Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೂಲಿಬೆಲೆಗೆ ಮೋದಿ ಪರ ನಿಂತು ಸಾಕಾಗಿರಬಹುದು- ರಮಾನಾಥ ರೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಸೂಲಿಬೆಲೆಗೆ ಮೋದಿ ಪರ ನಿಂತು ಸಾಕಾಗಿರಬಹುದು- ರಮಾನಾಥ ರೈ

Dakshina Kannada

ಸೂಲಿಬೆಲೆಗೆ ಮೋದಿ ಪರ ನಿಂತು ಸಾಕಾಗಿರಬಹುದು- ರಮಾನಾಥ ರೈ

Public TV
Last updated: October 2, 2019 6:22 pm
Public TV
Share
2 Min Read
sulibele rai
SHARE

ಮಂಗಳೂರು: ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಪ್ರಧಾನಿ ನರೇಂದ್ರ ಮೋದಿ ಪರ ನಿಂತು ಸಾಕಾಗಿರಬಹುದು ಎಂದು ಮಾಜಿ ಸಚಿವ ರಮಾನಾಥ ರೈ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಸಂಸದರ ವಿರುದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವಿಚಾರ ಸಂಬಂಧ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಲಿಬೆಲೆ ಈ ಹಿಂದೆ ಹೇಳಿದ ಯಾವುದೇ ಮಾತು ಅನುಷ್ಠಾನ ಆಗಿಲ್ಲ. ಕಪ್ಪು ಹಣ ಸೇರಿದಂತೆ ಇತರ ಯೋಜನೆಗಳು ಸುಳ್ಳಾಗಿದೆ. ಸೂಲಿಬೆಲೆ ಹೇಳೋದೆಲ್ಲಾ ಸುಳ್ಳು ಎಂದು ಜನರಿಗೆ ಆಗಿದೆ. ಹೀಗಾಗಿ ತಾನು ಹೇಳಿದ್ದು ಸುಳ್ಳಾಯ್ತು ಎಂದು ಸೂಲಿಬೆಲೆ ಆತ್ಮಸಾಕ್ಷಿಗೆ ಅರ್ಥವಾಗಿರಬೇಕು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ವ್ಯಕ್ತಪಡಿಸಿರಬಹುದು ಎಂದು ತಿಳಿಸಿದ್ದಾರೆ.

rai e1570020501793

ಬಿಜೆಪಿ ಸಂದರ ವಿರುದ್ಧ ಚಕ್ರವರ್ತಿ ಕಿಡಿ:
ಸೆ.30 ರಂದು ಈ ಸಂಬಂಧ ತಮ್ಮ ಯುವಲೈವ್ ವೆಬ್‍ಸೈಟಿನಲ್ಲಿ ಬರಹ ಪ್ರಕಟಿಸಿರುವ ಸೂಲಿಬೆಲೆ, ನಿಜ ಹೇಳಬೇಕೆಂದರೆ ಪ್ರವಾಹದ ನಂತರವೇ ಬೆಂಗಳೂರಿನ ಸಂಸದ ಅನಂತ್ ಕುಮಾರ್ ಅವರ ಅನುಪಸ್ಥಿತಿ ಎದ್ದು ಕಾಣುತ್ತಿರುವುದು. ಕೇಂದ್ರ ಸರ್ಕಾರದಲ್ಲಿ ಕರ್ನಾಟಕದ ದನಿಯನ್ನು ಪ್ರಭಾವಿಯಾಗಿ ಮಂಡಿಸಬಲ್ಲ ಸಂಸದರೇ ಇಲ್ಲವೇನೋ ಎನಿಸುತ್ತದೆ ಬೇಸರ ವ್ಯಕ್ತಪಡಿಸಿದ್ದರು.

ಕರ್ನಾಟಕದ ಒಳಿತಿಗಾಗಿ ಕೇಂದ್ರದೊಂದಿಗೆ ಗುದ್ದಾಡಿ ಬೇಕಾದ್ದನ್ನು ಪಡೆದುಕೊಂಡು ಬರಬಲ್ಲ ಸಾಮರ್ಥ್ಯ ಯಾವ ಸಂಸದರಿಗೂ ಇಲ್ಲವಲ್ಲ ಎಂಬುದೇ ದುಃಖದ ಸಂಗತಿ. ಮತ್ತು ಇವರು ಒಬ್ಬಿಬ್ಬರಲ್ಲ, ಬರೋಬ್ಬರಿ 25 ಜನ. ಇನ್ನುಳಿದ ಮೂವರಲ್ಲಿ ಒಬ್ಬರು ಈಗ ತಾನೇ ಸಂಸತ್ತು ಪ್ರವೇಶಿಸಿರುವ ಸುಮಲತಾ ಆದರೆ ಪ್ರಜ್ವಲ್ ಅವರದ್ದೂ ಹೆಚ್ಚು ಕಡಿಮೆ ಅದೇ ಸ್ಥಾನ. ಇವರುಗಳಿಗೆ ಸಂಸತ್ತಿನ ಕಾರ್ಯವೈಖರಿಯ ಅರಿವಾಗುವುದರೊಳಗೆ ಅದರ ಕಾರ್ಯ ಅವಧಿ ಮುಗಿದು ಹೋಗಿರುತ್ತದೆ. ಕಾಂಗ್ರೆಸ್ಸಿನ ಒಬ್ಬೇ ಒಬ್ಬ ಸಂಸದ ಅಣ್ಣನನ್ನು ಬಿಡಿಸಿಕೊಂಡು ಬರುವುದರಲ್ಲಿ ತಿಪ್ಪರಲಾಗ ಹಾಕುತ್ತಿದ್ದಾರೆ. ಹೀಗಾಗಿ ಕರ್ನಾಟಕದ ಪರವಾಗಿ, ಕನ್ನಡದ ಪರವಾಗಿ ಸಮರ್ಥವಾಗಿ ದನಿ ಎತ್ತಬಲ್ಲವರೇ ಇಲ್ಲವಾಗಿಬಿಟ್ಟಿದ್ದಾರೆ ಎಂದಿದ್ದರು. ಇದನ್ನೂ ಓದಿ: ಮೋದಿ ಅಮೆರಿಕಗೆ ಹೋದ್ರೆ ಇಲ್ಲಿ ಯಾರೂ ಊಟ, ತಿಂಡಿ ಮಾಡಲ್ವಾ – ಸಂಸದರಿಗೆ ಸೂಲಿಬೆಲೆ ಪ್ರಶ್ನೆ

SULIBELE PHOTO

ಅನಂತ್‍ಕುಮಾರ್ ಇದ್ದಾಗ ಕೇಂದ್ರದ ಇತರೆ ಮಂತ್ರಿಗಳೊಂದಿಗೆ ಅವರು ಬೆಳೆಸಿಕೊಂಡಿದ್ದ ಸಂಬಂಧ ಅವರ ಮಾತಿಗೆ ಗೌರವ ತಂದುಕೊಡುವಂತಿತ್ತು. ಅವರಷ್ಟೇ ಬಾರಿ ಸಂಸದರಾಗಿದ್ದರೂ ಅಂಥದ್ದೊಂದು ಬಾಂಧವ್ಯವನ್ನೇ ಬೆಳೆಸಿಕೊಳ್ಳದ ಅನೇಕರನ್ನು ಕಂಡಾಗ ಸಂಕಟವೆನಿಸುತ್ತದೆ. ಕರ್ನಾಟಕದಿಂದಲೇ ಮಂತ್ರಿಗಳಾದವರು ಎಷ್ಟೋ ಜನರಿದ್ದಾರೆ. ಆದರೆ ಪ್ರತ್ಯಕ್ಷ ಕೇಂದ್ರದಲ್ಲಿ ಪ್ರಭಾವ ಬೀರುವ ವಿಚಾರ ಬಂದಾಗ ಕೆಲಸಕ್ಕೆ ಬಾರದವರಾಗಿ ಬಿಡುತ್ತಾರಲ್ಲಾ ಎಂಬುದೇ ನೋವಿನ ಸಂಗತಿ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದರು.

