Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ಲೂ ಫಿಲ್ಮ್ ನೋಡಿರುವ ವ್ಯಕ್ತಿಗೆ ಮಂತ್ರಿ ಪದವಿ – ಕರಾವಳಿ ಬಿಜೆಪಿ ಕಾರ್ಯಕರ್ತರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಬ್ಲೂ ಫಿಲ್ಮ್ ನೋಡಿರುವ ವ್ಯಕ್ತಿಗೆ ಮಂತ್ರಿ ಪದವಿ – ಕರಾವಳಿ ಬಿಜೆಪಿ ಕಾರ್ಯಕರ್ತರ ಆಕ್ರೋಶ

Dakshina Kannada

ಬ್ಲೂ ಫಿಲ್ಮ್ ನೋಡಿರುವ ವ್ಯಕ್ತಿಗೆ ಮಂತ್ರಿ ಪದವಿ – ಕರಾವಳಿ ಬಿಜೆಪಿ ಕಾರ್ಯಕರ್ತರ ಆಕ್ರೋಶ

Public TV
Last updated: August 21, 2019 1:10 pm
Public TV
Share
3 Min Read
bjp minister yeddyurppa main
SHARE

– ಫ್ಲೈ ಓವರ್ ಮಾಡಲಾಗದವರು ಪಕ್ಷ ಕಟ್ಟುತ್ತಾರೆಯೇ?

ಮಂಗಳೂರು: ಕರಾವಳಿ ಜಿಲ್ಲೆಗಳಿಗೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಸುಳ್ಯ ಶಾಸಕ ಎಸ್.ಅಂಗಾರ ಸತತ ಆರು ಬಾರಿ ಶಾಸಕರಾಗಿ ತತ್ವ ಸಿದ್ಧಾಂತ ಪಾಲಿಸಿಕೊಂಡು ಬಂದಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಕರಾವಳಿಯಲ್ಲಿ ಒಬ್ಬ ಶಾಸಕನಿದ್ದರೂ, ಕಾಂಗ್ರೆಸ್ ಸಚಿವ ಸ್ಥಾನ ಕೊಟ್ಟಿತ್ತು. ಬಿಜೆಪಿಯ 15 ಶಾಸಕರಿದ್ದರೂ, ಒಂದೂ ಸ್ಥಾನ ಕೊಟ್ಟಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

MNG BJP AKROSHA AV 3 1

ಶಾಸಕನೇ ಅಲ್ಲದ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿರುವ ವಿಚಾರದಲ್ಲೂ ಟೀಕಿಸಿದ್ದು ಮತದಾರರೇ ತಿರಸ್ಕರಿಸಿರುವ, ಬ್ಲೂ ಫಿಲ್ಮ್ ನೋಡಿರುವ ವ್ಯಕ್ತಿಗೆ ಪದವಿ ನೀಡಿರುವುದು ಅಂಥ ದಂಧೆಯವರಿಗೆ ಉತ್ತೇಜನ ಕೊಟ್ಟಂತಲ್ಲವೇ? ಇಂಥ ಖರೀದ್ ಫರೋಕ್ ಸರ್ಕಾರ ಪತನವಾಗಲೆಂದು ಕಾರ್ಯಕರ್ತರು ಶಾಪ ಹಾಕಿದ್ದಾರೆ.

ಸಂಸದ ನಳಿನ್ ಕುಮಾರ್ ಅವರನ್ನು ರಾಜ್ಯಾಧ್ಯಕ್ಷ ಮಾಡಿರುವ ಬಗ್ಗೆಯೂ ಕೆಲವು ಕಾರ್ಯಕರ್ತರು ವ್ಯಂಗ್ಯವಾಗಿ ಪೋಸ್ಟ್ ಮಾಡಿದ್ದಾರೆ. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಬದಲಿಸಬೇಕೆಂದು ಕೂಗೆಬ್ಬಿಸಿದ್ದ ಗುಂಪು, ಮಂಗಳೂರಿನಲ್ಲಿ ಫ್ಲೈ ಓವರ್ ಮಾಡಲಾಗದವರು ಪಕ್ಷ ಕಟ್ಟುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಪ್ರವೀಣ್ ತೊಗಡಿಯಾ ಮಂಗಳೂರಿನಿಂದಲೇ ಹೊಸ ಪಕ್ಷ ಕಟ್ಟಲಿದ್ದಾರೆ ಎಂದು ಮೂದಲಿಸಿದ್ದಾರೆ.

