ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ನೇಣುಬಿಗಿದು ಆತ್ಮಹತ್ಯೆ

Public TV
1 Min Read
mangaluru

ಮಂಗಳೂರು: ನಗರದ ಕಂಕನಾಡಿ ಬಳಿಯ ಅಡುಮರೋಳಿಯಲ್ಲಿ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

mangaluru 1

ಅಡು ಮರೋಳಿ ನಿವಾಸಿಯಾಗಿರುವ ಹುಬ್ಬಳ್ಳಿ (Hubballi) ಮೂಲದ ಮಲ್ಲಿಕಾರ್ಜುನ್ ಹಾಗೂ ಮಂಗಳೂರು (Mangaluru) ಮೂಲದ ಸೌಮ್ಯ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿರುವ ಈ ದಂಪತಿ ಮನೆಯಲ್ಲಿ ಇಬ್ಬರೇ ವಾಸವಾಗಿದ್ದರು. ಇಂದು ಪತಿ ಮಲ್ಲಿಕಾರ್ಜುನ್ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಪತ್ನಿ ಸೌಮ್ಯ ಸಂಬಂಧಿಕರಿಗೆ ವಿಷಯ ತಿಳಿಸಿ ಬಳಿಕ ಆಕೆಯೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಅನಿಲ್ ದೇಶಮುಖ್ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ನಾಳೆ ವಿಚಾರಣೆ

ಮಲ್ಲಿಕಾರ್ಜುನ್ ಫ್ರೀಲಾನ್ಸ್ ವೆಚ್ ಡಿಸೈನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೂ ಸೌಮ್ಯ ಐಟಿಐ ಕಾಲೇಜು ಉಪನ್ಯಾಸಕಿ ಆಗಿ ಕೆಲಸ ಮಾಡುತ್ತಿದ್ದರು. ಹಣಕಾಸಿನ ಸಮಸ್ಯೆ ಆತ್ಮಹತ್ಯೆಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದ್ದು ಕಂಕನಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾರು ನಿಲ್ಲಿಸಿ ಅಭಿಮಾನಿಯಿಂದ ತಾಯಿಯ ಫೋಟೋ ಸ್ವೀಕರಿಸಿದ ಮೋದಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *