Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಯಮತ್ತೂರು ಬಾಂಬ್‌ ಸ್ಫೋಟ, ಪಿಎಫ್‌ಐ ನಾಯಕರ ಜೊತೆ ಬಾಂಬರ್‌ ಶಾರೀಕ್‌ಗೆ ನಂಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕೊಯಮತ್ತೂರು ಬಾಂಬ್‌ ಸ್ಫೋಟ, ಪಿಎಫ್‌ಐ ನಾಯಕರ ಜೊತೆ ಬಾಂಬರ್‌ ಶಾರೀಕ್‌ಗೆ ನಂಟು

Dakshina Kannada

ಕೊಯಮತ್ತೂರು ಬಾಂಬ್‌ ಸ್ಫೋಟ, ಪಿಎಫ್‌ಐ ನಾಯಕರ ಜೊತೆ ಬಾಂಬರ್‌ ಶಾರೀಕ್‌ಗೆ ನಂಟು

Public TV
Last updated: November 23, 2022 11:24 am
Public TV
Share
3 Min Read
Mangaluru Blast Accused Shariq Coimbatore Connection PFI Link
SHARE

ಮಂಗಳೂರು: ಉಗ್ರರ ಕೃತ್ಯಕ್ಕೆ ಸಹಕಾರ ನೀಡಿದ ಆರೋಪದಲ್ಲಿ ಭಾಗಿಯಾಗಿ ನಿಷೇಧಕ್ಕೆ ಒಳಗಾಗಿರುವ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ಸಂಘಟನೆಯ ನಾಯಕರ ಜೊತೆ ಶಾರೀಕ್(Shariq) ನಂಟು ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌(Mangaluru Blast Case) ಸ್ಫೋಟಿಸಿದ ಪ್ರಕರಣದ ಆರೋಪಿ ಮೊಹಮ್ಮದ್‌ ಶಾರೀಕ್‌ಗೂ ತಮಿಳುನಾಡಿನ ಕೊಯಮತ್ತೂರಿನಲ್ಲಿ(Coimbatore) ದೀಪಾವಳಿ ಸಮಯದಲ್ಲಿ ಅ.23 ರಂದು ಸಂಗಮೇಶ್ವರ ದೇವಸ್ಥಾನ ಬಳಿಯ ನಡೆದಿದ್ದ ಕಾರು ಬಾಂಬ್‌ ಸ್ಫೋಟ ಪ್ರಕರಣಕ್ಕೂ(Car Bomb Blast)ನಂಟು ಇರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

cooker blast Mangaluru auto rickshaw 6

ಅನುಮಾನ ಯಾಕೆ?
ಸಂಗಮೇಶ್ವರ ದೇವಸ್ಥಾನ ಬಳಿ ಸ್ಫೋಟ ಸಂಭವಿಸುವುದಕ್ಕೆ ಒಂದೂವರೆ ತಿಂಗಳ ಮೊದಲು ಶಾರೀಕ್‌ ಕೊಯಮತ್ತೂರಿಗೆ ಹೋಗಿದ್ದ ವಿಚಾರ ಬೆಳಕಿಗೆ ಬಂದಿದೆ. ಅಲ್ಲೂ ಸುಳ್ಳು ಮಾಹಿತಿ ನೀಡಿ ಹಿಂದೂ ಎಂದು ಪರಿಚಯಿಸಿಕೊಂಡು ಮೂರು ನಾಲ್ಕು ದಿನ ಅಲ್ಲಿಯೇ ಬಾಡಿಗೆ ಕೊಠಡಿಯಲ್ಲಿ ನೆಲೆಸಿದ್ದ. ಇಲ್ಲಿ ಬಳ್ಳಾರಿಯ ಸಂಡೂರಿನ ಅರುಣ್‌ ಕುಮಾರ್‌ ಗಾವಳಿ ಅವರ ಆಧಾರ್‌ ಕಾರ್ಡ್‌ ನೀಡಿದ್ದ. ಅರುಣ್‌ ಕುಮಾರ್‌ ಗಾವಳಿ ಅವರನ್ನು ಪೊಲೀಸರು ವಿಚಾರಣೆ ನಡೆಸಿದಾಗ ಅವರ ಆಧಾರ್‌ ಕಾರ್ಡ್ 6 ತಿಂಗಳ ಹಿಂದೆ ಕಳವಾಗಿದ್ದು ಗೊತ್ತಾಗಿತ್ತು. ಅವರು ಕೊಯಮತ್ತೂರಿಗೆ ಹೋಗಿಯೇ ಇರಲಿಲ್ಲ ವಿಚಾರ ದೃಢಪಟ್ಟಿತ್ತು.

ಕೊಯಮತ್ತೂರು ಬಾಂಬ್‌ ಸ್ಫೋಟದ ಆರೋಪಿಗಳಿಗೂ ಶಾರಿಕ್‌ಗೂ ನಂಟು ಇರುವ ಬಗ್ಗೆ ಪೊಲೀಸರಿಗೆ ಈಗ ಬಲವಾದ ಸಂಶಯ ಇದೆ. ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟದಲ್ಲಿ ಶಾರೀಕ್‌ ಗಾಯಗೊಂಡ ಮಾಹಿತಿ ಸಿಗುತ್ತಿದ್ದಂತೆಯೇ ಕೊಯಮತ್ತೂರು ಪೊಲೀಸರ ತಂಡವೂ ಮಂಗಳೂರಿಗೆ ಆಗಮಿಸಿದೆ.

cooker blast Mangaluru auto rickshaw 1

ಕೊಯಮತ್ತೂರು ನಂಟು ಏನು?
ಕೊಯಮತ್ತೂರಿನಲ್ಲಿ ಪಿಎಫ್‌ಐ ನಾಯಕರನ್ನು ಶಾರೀಕ್ ಭೇಟಿಯಾಗಿದ್ದ ಶಂಕೆ ವ್ಯಕ್ತವಾಗಿದೆ. ಜೊತೆಗೆ 1998ರ ಕೊಯಮತ್ತೂರು ಬಾಂಬ್ ಬ್ಲಾಸ್ಟ್ ರೂವಾರಿ ಎಸ್‌‌.ಎ.ಬಾಷಾ ಸಂಬಂಧಿ ಮುಹಮ್ಮದ್ ತಲ್ಕನನ್ನು ಭೇಟಿಯಾದ ಅನುಮಾನ ಬಂದಿದೆ. ಮೋಸ್ಟ್ ವಾಂಟೆಡ್‌ ಅಬ್ದುಲ್ ಮತೀನ್‌ನಿಂದ ಮುಹಮ್ಮದ್ ತಲ್ಕ ಪರಿಚಯವಾಗಿರಬಹುದು ಎನ್ನಲಾಗುತ್ತಿದೆ. ತಮಿಳುನಾಡು ಹಿಂದೂ ಮುಖಂಡನ ಹತ್ಯೆಯಲ್ಲಿ ಮತೀನ್ ಹೆಸರು ಕೇಳಿ ಬಂದಿತ್ತು. ತಮಿಳುನಾಡಿನ ಹಲವು ಉಗ್ರ ಜಾಲ ಹೊಂದಿದ್ದವರ ಜೊತೆ ಮತೀನ್‌ಗೆ ಸಂಪರ್ಕ ಇದ್ದು ಆತನೇ ಶಾರೀಕ್‌ಗೆ ಪರಿಚಯ ಮಾಡಿದ್ದಾನೆ ಎಂಬ ಅನುಮಾನ ಬಂದಿದೆ. ಈ ಅನುಮಾನ ಬಂದ ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಷ್ಟೇ ಅಲ್ಲದೇ ಶಾರೀಕ್‌ ತಮಿಳುನಾಡಿಗೆ ಹೋಗಿದ್ದಾಗ ಅಲ್ಲಿ ತಂಗಲು ಪಿಎಫ್‌ಐ ನಾಯಕರು ಶಾರೀಕ್‌ಗೆ ಸಹಾಯ ಮಾಡಿರಬಹುದು ಎಂಬ ಶಂಕೆ ಬಂದಿದೆ. ಇದನ್ನೂ ಓದಿ: ಉಗ್ರ ಕೃತ್ಯಕ್ಕೆ ಹಿಂದುತ್ವ ಹಣೆಪಟ್ಟಿಗೆ ಸಂಚು – ಮುಂಬೈ ಕಸಬ್‌ನಂತೆ ದಾಳಿಗೆ ಬಾಂಬರ್‌ ಶಾರೀಕ್ ಸ್ಕೆಚ್‌

cooker blast Mangaluru auto rickshaw 3

ಮಾಧ್ಯಮಗಳ ಜೊತೆ ಮಾತನಾಡಿದ್ದ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌, ಕೊಯಮತ್ತೂರಿನ ಸ್ಫೋಟ ಪ್ರಕರಣದ ಆಯಾಮದಲ್ಲೂ ತನಿಖೆ ನಡೆಯಲಿದೆ. ಮಂಗಳೂರಿನ ಘಟನೆ ನಡೆಯುವುದಕ್ಕೆ ಮುನ್ನ ಆರೋಪಿ ಯಾವೆಲ್ಲ ಪ್ರದೇಶಗಳಿಗೆ ಭೇಟಿ ನೀಡಿದ್ದ, ಯಾರನ್ನೆಲ್ಲ ಭೇಟಿ ಮಾಡಿದ್ದ ಎಂಬ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದಿದ್ದರು.

ತಮಿಳಿನಲ್ಲಿ ಮಾತನಾಡುತ್ತಿದ್ದ:
ಮೈಸೂರಿನಲ್ಲಿ ಮೊಬೈಲ್‌ ತರಬೇತಿ ಕೇಂದ್ರದಲ್ಲಿದ್ದಾಗ ಶಾರೀಕ್‌ ಮೊಬೈಲ್‌ನಲ್ಲಿ ತಮಿಳು ಭಾಷೆಯಲ್ಲಿ ಮಾತನಾಡುತ್ತಿದ್ದ. ಧಾರವಾಡ ಮೂಲದ ನಿನಗೆ ತಮಿಳು ಹೇಗೆ ಬರುತ್ತದೆ ಎಂದು ಪ್ರಶ್ನಿಸಿದ್ದಕ್ಕೆ ಆತ ನಾನು ಕೆಲ ಸಮಯ ತಮಿಳುನಾಡಿನಲ್ಲಿ ನೆಲೆಸಿದ್ದೆ. ಅಲ್ಲೂ ನನಗೆ ಸ್ನೇಹಿತರಿದ್ದಾರೆ. ಅವರ ಜೊತೆ ನಾನು ಮಾತನಾಡುತ್ತಿದ್ದೇನೆ ಎಂದು ಹೇಳಿದ್ದ.

1998ರಲ್ಲಿ ಏನಾಗಿತ್ತು?
ಫೆ.14 ಶನಿವಾರ ಕೊಯಮತ್ತೂರಿನ 11 ಜಾಗದಲ್ಲಿ 12 ಬಾಂಬ್‌ ಸ್ಫೋಟಗೊಂಡಿತ್ತು. ಈ ದಾಳಿಯಲ್ಲಿ 58 ಮಂದಿ ಮೃತಪಟ್ಟಿದ್ದರೆ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 12 ಕಿ.ಮೀ ಅಂತರದಲ್ಲಿ ಸ್ಫೋಟ ಸಂಭವಿಸಿತ್ತು.

Live Tv
[brid partner=56869869 player=32851 video=960834 autoplay=true]

TAGGED:Coimbatore BlastMangaluru BlastPFIShariqಕುಕ್ಕರ್‌ ಬಾಂಬ್‌ಕೊಯಮತ್ತೂರುತಮಿಳುನಾಡುಮಂಗಳೂರು ಬ್ಲ್ಯಾಸ್ಟ್‌ಶಾರೀಕ್‌
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Sherfane Rutherford
Cricket

ರುದರ್‌ಫೋರ್ಡ್‌ ಬೆಂಕಿ ಬ್ಯಾಟಿಂಗ್‌ಗೆ ಇಂಗ್ಲೆಂಡ್‌ ಬರ್ನ್‌!

Public TV
By Public TV
52 minutes ago
HAL Techie Murder
Bengaluru City

ಹಣಕಾಸಿನ ವಿಚಾರಕ್ಕಾಗಿ ಡಬಲ್ ಮರ್ಡರ್ – ತಂದೆ, ತಾಯಿಯನ್ನೇ ಕೊಂದ ಟೆಕ್ಕಿ ಅರೆಸ್ಟ್

Public TV
By Public TV
1 hour ago
Bengaluru Road Rage
Bengaluru City

ಗಾಡಿ ಟಚ್ ಆಗಿದ್ದಕ್ಕೆ ಕಿರಿಕ್ – ಕಾರ್‌ ಬಾನೆಟ್ ಮೇಲೆ ಗೂಡ್ಸ್ ಚಾಲಕನನ್ನು 1 ಕಿ.ಮೀ ಎಳೆದೊಯ್ದು ದುರ್ವರ್ತನೆ

Public TV
By Public TV
2 hours ago
9 year old girl dies in accident belagavi
Belgaum

ಅಪಘಾತದಲ್ಲಿ 9 ವರ್ಷದ ಬಾಲಕಿ ಸಾವು

Public TV
By Public TV
2 hours ago
Byrati Basavaraj 1
Bengaluru City

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬೈರತಿ ಬಸವರಾಜ್

Public TV
By Public TV
2 hours ago
Cattle fair begins in Motagi Bagalkote 2
Bagalkot

ಬಾಗಲಕೋಟೆ ಮೋಟಗಿಯಲ್ಲಿ ಶುರುವಾಗಿದೆ ಜಾನುವಾರು ಜಾತ್ರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?