MNG BJP AKROSHA AV 12

ಪಕ್ಷದ ಶಿಸ್ತಿನ ಸಿಪಾಯಿ ಎಂದೇ ಬಿಂಬಿಸಿಕೊಂಡಿದ್ದ ಸುಳ್ಯ ಶಾಸಕ ಎಸ್ ಅಂಗಾರ ಅವರು ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಮಂಗಳವಾರ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ವಿಡಿಯೋದಲ್ಲಿ ಮಾತನಾಡಿದ ಅವರು, ನಾನು ನಮ್ಮ ಕ್ಷೇತ್ರದಿಂದ ಸಚಿವನಾಗಬೇಕು ಎಂಬುವುದು ನಮ್ಮ ಜಿಲ್ಲೆ ಮತ್ತು ಕ್ಷೇತ್ರದ ಜನರ ಅಪೇಕ್ಷೆಯಾಗಿದೆ. ಆದರೆ ಕಳೆದ ಅನೇಕ ವರ್ಷಗಳಿಂದ ಸಂಘಟನೆಯಲ್ಲಿ ತತ್ವ ಮತ್ತು ಸಿದ್ಧಾಂತವನ್ನು ನಂಬಿ ನಾನು ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಇಂದು ತತ್ವ ನಿಷ್ಠೆಗಳಿಗೆ ಮಹತ್ವ ಇಲ್ಲವೆಂದರೆ ನಾವು ಏನು ಮಾಡುವುದಕ್ಕೆ ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

MNG BJP AKROSHA AV 20 1

ನಾವು ತತ್ವ ನಿಷ್ಠೆಯನ್ನು ಬಿಡುವುದಕ್ಕೆ ಆಗಲ್ಲ. ಸಂಘಟನೆಯ ಪ್ರಮುಖ ಭಾಗ ಮತ್ತು ಸಂಘಟನೆ ಯಶಸ್ವಿಯಾಗಿ ನಡೆಯಬೇಕಾದರೆ ತತ್ವ ನಿಷ್ಠೆಯೇ ಅತ್ಯಂತ ಪ್ರಮುಖವಾಗಿದೆ. ಆದ ಕಾರಣ ಇಂದು ನಮಗೆ ಸಚಿವ ಸ್ಥಾನ ಸಿಗದೇ ಇರಬಹುದು. ಆದರೆ ಸಂಘಟನೆಯಲ್ಲಿ ಯಾವುದೇ ರೀತಿಯ ಮನಸ್ತಾಪ ಇಲ್ಲ. ಕೆಲವು ಘಟನೆಗಳು ಈ ರೀತಿ ಆಗುತ್ತವೆ. ಅದಕ್ಕೆ ನಾವು ಏನು ಮಾಡುವುದಕ್ಕೆ ಆಗಲ್ಲ. ಇಂದು ನಮ್ಮ ಕ್ಷೇತ್ರದ ಜನರು ನಮ್ಮ ಮೇಲಿನ ಅಭಿಮಾನ ಗೌರವದಿಂದ ಬಂದಿದ್ದರು. ಹೀಗಾಗಿ ಅವರಿಗೆಲ್ಲ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದರು.

MNG BJP AKROSHA AV 6 1

 

ದಕ್ಷಿಣ ಕನ್ನಡದ ಲೋಕಸಭಾ ಕ್ಷೇತ್ರದಲ್ಲಿ ಬರುವ ಒಟ್ಟು 8 ಕ್ಷೇತ್ರಗಳಲ್ಲಿ 7 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದುಕೊಂಡಿದೆ. ಹರೀಶ್ ಪೂಂಜಾ(ಬೆಳ್ತಂಗಡಿ), ಉಮನಾಥ ಕೋಟ್ಯಾನ್(ಮೂಡಬಿದಿರೆ), ಡಾ. ಭರತ್ ಶೆಟ್ಟಿ( ಮಂಗಳೂರು ಉತ್ತರ), ವೇದವ್ಯಾಸ ಕಾಮತ್(ಮಂಗಳೂರು ದಕ್ಷಿಣ), ರಾಜೇಶ್ ನಾಯ್ಕ್(ಬಂಟ್ವಾಳ), ಸಂಜೀವ ಮಠದೂರ್(ಪುತ್ತೂರು) ಜಯಗಳಿಸಿದ್ದರು.