ನಮ್ಮ ಸಂಸದರು ತಮಿಳುನಾಡಿನಿಂದ, ಕೇರಳದ ಸಂಸದರಿಂದ ಕಲಿಯುವುದು ಸಾಕಷ್ಟಿದೆ. ಅವರು ಹಠಕ್ಕೆ ಬಿದ್ದಾದರೂ ಕೊನೆಗೆ ರಾಜಿನಾಮೆ ಕೊಟ್ಟಾದರೂ ತಮ್ಮ ರಾಜ್ಯದ ಹಿತಾಸಕ್ತಿ ಉಳಿಸಿಕೊಳ್ಳಲು ಕೇಂದ್ರದ ಸಹಕಾರವನ್ನು ತರುತ್ತಾರೆ. ನಾಡಿನ ಗೌರವವನ್ನು ರಾಷ್ಟ್ರಮಟ್ಟದಲ್ಲಿ ಬಲಿಕೊಡಲು ಅವರೆಂದಿಗೂ ಸಿದ್ಧರಾಗುವುದಿಲ್ಲ. ಮೋದಿಯವರ ಪ್ರತಿಯೊಂದು ನಡೆಯಲ್ಲಿಯೂ ಭವಿಷ್ಯದ ದೃಷ್ಟಿಕೋನ ಇದ್ದೇ ಇರುತ್ತದೆ ಎಂಬುದನ್ನು ನಂಬಿಕೊಂಡಿರುವ ಅನೇಕರಿಗೆ ಈ ನಿರ್ಲಕ್ಷ್ಯದ ಹಿಂದಿನ ದೃಷ್ಟಿ ಖಂಡಿತ ಅರಿವಾಗುತ್ತಿಲ್ಲ. ಗೊತ್ತಿದ್ದವರು ತಿಳಿಸಿಕೊಡಬೇಕು. ಒಂದೋ ಕರ್ನಾಟಕದ ಜನತೆಗೆ, ಇಲ್ಲವೇ ಸ್ವತಃ ಮೋದಿಗೆ ಎಂದು ನೇರವಾಗಿ ಬರೆದು ಚಾಟಿ ಬೀಸಿದ್ದರು.

modi 1

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆಯವರು ನರೇಂದ್ರ ಮೋದಿ ಅವರ ಪರವಾಗಿ ರಾಜ್ಯವಾಪಿ ಪ್ರಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ಚುನಾವಣೆ ಹತ್ತಿರ ಬಂದಾಗ ಸಮಸ್ಯೆ ಇದೆ ಎಂದು ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನೆ ಮಾಡುವುದಲ್ಲ. ಮತವನ್ನು ಚಲಾಯಿಸಿ ಮೌನವಾಗಿ ಕುಳಿತುಕೊಳ್ಳುವುದಲ್ಲ. ಆರಂಭದಿಂದಲೇ ಸಮಸ್ಯೆಯ ಬಗ್ಗೆ ಒತ್ತಡ ಹೇರಿ ಜನಪ್ರತಿನಿಧಿಗಳಿಂದ ಕೆಲಸ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದರು.

TAGGED:bjpchakravarthysulibelecongressex-ministerfloodrelief fundsMangalurumpnarendra modiRamanath Raiಕಾಂಗ್ರೆಸ್ಚಕ್ರವರ್ತಿ ಸೂಲಿಬೆಲೆನರೇಂದ್ರ ಮೋದಿನೆರೆ ಪರಿಹಾರಬಿಜೆಪಿಮಂಗಳೂರುಮಾಜಿ ಸಚಿವ ರಮಾನಾಥ ರೈಸಂಸದರು
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

BY Vijayendra 1
Bengaluru City

ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

Public TV
By Public TV
30 minutes ago
Bidar Boy Death
Bidar

ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

Public TV
By Public TV
38 minutes ago
Modi 4
Latest

ತುರ್ತು ಲ್ಯಾಂಡಿಂಗ್ ಸೌಲಭ್ಯ ಉದ್ಘಾಟನೆ; C-130J ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದ ಮೋದಿ

Public TV
By Public TV
42 minutes ago
Chikkaballapura Man Attempts Suicide By Writing Death Note Against Tahsildar
Chikkaballapur

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Public TV
By Public TV
1 hour ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ

Public TV
By Public TV
2 hours ago
Chikkaballapura 1
Chikkaballapur

ಅಧಿಕಾರ ವ್ಯಾಪ್ತಿ ಮೀರಿ ವಾಹನ ತಪಾಸಣಾ ವರದಿ – 5‌,000 ಲಂಚಕ್ಕೆ ಕಣ್ಮುಚ್ಚಿ ಸಹಿ ಹಾಕಿದ್ರಾ RTO ಇನ್ಸ್‌ಪೆಕ್ಟರ್?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?