಟನೆಯ ಬಗ್ಗೆ ಸರಿಯಾದ ತನಿಖೆ ನಡೆದು ಸರ್ಕಾರಕ್ಕೆ ವರದಿ ಸಲ್ಲಿಕೆಯಾದರೆ ಈ ದೇವಸ್ಥಾನದಲ್ಲಿದ್ದ ಅನಿಷ್ಟ ಪದ್ದತಿಗಳೆಲ್ಲ ಕೊನೆಗೊಳ್ಳಬಹುದು ಎನ್ನುವುದು ಸ್ಥಳೀಯ ಹಿರಿಯರೊಬ್ಬರ ಮಾತು.

TAGGED:dalitgovernmentMangalorepriestsPublic TVreportwomen policeಅರ್ಚಕರುದಲಿತಪಬ್ಲಿಕ್ ಟಿವಿಮಂಗಳೂರುಮಹಿಳಾ ಪೊಲೀಸ್ವರದಿಸರ್ಕಾರ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
4 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
5 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
6 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
7 hours ago

You Might Also Like

Plane Crash Modi tweet
Latest

ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ: ಮೋದಿ

Public TV
By Public TV
7 minutes ago
Bengaluru Chinnaswamy Stadium Stampede Case RCBs Marketing Head Nikhil Sosale Arrested in Airport
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

Public TV
By Public TV
31 minutes ago
Ahmedabad Air India Plane Crash
Crime

ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

Public TV
By Public TV
35 minutes ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
46 minutes ago
Air India Bird Hit Ahmedabad Plane Crash
Latest

ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

Public TV
By Public TV
48 minutes ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
53 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?