ರಾಜ್ಯದ ಹಿರಿಯ ಬಿಜೆಪಿ ಶಾಸಕರಾಗಿರುವ ಜೊತೆಗೆ ಜಿಲ್ಲೆಗೊಂದು ಉಸ್ತುವಾರಿ ಸಚಿವರಾಗಬೇಕಾದ ಹಿನ್ನೆಲೆಯಲ್ಲಿ ಈ ಬಾರಿ ಎಸ್‍ಸಿ ಮೀಸಲು ಕ್ಷೇತ್ರದಿಂದ ಜಯಗಳಿಸಿದ್ದ ಅಂಗಾರ ಅವರಿಗೆ ಮಂತ್ರಿ ಸ್ಥಾನ ಸಿಗುವುದು ಖಚಿತ ಎನ್ನುವ ಮಾತು ಕೇಳಿ ಬಂದಿತ್ತು. ಅಷ್ಟೇ ಅಲ್ಲದೇ ಬಿಜೆಪಿ ವಲಯದಲ್ಲೂ ಮಂತ್ರಿ ಸ್ಥಾನದ ಬಗ್ಗೆ ವಿಶ್ವಾಸದ ಮಾತು ಕೇಳಿ ಬಂದಿತ್ತು.

angara

ಅಂಗಾರ ಅವರು 1994 ರಿಂದ ಆರಂಭಗೊಂಡು 2018ರವರೆಗೆ ನಡೆದ ಚುನಾವಣೆಯಲ್ಲಿ ಸತತ ಆರು ಬಾರಿ ಗೆದ್ದಿದ್ದಾರೆ. ದೋಸ್ತಿ ಸರ್ಕಾರದಲ್ಲಿ ಮಂಗಳೂರು(ಹಿಂದೆ ಉಳ್ಳಾಲ ಆಗಿತ್ತು) ಕ್ಷೇತ್ರದಿಂದ ಗೆದ್ದಿದ್ದ ಯುಟಿ ಖಾದರ್ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿತ್ತು. ಅದಕ್ಕೂ ಮೊದಲು ಸಿದ್ದರಾಮಯ್ಯ ಸರ್ಕಾರದಲ್ಲಿ ರಾಮನಾಥ ರೈ, ಖಾದರ್ ಸಚಿವರಾಗಿದ್ದರೆ ಪುತ್ತೂರಿನಿಂದ ಗೆದ್ದಿದ್ದ ಶಕುಂತಲಾ ಶೆಟ್ಟಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.

TAGGED:Angara ScabinetMangaloreNalin Kumar Kateelyeddyurappaಅಂಗಾರನಳಿನ್ ಕುಮಾರ್ ಕಟೀಲ್ಮಂಗಳೂರುಯಡಿಯೂರಪ್ಪಸಚಿವ ಸಂಪುಟ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

anekal suicide
Bengaluru City

ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
56 seconds ago
Abu Dhabi
Latest

ಅಬುಧಾಬಿ, ದೋಹಾ, ರಿಯಾದ್ ಮೇಲೆ ಇರಾನ್‌ ದಾಳಿ – ದುಬೈನಲ್ಲೂ ಸ್ಫೋಟ

Public TV
By Public TV
37 minutes ago
siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
1 hour ago
Karnataka Second PUC Exam
Bengaluru City

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ – 96.87% ಹಾಜರಾತಿ ದಾಖಲು

Public TV
By Public TV
2 hours ago
Israel US Strikes on Iran
Latest

ಇಸ್ರೇಲ್-ಅಮೆರಿಕ ದಾಳಿ – ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿ 40 ಮಂದಿ ಸಾವು

Public TV
By Public TV
2 hours ago
Basavaraj Bommai
Districts

ರಾಜ್ಯ ಸರ್ಕಾರದ ಕುಸ್ತಿಯ ಗುದ್ದಾಟ ಬಜೆಟ್ ನಂತರ ಅಂತಿಮ ಘಟ್ಟಕ್ಕೆ ತಲುಪಲಿದೆ: ಬೊಮ್ಮಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?